Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಯುಪಿಐ ವ್ಯವಸ್ಥೆಯು ಹಲವು...

ಭಾರತದ ಯುಪಿಐ ವ್ಯವಸ್ಥೆಯು ಹಲವು ದೇಶಗಳನ್ನು ಆಕರ್ಷಿಸಿದೆ: 'ಮನ್ ಕಿ ಬಾತ್' ನಲ್ಲಿ ಪ್ರಧಾನಿ ಮೋದಿ

26 Feb 2023 5:22 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಭಾರತದ ಯುಪಿಐ ವ್ಯವಸ್ಥೆಯು ಹಲವು ದೇಶಗಳನ್ನು ಆಕರ್ಷಿಸಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಹೊಸದಿಲ್ಲಿ: ವಿಶ್ವದ ಹಲವು ದೇಶಗಳು ಭಾರತದ ಯುಪಿಐ ವ್ಯವಸ್ಥೆಯಿಂದ ಆಕರ್ಷಿತಗೊಂಡಿವೆ ಎಂದು ದೇಶದ ಡಿಜಿಟಲ್ ಸಾಧನೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ತನ್ನ ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನ 98ನೇ ಆವೃತ್ತಿಯಲ್ಲಿ ಮಾತನಾಡುತ್ತಿದ್ದ ಮೋದಿ, ಯುಪಿಐ (ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್) ವ್ಯವಸ್ಥೆ ಮತ್ತು ಇ-ಸಂಜೀವನಿ ಆ್ಯಪ್ ಡಿಜಿಟಲ್ ಇಂಡಿಯಾದ ಶಕ್ತಿಗೆ ಉಜ್ವಲ ನಿದರ್ಶನಗಳಾಗಿವೆ ಎಂದರು. ವಿಶ್ವದ ಹಲವು ದೇಶಗಳು ಭಾರತದ ಯುಪಿಐ ವ್ಯವಸ್ಥೆಯಿಂದ ಆಕರ್ಷಿತಗೊಂಡಿವೆ. ಕೆಲವೇ ದಿನಗಳ ಹಿಂದೆ ಭಾರತ ಮತ್ತು ಸಿಂಗಾಪುರ್ ನಡುವೆ ಯುಪಿಐ-ಪೇನೌ ಲಿಂಕ್ ಆರಂಭಗೊಂಡಿದೆ. ಈಗ ಸಿಂಗಾಪುರ ಮತ್ತು ಭಾರತದಲ್ಲಿಯ ಜನರು ತಮ್ಮ ಆಯಾ ದೇಶಗಳಲ್ಲಿ ಮಾಡುವ ರೀತಿಯಲ್ಲಿಯೇ ತಮ್ಮ ಮೊಬೈಲ್ ಫೋನ್ಗಳ ಮೂಲಕ ಉಭಯ ರಾಷ್ಟ್ರಗಳ ನಡುವೆ ಹಣವನ್ನು ವರ್ಗಾಯಿಸಬಹುದು ಎಂದು ಹೇಳಿದರು.

‘ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಇ-ಸಂಜೀವನಿ ಆ್ಯಪ್ ಜನತೆಗೆ ದೊಡ್ಡ ವರದಾನವಾಗಿ ಸಾಬೀತಾಗಿದ್ದನ್ನು ನಾವು ನೋಡಿದ್ದೇವೆ’ ಎಂದು ಹೇಳಿದ ಮೋದಿ, ‘ಈ ಆ್ಯಪ್ ಮೂಲಕ ನೀವು ಇರುವಲ್ಲಿಂದಲೇ ಟೆಲಿಕನ್ಸಲ್ಟೇಷನ್ ಅಥವಾ ವೀಡಿಯೊ ಕಾನ್ಫರೆನ್ಸ್ ಮೂಲಕ ನಿಮ್ಮ ಅನಾರೋಗ್ಯದ ಕುರಿತು ವೈದ್ಯರೊಂದಿಗೆ ಸಮಾಲೋಚಿಸಬಹುದು. ಈವರೆಗೆ ಈ ಆ್ಯಪ್ ಅನ್ನು ಬಳಸುತ್ತಿರುವ ಟೆಲಿಕನ್ಸಲ್ಟಂಟ್ಗಳ ಸಂಖ್ಯೆ 10 ಕೋಟಿಯನ್ನು ದಾಟಿದೆ. ರೋಗಿ ಮತ್ತು ವೈದ್ಯರ ನಡುವಿನ ಈ ಅದ್ಭುತ ಬಾಂಧವ್ಯವು ದೊಡ್ಡ ಸಾಧನೆಯಾಗಿದೆ. ಈ ಸಾಧನೆಗಾಗಿ ಈ ಸೌಲಭ್ಯವನ್ನು ಬಳಸಿಕೊಂಡ ಎಲ್ಲ ವೈದ್ಯರು ಮತ್ತು ರೋಗಿಗಳನ್ನು ನಾನು ಅಭಿನಂದಿಸುತ್ತೇನೆ. ಭಾರತದ ಜನರು ಹೇಗೆ ತಂತ್ರಜ್ಞಾನವನ್ನು ತಮ್ಮ ಬದುಕಿನ ಭಾಗವನ್ನಾಗಿಸಿಕೊಂಡಿದ್ದಾರೆ ಎನ್ನುವುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ ’

ಕಾರ್ಯಕ್ರಮದಲ್ಲಿ ಸಿಕ್ಕಿಮ್ ನ ವೈದ್ಯ ಡಾ.ಮದನ ಮಣಿ ಅವರೊಂದಿಗೆ ಮಾತನಾಡಿದ ಮೋದಿ ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯ ನಿವಾಸಿ ಮದನ ಮೋಹನ ಅವರೊಂದಿಗೂ ಸಂವಾದಿಸಿದರು. ಈ ವೇಳೆ ಮದನ ಮೋಹನ ತಾನು ಓರ್ವ ರೋಗಿಯಾಗಿ ಇ-ಸಂಜೀವನಿ ಆ್ಯಪ್ನ ಮೂಲಕ ಟೆಲಿಕನ್ಸಲ್ಟೇಷನ್ನ ಪ್ರಯೋಜನವನ್ನು ಪಡೆದುಕೊಂಡ ಅನುಭವವನ್ನು ಹಂಚಿಕೊಂಡರು. ಭಾರತೀಯ ಆಟಿಕೆಗಳು ಮತ್ತು ಕಥೆ ಹೇಳುವ ರೂಪಗಳ ಕುರಿತೂ ಪ್ರಧಾನಿ ಮಾತನಾಡಿದರು.

ಭಾರತೀಯರು ‘ಮನ್ ಕಿ ಬಾತ್ ’ಅನ್ನು ಸಾರ್ವಜನಿಕ ಸಹಭಾಗಿತ್ವದ ಅಭಿವ್ಯಕ್ತಿಯನ್ನಾಗಿ ಅದ್ಭುತ ವೇದಿಕೆಯನ್ನಾಗಿ ಮಾಡಿದ್ದಾರೆ. ‘ಮನ್ ಕಿ ಬಾತ್ ’ನಲ್ಲಿ ನಾನು ಭಾರತೀಯ ಆಟಿಕೆಗಳ ಬಗ್ಗೆ ಪ್ರಸ್ತಾಪಿಸಿದಾಗ ನನ್ನ ಸಹಪ್ರಜೆಗಳು ಅದನ್ನು ಪ್ರಚಾರ ಮಾಡಿದ್ದರು. ಇಂದು ಭಾರತೀಯ ಆಟಕೆಗಳು ಎಷ್ಟೊಂದು ಹುಚ್ಚೆಬ್ಬಿಸಿವೆಯೆಂದರೆ ವಿದೇಶಗಳಲ್ಲಿಯೂ ಅವುಗಳಿಗೆ ಬೇಡಿಕೆ ಹೆಚ್ಚಾಗಿದೆ. ನಾನು ‘ಮನ್ ಕಿ ಬಾತ್’ನಲ್ಲಿ ಕಥೆ ಹೇಳುವ ಭಾರತೀಯ ಪ್ರಕಾರದ ಬಗ್ಗೆ ಮಾತನಾಡಿದಾಗ ಅದರ ಖ್ಯಾತಿಯು ದೂರದೂರಕ್ಕೂ ವಿಸ್ತರಿಸಿತ್ತು. ಜನರು ಭಾರತೀಯ ಕಥೆ ಹೇಳುವ ಪ್ರಕಾರಕ್ಕೆ ಹೆಚ್ಚೆಚ್ಚು ಆಕರ್ಷಿತರಾಗತೊಡಗಿದ್ದರು 

- ಪ್ರಧಾನಿ ನರೇಂದ್ರ ಮೋದಿ 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X