Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿ, ಉದ್ಯಮಿ ಅದಾನಿ ಒಂದೇ:...

ಪ್ರಧಾನಿ ಮೋದಿ, ಉದ್ಯಮಿ ಅದಾನಿ ಒಂದೇ: ರಾಹುಲ್ ಗಾಂಧಿ

ಬಿಜೆಪಿ-ಆರೆಸ್ಸೆಸ್ ಅದಾನಿಯನ್ನು ಏಕೆ ರಕ್ಷಿಸುತ್ತಿದೆ ಎಂದು ಪ್ರಶ್ನಿಸಿದ ಕಾಂಗ್ರೆಸ್ ನಾಯಕ

26 Feb 2023 11:10 PM IST
share
ಪ್ರಧಾನಿ ಮೋದಿ, ಉದ್ಯಮಿ ಅದಾನಿ ಒಂದೇ: ರಾಹುಲ್ ಗಾಂಧಿ
ಬಿಜೆಪಿ-ಆರೆಸ್ಸೆಸ್ ಅದಾನಿಯನ್ನು ಏಕೆ ರಕ್ಷಿಸುತ್ತಿದೆ ಎಂದು ಪ್ರಶ್ನಿಸಿದ ಕಾಂಗ್ರೆಸ್ ನಾಯಕ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಉದ್ಯಮಿ ಗೌತಮ್ ಅದಾನಿ ಒಂದೇ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರವಿವಾರ ಹೇಳಿದ್ದಾರೆ. ರಾಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ನ 85ನೇ ಮಹಾಧಿವೇಶನದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಹಾಗೂ ಗೌತಮ್ ಅದಾನಿ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಅದಾನಿ ಸಮೂಹದ ವಂಚನೆ ಕುರಿತು ಅಮೆರಿಕದ ಸಂಸ್ಥೆ ಹಿಂಡನ್ಬರ್ಗ್ ರಿಸರ್ಚ್ ವರದಿಯಿಂದ ಉಂಟಾಗಿರುವ ಬಿಕ್ಕಟ್ಟಿನ ಕುರಿತು ರಾಹುಲ್ ಗಾಂದಿ ಅವರು ನರೇಂದ್ರ ಮೋದಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅದಾನಿ ವಿರುದ್ಧ ವಾಗ್ದಾಳಿ ಮಾಡುವವರನ್ನು ದೇಶದ್ರೋಹಿ ಎಂದು ಹೇಳಲಾಗುತ್ತಿದೆ. ಅಂದರೆ, ಅದಾನಿ ದೊಡ್ಡ ದೇಶಭಕ್ತ ಎಂದರ್ಥ !. ಬಿಜೆಪಿ-ಆರೆಸ್ಸೆಸ್ ಅದಾನಿಯನ್ನು ಏಕೆ ರಕ್ಷಿಸುತ್ತಿದೆ ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಆರೆಸ್ಸೆಸ್ ಹಾಗೂ ಬಿಜೆಪಿ ಯಾವುದೇ ರೀತಿಯಿಂದಾದರೂ ಅಧಿಕಾರ ಪಡೆಯಲು ಬಯಸುತ್ತಾರೆ. ಆರೆಸ್ಸೆಸ್ ಬಿಜೆಪಿಯ ಸೈದ್ಧಾಂತಿಕ ಮೂಲವಾಗಿದೆ ಎಂದು ಅವರು ಹೇಳಿದರು. ಅವರು (ಬಿಜೆಪಿ-ಆರ್ಎಸ್ಎಸ್) ಅಧಿಕಾರ ಪಡೆಯಲು ಏನು ಬೇಕಾದರೂ ಮಾಡುತ್ತಾರೆ. ಅವರು ಯಾರೊಂದಿಗೆ ಬೇಕಾದರೂ ಮೈತ್ರಿ ಮಾಡಿಕೊಳ್ಳುತ್ತಾರೆ. ಅವರು ಯಾರ ಮುಂದೆ ಬೇಕಾದರೂ ತಲೆ ಬಾಗುತ್ತಾರೆ. ಇದು ವಾಸ್ತವ ಎಂದು ಅವರು ಹೇಳಿದರು.

ಭಾರತ್ ಜೋಡೊ ಯಾತ್ರೆ ಸಂದರ್ಭ ನಾನು ಹಲವು ವಿಚಾರಗಳನ್ನು ಕಲಿತೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸಾವಿರಾರು ಜನರು ನನ್ನ ಜೊತೆ ಹಾಗೂ ಪಕ್ಷದ ಜೊತೆ ಬೆರೆತರು. ನಾನು ರೈತರು ಸೇರಿದಂತೆ ಹಲವು ಜನ ಸಮುದಾಯದ ಮಾತುಗಳನ್ನು ಆಲಿಸಿದೆ. ಅವರ ನೋವುಗಳನ್ನು ಅರ್ಥ ಮಾಡಿಕೊಂಡೆ ಎಂದು ಅವರು ಹೇಳಿದರು.

ಕಾಶ್ಮೀರದ ಯುವಕರಲ್ಲಿ ದೇಶದ ತ್ರಿವರ್ಣ ಧ್ವಜದ ಮೇಲೆ ಇರುವ ಪ್ರೀತಿಯನ್ನು ನಾನು ನೋಡಿದ್ದೇನೆ. ಆದರೆ, ಬಿಜೆಪಿ ಈ ಜನರ ವಿರುದ್ಧವಾಗಿದೆ. ‘‘ಚೀನಾದ ಆರ್ಥಿಕತೆ ನಮ್ಮ ದೇಶದ ಆರ್ಥಿಕತೆಗಿಂತ ದೊಡ್ಡದಿದೆ. ಅವರ ಜೊತೆ ನಾವು ಹೋರಾಟ ಮಾಡುವುದು ಹೇಗೆ?’’ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ಇದು ರಾಷ್ಟ್ರೀಯವಾದವಲ್ಲ ಹೇಡಿತ ಎಂದು ರಾಹುಲ್ ಗಾಂಧಿ ಹೇಳಿದರು.

share
Next Story
X