Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ‘ರೈಸಿಂಗ್ ಬಿಯಾಂಡ್ ದಿ...

ಬೆಂಗಳೂರು: ‘ರೈಸಿಂಗ್ ಬಿಯಾಂಡ್ ದಿ ಸೀಲಿಂಗ್’ ಪುಸ್ತಕ ಲೋಕಾರ್ಪಣೆ

26 Feb 2023 11:47 PM IST
share
ಬೆಂಗಳೂರು: ‘ರೈಸಿಂಗ್ ಬಿಯಾಂಡ್ ದಿ ಸೀಲಿಂಗ್’ ಪುಸ್ತಕ ಲೋಕಾರ್ಪಣೆ

ಬೆಂಗಳೂರು: ದೇಶವನ್ನು ಕಟ್ಟುವಲ್ಲಿ ಮುಸ್ಲಿಮ್ ಸಮುದಾಯದ ಮಹಿಳೆಯರು ನೀಡುತ್ತಿರುವ ಕೊಡುಗೆಯನ್ನು ತಿಳಿಸುವ ಉದ್ದೇಶದಿಂದ ‘ರೈಸಿಂಗ್ ಬಿಯಾಂಡ್ ದಿ ಸೀಲಿಂಗ್’ ಪುಸ್ತಕವನ್ನು ಹೊರ ತರಲಾಗುತ್ತಿದೆ ಎಂದು ರೈಸಿಂಗ್ ಬಿಯಾಂಡ್ ದಿ ಸಿಲಿಂಗ್ ಕರ್ನಾಟಕ ಸಂಘಟನೆಯ(ಆರ್‍ಬಿಟಿಸಿ) ಸಂಸ್ಥಾಪಕಿ ಫರಾ ಉಸ್ಮಾನಿ ತಿಳಿಸಿದ್ದಾರೆ. 

ಶನಿವಾರ ನಗರದ ಎಂಜಿ ರಸ್ತೆಯಲ್ಲಿನ ಪಾಲ್ಕಾನ್ ಡೆನ್ ಕಟ್ಟಡದಲ್ಲಿ ಆಯೋಜಿಸಿದ್ದ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಸ್ಲಿಂ ಮುದಾಯದ ಮಹಿಳೆಯ ಬದುಕಿನ ವೈವಿಧ್ಯವನ್ನೂ ಈ ಪುಸ್ತಕ ಹೇಳುತ್ತದೆ ಎಂದು ಹೇಳಿದರು. 

ಚಿಂತಕಿ ಡಾ.ಫರೀದಾ ರಹ್ಮತುಲ್ಲಾ ಖಾನ್ ಮಾತನಾಡಿ, ‘ಮುಸ್ಲಿಮ್ ಸಮುದಾಯದ ಮಹಿಳೆಯರು ಕ್ರೀಡೆ, ಸಮಾಜ ಸೇವೆ, ಸಾಹಿತ್ಯ ಮುಂತಾದ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡುತ್ತಾರೆ. ಆದರೆ, ಅವರ ಸಾಧನೆಗಳು ಹೆಚ್ಚು ಪ್ರಚಾರಕ್ಕೆ ಬರುವುದಿಲ್ಲ. ಹಾಗಾಗಿ ಅವರ ಸಾಧನೆಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುತ್ತಿದೆ’ ಎಂದು ತಿಳಿಸಿದರು.  

ಲೇಖಕಿ ಬಾನು ಮುಷ್ತಾಕ್ ಮಾತನಾಡಿ, ‘ಕೃತಿಯ ಹೆಸರೇ ಸೂಚಿಸಿದಂತೆ ಚಾವಣಿಗಿಂತ ಮೇಲೆ ತಮ್ಮ ಹೆಸರನ್ನು ಎತ್ತಿ ಹಿಡಿಯಬಲ್ಲ ಮಹಿಳೆಯ ಸಾಧನೆಗಳನ್ನು ದಾಖಲಿಸಲಾಗಿದೆ. ಇದು ಒಂದು ಹಂತದ ಪ್ರಯತ್ನವಾಗಿದ್ದು, ಇನ್ನು ಹಲವು ಮಹಿಳೆಯ ಸಾಧನೆಗಳನ್ನು ದಾಖಲಿಸುವ ಅಗತ್ಯ ಇದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಐಎಎಫ್‍ನ ಮಾಜಿ ವಿಂಗ್ ಕಮಾಂಡರ್ ಫರಾಹ್ ಅಫ್ರಾಝ್ ಮಾತನಾಡಿ, ಭಾರತೀಯ ಮುಸ್ಲಿಮ್ ಮಹಿಳೆಯರು ಸಂಕುಚಿತ ದೃಷ್ಟಿಕೋನವನ್ನು ಮೀರಲು ಈ ಕೃತಿ ಸಹಾಯ ಮಾಡುತ್ತದೆ. ಎಲ್ಲ ಕ್ಷೇತ್ರದಲ್ಲಿ ಮಹಿಳೆಯರು ಸಾಧನೆ ಮಾಡಿದ್ದಾರೆ ಎಂದು ಹೇಳಿದರು.  

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 100 ಮುಸ್ಲಿಮ್ ಸಮುದಾಯದ ಮಹಿಳೆಯರ ಕಥನಗಳನ್ನು ಒಳಗೊಂಡ ಪುಸ್ತಕ ‘ರೈಸಿಂಗ್ ಬಿಯಾಂಡ್ ದಿ ಸೀಲಿಂಗ್’ ಅನ್ನು ಲೋಕಾರ್ಪಣೆ ಮಾಡಲಾಯಿತು. ಆರ್‍ಬಿಟಿಸಿ ಸಂಯೋಜಕರಾದ ಜೋಯಾ ಫತೇಹಳ್ಳಿ, ಕಾಂಗ್ರೆಸ್ ಮುಖಂಡರಾದ ಮಾರ್ಗರೇಟ್ ಆಳ್ವಾ, ಐಮನ್ ಅನ್ಸಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
Next Story
X