Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹೋರಾಟಗಳಲ್ಲಿ ಮಹಿಳಾ ಘಟಕ ಸದಾ ಮುಂಚೂಣಿ:...

ಹೋರಾಟಗಳಲ್ಲಿ ಮಹಿಳಾ ಘಟಕ ಸದಾ ಮುಂಚೂಣಿ: ಮಾವಳ್ಳಿ ಶಂಕರ್

26 Feb 2023 11:54 PM IST
share
ಹೋರಾಟಗಳಲ್ಲಿ ಮಹಿಳಾ ಘಟಕ ಸದಾ ಮುಂಚೂಣಿ: ಮಾವಳ್ಳಿ ಶಂಕರ್

ಬೆಂಗಳೂರು: ದಲಿತ ಚಳುವಳಿಯ ಹೋರಾಟಗಳಲ್ಲಿ ದಲಿತ ಮಹಿಳಾ ಘಟಕವು ಸದಾ ಮುಂಚೂಣಿಯಲ್ಲಿರುತ್ತದೆ. ಆಡಳಿತ ಸರಕಾರಗಳಿಗೆ ಸಮುದಾಯದ ನಾರಿಶಕ್ತಿ ಏನೆಂಬುದನ್ನು ಹಲವು ಹೋರಾಟಗಳಲ್ಲಿ ಘಟಕ ಸಾಬೀತು ಪಡಿಸಿದೆ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‍ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ತಿಳಿಸಿದ್ದಾರೆ.

ರವಿವಾರ ನಗರದ ಲಾಲ್‍ಬಾಗ್ ರಸ್ತೆಯಲ್ಲಿರುವ ಜೈಭೀಮ್ ಭವನದಲ್ಲಿ ದಸಂಸ ವತಿಯಿಂದ ರಮಾಬಾಯಿ ಅಂಬೇಡ್ಕರ್ ಅವರ 125ನೆ ಜನ್ಮದಿನಾಚರಣೆ ಹಾಗೂ ದಲಿತ ಮಹಿಳಾ ಒಕ್ಕೂಟದ ಸರ್ವ ಸದಸ್ಯರ ಮಹಾಸಭೆಯಲ್ಲಿ ಮಾತನಾಡಿದ ಅವರು, ದಲಿತ ಚಳುವಳಿ ಆರಂಭದಿಂದ ದಸಂಸ ಎಲ್ಲ ನಡಿಗೆಯಲ್ಲಿ ಮಹಿಳಾ ಘಟಕವು ಎಲ್ಲ ಜವಾಬ್ದಾರಿಗಳನ್ನು ತನ್ನ ಹೆಗಲ ಮೇಲೆ ಒತ್ತುಕೊಂಡು ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಸ್ತುತ ಕಾಲಘಟ್ಟದಲ್ಲಿ ದೇಶದಲ್ಲಿ ದಲಿತರ ಮೇಲಿನ ದೌರ್ಜನ್ಯ, ದಲಿತ ಹೆಣ್ಣುಮಕ್ಕಳ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ದೇಶದ ಪ್ರತಿ ಹಳ್ಳಿಗಳಲ್ಲೂ ಅಸ್ಪಶ್ಯತೆ, ಜಾತೀಯತೆ ಇಂದಿಗೂ ತಾಂಡವವಾಡುತ್ತಿದೆ. ಇಂತಹ ಸಂಕ್ರಮಣ ಕಾಲಘಟ್ಟದಲ್ಲಿ ದಲಿತ ಮಕ್ಕಳು ವಿದ್ಯಾವಂತರಾಗಬೇಕು. ಎಲ್ಲರೂ ಉನ್ನತ ಮಟ್ಟದ ಶಿಕ್ಷಣವನ್ನು ಪಡೆಯುವ ಅಗತ್ಯವಿದೆ. ಅಂತೆಯೇ ಸಂಘಟನೆಗಳು ದಲಿತ ಪರವಾದ ವೈಚಾರಿಕ ಹೋರಾಟಗಳನ್ನು ಹೆಚ್ಚಿಸಿಕೊಳ್ಳಬೇಕು ಎಂದರು.

ದಲಿತ ಮಹಿಳಾ ಒಕ್ಕೂಟವು ರಾಜ್ಯ ಸಮಿತಿ ತೆಗೆದುಕೊಳ್ಳುವ ಎಲ್ಲ ತೀರ್ಮಾನಗಳನ್ನು ಬೆಂಬಲಿಸಿ ಹೋರಾಟದಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತಾ ಬಂದಿದೆ. ಇಂದು ಮಹಿಳಾ ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಇಟ್ಟುಕೊಂಡು ಸರಕಾರವನ್ನು ಎಚ್ಚರಿಸುವ ಅನಿವಾರ್ಯತೆ ಇದೆ ಎಂದರು.

ದಲಿತ ಮಹಿಳಾ ಘಟಕ ಒಕ್ಕೂಟದ ನಿರ್ಮಲಾ ಮಾತನಾಡಿ, ಸಂಘಟನೆಗೆ ಬಂದ ಮೇಲೆ ನಾವು ದೇವರನ್ನು ಪೂಜಿಸದೆ ಅಂಬೇಡ್ಕರ್‍ರನ್ನು ಪೂಜಿಸಬೇಕು ಎನ್ನುವುದರ ಅರಿವಾಯಿತು. ಮನೆಯಲ್ಲಿ ನನ್ನ ಅಮ್ಮನ ಒತ್ತಾಯಕ್ಕೆ ದೇವರ ಪೋಟೋ ಇಟ್ಟಿದ್ದೇವೆ. ಆದರೆ ನಾನು ಮಾತ್ರ ಅಂಬೇಡ್ಕರ್ ಮತ್ತು ಬುದ್ಧನನ್ನು ಪ್ರತಿನಿತ್ಯ ಸ್ಮರಿಸಿ ಪೂಜಿಸುತ್ತೇನೆ ಎಂದು ತಿಳಿಸಿದರು.

ಲೇಖಕಿ ಪ್ರೊ.ವಿಜಯಮೂರ್ತಿ ಮಾತನಾಡಿ, ರಮಾಬಾಯಿ ಅಂಬೇಡ್ಕರ್ ದಲಿತ ಹೆಣ್ಣು ಮಕ್ಕಳ ಪಾಲಿನ ಆಶಾಕಿರಣ. ಸಮಾಜದ ಕಟ್ಟುಪಾಡುಗಳಿಗೆ ಜೋತು ಬಿದ್ದು, ಜಾತಿಯ ಕಾರಣದಿಂದ ನಮಗೆ ಸಾಮಾಜಿಕ ಹಕ್ಕುಗಳಾಗಲಿ, ನಿರ್ಭೀತ ಸ್ವತಂತ್ರ್ಯವಾಗಲಿ ಸಿಗದ ದುರಿತ ಸನ್ನಿವೇಶದಲ್ಲಿ ರಮಾಬಾಯಿ ಅಂಬೇಡ್ಕರ್ ಹೋರಾಟಕ್ಕೆ ದುಮುಕಿದರು. ಅವರ ಮಗನಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾನವತಾವಾದದ ಹೋರಾಟದ ಫಲವಾಗಿ ನಾವು ಸಮಾಜದಲ್ಲಿ ಬದುಕುವ ಸ್ವಾತಂತ್ರ್ಯವನ್ನು ಪಡೆದುಕೊಂಡಿದ್ದೇವೆ ಎಂದರು. 

ಕಾರ್ಯಕ್ರಮದಲ್ಲಿ ಪ್ರೊ.ಬಿ.ಕೃಷ್ಣಪ್ಪ ಟ್ರಸ್ಟ್‍ನ ಇಂದಿರಾ ಕೃಷ್ಣಪ್ಪ, ದಲಿತ ಮಹಿಳಾ ಒಕ್ಕೂಟದ ರಾಜ್ಯ ಸಂಚಾಲಕಿ ಭಾರತಿ ರಾಜಣ್ಣ, ವಕೀಲ ಪ್ರತಿಭಾ ಹೊಸಮತಿ, ಮಾನವ ಹಕ್ಕುಗಳ ಕಾರ್ಯಕರ್ತೆ ಅಖಿಲ ವಿದ್ಯಾಸಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು. 

share
Next Story
X