Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೇಶದ ಶೇ.50ರಷ್ಟು ವಿದ್ಯುತ್ ಉತ್ಪಾದನೆ...

ದೇಶದ ಶೇ.50ರಷ್ಟು ವಿದ್ಯುತ್ ಉತ್ಪಾದನೆ ಅಂಬಾನಿ-ಅದಾನಿಗಳ ಕೈಯಲ್ಲಿದೆ: ಕೆ.ಸೋಮಶೇಖರ್ ಆರೋಪ

ವಿದ್ಯುತ್ ಬಳಕೆದಾರರ ಪ್ರಥಮ ಸಮ್ಮೇಳನ

26 Feb 2023 11:57 PM IST
share
ದೇಶದ ಶೇ.50ರಷ್ಟು ವಿದ್ಯುತ್ ಉತ್ಪಾದನೆ ಅಂಬಾನಿ-ಅದಾನಿಗಳ ಕೈಯಲ್ಲಿದೆ: ಕೆ.ಸೋಮಶೇಖರ್ ಆರೋಪ
ವಿದ್ಯುತ್ ಬಳಕೆದಾರರ ಪ್ರಥಮ ಸಮ್ಮೇಳನ

ಬೆಂಗಳೂರು: ಎನ್‍ಡಿಎ ನೇತೃತ್ವದ ಬಿಜೆಪಿ ಸರಕಾರವು ಖಾಸಗಿಕರಣ, ಉದಾರಿಕರಣ ನೀತಿಗಳನ್ನು ಇನ್ನಷ್ಟು ತ್ವರಿತವಾಗಿ ಜಾರಿಗೊಳಿಸುವ ಮೂಲಕ ದೊಡ್ಡ ಕಾರ್ಪೊರೇಟ್ ಉದ್ಯಮಗಳ ಏಳಿಗೆಗಾಗಿ ಕಾರ್ಯ ಪ್ರವೃತ್ತವಾಗಿದೆ. ಈ ಪರಿಣಾಮವಾಗಿ ದೇಶದ ಶೇ.50ರಷ್ಟು ವಿದ್ಯುತ್ ಉತ್ಪಾದನೆಯು ಅಂಬಾನಿ, ಅದಾನಿ ಕೈಯಲ್ಲಿದೆ ಎಂದು ಅಖಿಲ ಭಾರತ ವಿದ್ಯುತ್ ಬಳಕೆದಾರರ ಸಂಘ ಉಪಾಧ್ಯಕ್ಷ ಕೆ. ಸೋಮಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದ ಯುವಿಸಿಇ ಅಲುಮ್ನಿ ಅಸೋಷಿಯೇಷನ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿದ್ಯುತ್ ಬಳಕೆದಾರರ ಪ್ರಥಮ ಸಮ್ಮೇಳನದಲ್ಲಿ ಮಾತನಾಡಿದ ಅವರು, ‘ರಾಜ್ಯ ಸರಕಾರ ವಿದ್ಯುತ್ ಕ್ಷೇತ್ರದ ಖಾಸಗೀಕರಣವನ್ನು ನಿಲ್ಲಿಸಬೇಕು. ವಿದ್ಯುತ್ ತಿದ್ದುಪಡಿ ಮಸೂದೆ-2022 ಅನ್ನು ರದ್ದುಗೊಳಿಸಿ ಪ್ರೀ-ಪೇಯ್ಡ್ ಸ್ಮಾರ್ಟ್ ಮೀಟರ್ ಅಳವಡಿಕೆಯನ್ನು ಕೂಡಲೇ ನಿಲ್ಲಿಸಬೇಕು’ ಎಂದು ಆಗ್ರಹಿಸಿದರು.

ಆರ್ಥಿಕ ಸಂಕಷ್ಟದಲ್ಲಿರುವ ಗ್ರಾಹಕರು, ಸಣ್ಣ ಉದ್ಯಮಗಳು ಸಾವಿರಾರು, ಲಕ್ಷಾಂತರ ರೂಪಾಯಿಗಳ ವಿದ್ಯುತ್ ಬಿಲ್‍ಗಳನ್ನು ಪಾವತಿಸುವಂತಾಗಿದೆ. ವಿವಿಧ ರಾಜ್ಯಗಳಲ್ಲಿ ವಿದ್ಯುತ್ ಖಾಸಗೀಕರಣದ ಪ್ರಯತ್ನವು ವಿಫಲವಾಗಿರುವ ಉದಾಹರಣೆ ಇದ್ದು, ನಮ್ಮಲ್ಲೂ ವಿದ್ಯುತ್ ತಿದ್ದುಪಡಿ ಮಸೂದೆ-2022 ರದ್ದುಗೊಳಿಸಲು, ವಿದ್ಯುತ್ ಕ್ಷೇತ್ರದ ಖಾಸಗೀಕರಣವನ್ನು ನಿಲ್ಲಿಸಲು ಮತ್ತು ದುಬಾರಿ ವಿದ್ಯುತ್ ಬಿಲ್ ಏರಿಕೆಯನ್ನು ವಿರೋಧಿಸಲು ಒತ್ತಾಯಿಸಿ ದೇಶವ್ಯಾಪಿ ಹೋರಾಟಗಳಿಗೆ ಎಲ್ಲರೂ ಮುಂದೆ ಬರಬೇಕೆಂದು ಕರೆ ನೀಡಿದರು. 

ಕೆಪಿಟಿಸಿಎಲ್ ನೌಕರರ ಸಂಘ ಕಾರ್ಯಾಧ್ಯಕ್ಷ ರಾಜಾ ನಾಯ್ಕ್ ಮಾತನಾಡಿ, ‘ಜೀವನದ ಅವಿಭಾಜ್ಯ ಅಂಗವಾಗಿರುವ ವಿದ್ಯುತ್ ಕ್ಷೇತ್ರವು ಸರಕಾರದ ಅಧೀನದಲ್ಲಿರಬೇಕು. ಸೇವಾ ಮನೋಭಾವದಿಂದ ಕೂಡಿರಬೇಕು. ಅದರ ಫಲ ದೇಶದ ಪ್ರತಿಯೊಬ್ಬ ನಾಗರಿಕನಿಗೂ ದಕ್ಕುವಂತಾಗಿರಬೇಕು. ಆದರೆ ದುರದೃಷ್ಟವಶಾತ್, ಅಗಾಧವಾದ ಈ ವಿದ್ಯುತ್ ಕ್ಷೇತ್ರವನ್ನು ಕಟ್ಟಿದ್ದು ದೇಶದ ಗ್ರಾಹಕರ ತೆರಿಗೆ ಹಣದಿಂದ ಎಂಬುದನ್ನು ಸರಕಾರಗಳು ಮರೆತು ಹೋಗಿವೆ. ಖಾಸಗೀಕರಣದ ಮೂಲಕ ಜನರ ಹಣದಿಂದ ಕಟ್ಟಿದ ಮೂಲಸೌಕರ್ಯಗಳನ್ನು ಬಳಸಿಕೊಂಡು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಳ್ಳಲು ಸರಕಾರವು ಮುಕ್ತ ಅವಕಾಶವನ್ನು ಕಲ್ಪಿಸಿಕೊಡುತ್ತಿದೆ ಎಂದರು.

ಸೇವಾ ಕ್ಷೇತ್ರವಾದ ವಿದ್ಯುತ್ ಅನ್ನು ಖಾಸಗಿಯವರಿಗೆ ಒಪ್ಪಿಸಿದರೆ, ಈಗಾಗಲೇ ಬೆಲೆ ಏರಿಕೆ, ನಿರುದ್ಯೋಗದಿಂದ ತತ್ತರಿಸುತ್ತಿರುವ ಜನ ಸಾಮಾನ್ಯರು ಮತ್ತು ವಿದ್ಯುತ್ ನೌಕರರು ಇನ್ನಷ್ಟು ಮಾರಕವಾದ ದಿನಗಳು ನೋಡುವುದು ಖಚಿತ. ಯಾವುದೇ ಸರಕಾರಗಳು ಬಂದರೂ ಇಂತಹ ನೀತಿಗಳೇ ಮುಂದುವರೆಯುತ್ತವೆ. ಆದ್ದರಿಂದ ಜನಸಾಮಾನ್ಯರು, ಗ್ರಾಹಕರುಗಳು ಪ್ರಜ್ಞಾವಂತರಾಗಿ, ಹೋರಾಟಗಳನ್ನು ಕಟ್ಟಿ, ಇಂತಹ ನೀತಿಗಳು ಜಾರಿಯಾಗದಂತೆ ತಡೆಯಬೇಕಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ಮುದ್ರಣಾಲಯ ಸಂಘದ ಅಧ್ಯಕ್ಷ ಮಂಜುನಾಥ್, ಸಲಹೆಗಾರ ನಾಗಾರ್ಜುನ ಉಪಸ್ಥಿತರಿದ್ದರು. 

share
Next Story
X