Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಸ್ರೇಲ್‌ಗೆ ಕೃಷಿ ಅಧ್ಯಯನಕ್ಕೆ ತೆರಳಿ...

ಇಸ್ರೇಲ್‌ಗೆ ಕೃಷಿ ಅಧ್ಯಯನಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ರೈತ ಭಾರತಕ್ಕೆ ವಾಪಸ್

27 Feb 2023 2:01 PM IST
share
ಇಸ್ರೇಲ್‌ಗೆ ಕೃಷಿ ಅಧ್ಯಯನಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ರೈತ ಭಾರತಕ್ಕೆ ವಾಪಸ್

ತಿರುವನಂತಪುರಂ: ಸರ್ಕಾರ ಪ್ರಾಯೋಜಿಸಿದ್ದ ಆಧುನಿಕ ಕೃಷಿ ತಂತ್ರಜ್ಞಾನ ಅಧ್ಯಯನದ ಭಾಗವಾಗಿ ಇಸ್ರೇಲಿಗೆ ತೆರಳಿ ನಂತರ ನಾಪತ್ತೆಯಾಗಿದ್ದ ಕೇರಳ ರೈತರೊಬ್ಬರು ಸೋಮವಾರ ಭಾರತಕ್ಕೆ ಮರಳಿದ್ದಾರೆ ಎಂದು ndtv.com ವರದಿ ಮಾಡಿದೆ.

ಸೋಮವಾರ ಮುಂಜಾನೆ 5 ಗಂಟೆಗೆ ಕ್ಯಾಲಿಕಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ರೈತ ಬಿಜು ಕುರಿಯನ್ (48), "ಕೇರಳ ಸರ್ಕಾರ, ರಾಜ್ಯ ಕೃಷಿ ಸಚಿವ ಪಿ.ಪ್ರಸಾದ್,  27 ಮಂದಿ ಸದಸ್ಯರ ನಿಯೋಗ ಹಾಗೂ ಅದರ ಮುಂದಾಳತ್ವ ವಹಿಸಿದ್ದ ಅಧಿಕಾರಿಗಳ ಕ್ಷಮೆ ಯಾಚಿಸುತ್ತೇನೆ" ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇಸ್ರೇಲಿನ ಆಧುನಿಕ ಕೃಷಿ ತಂತ್ರಜ್ಞಾನ ಕುರಿತ ಐದು ದಿನಗಳ ಅಧ್ಯಯನ ಮುಗಿದ ನಂತರ ತಾನುಫೆಬ್ರವರಿ 17ರಿಂದ  ನಾಪತ್ತೆಯಾದ ಕುರಿತು ವಿವರಿಸಿದ ಬಿಜು, ಈ ಅವಧಿಯಲ್ಲಿ ತಾನು ಜೆರುಸಲೇಂ ಹಾಗೂ ಬೆತ್ಲೆಹೆಂನ ಪುಣ್ಯಕ್ಷೇತ್ರಗಳ ದರ್ಶನಕ್ಕೆ ತೆರಳಿದ್ದೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದಾದ ನಂತರ, ನಾನು ನಾಪತ್ತೆಯಾಗಿದ್ದೇನೆ ಎಂದು ಸುದ್ದಿಯಾಗಿರುವುದು ನನ್ನ ಗಮನಕ್ಕೆ ಬಂದು, ಮುಂದೇನು ಮಾಡುವುದು ಎಂದು ತೋಚಲಿಲ್ಲ ಎಂದೂ ಹೇಳಿದ್ದಾರೆ.

ನಾನು ನನ್ನ ಕುಟುಂಬದ ಸದಸ್ಯರಿಗೆ, ಕೆಲವು ವ್ಯಕ್ತಿಗಳ ನೆರವಿನಿಂದ ನಾನು ಸುರಕ್ಷಿತವಾಗಿದ್ದೇನೆ ಎಂದು ಮಾಹಿತಿ ನೀಡಿದ್ದೆ ಮತ್ತು ನನ್ನ ಫೋನ್‌ನಿಂದ ಕರೆ ಮಾಡಲು ಅಂತಾರಾಷ್ಟ್ರೀಯ ಕರೆ ಅಥವಾ ಅಂತರ್ಜಾಲ ಸೌಲಭ್ಯವಿರಲಿಲ್ಲ ಎಂದು ತಿಳಿಸಿದ್ದಾರೆ.

ಈ ನಡುವೆ, ನನ್ನ ಸಹೋದರನ ನೆರವಿನಿಂದ ನಾನು ಭಾರತಕ್ಕೆ ಮರಳಿದೆ. ನನ್ನ ವೀಸಾ ಅವಧಿಯು ಮೇ 8ರವರೆಗೆ ಇದ್ದುದರಿಂದ, ನಾನು ಇಸ್ರೇಲ್‌ನಲ್ಲೇ ಉಳಿದುಕೊಂಡಿದ್ದರಲ್ಲಿ ಯಾವುದೇ ಕಾನೂನು ಬಾಹಿರವಾದದ್ದು ಇರಲಿಲ್ಲ ಎಂದು ಹೇಳಿದ್ದಾರೆ.

ಬಿಜು ಕುರಿಯನ್ ನಾಪತ್ತೆಯಾಗಿದ್ದಾರೆ ಎಂದು ವರದಿಯಾದ ಬೆನ್ನಿಗೆ, ಪ್ರಕರಣದ ಕುರಿತು ತನಿಖೆ ನಡೆಸಲಾಗುವುದು ಎಂದು ರಾಜ್ಯ ಕೃಷಿ ಸಚಿವ ಪಿ.ಪ್ರಸಾದ್ ಪ್ರಕಟಿಸಿದ್ದರು.

ಫೆಬ್ರವರಿ 12ರಂದು ರೈತರ ನಿಯೋಗವು ಇಸ್ರೇಲ್‌ಗೆ ತೆರಳಿತ್ತು ಹಾಗೂ ಬಿಜು ಕುರಿಯನ್ ಅಧ್ಯಯನ ಮುಗಿದ ನಂತರ ಫೆಬ್ರವರಿ 17ರಿಂದ ನಾಪತ್ತೆಯಾಗಿದ್ದರು.

ಇದನ್ನೂ ಓದಿ: ನಳಿನ್‌ ರ ಚುನಾವಣೆಗೆ ಟಿಪ್ಪು-ಸಾವರ್ಕರ್‌ ಚರ್ಚೆ ನಾನು ಒಪ್ಪಲ್ಲ: ಯಡಿಯೂರಪ್ಪ

share
Next Story
X