Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇದು ಸಾವರ್ಕರ್ ಸಿದ್ಧಾಂತ, ಇದನ್ನೇ ನೀವು...

ಇದು ಸಾವರ್ಕರ್ ಸಿದ್ಧಾಂತ, ಇದನ್ನೇ ನೀವು ‘ರಾಷ್ಟೀಯತೆ’ ಎನ್ನುತ್ತೀರಾ?: ಚೀನಾ ಕುರಿತ ಸರಕಾರದ ನಿಲುವಿಗೆ ರಾಹುಲ್ ಕಿಡಿ

27 Feb 2023 9:52 PM IST
share
ಇದು ಸಾವರ್ಕರ್ ಸಿದ್ಧಾಂತ, ಇದನ್ನೇ ನೀವು ‘ರಾಷ್ಟೀಯತೆ’ ಎನ್ನುತ್ತೀರಾ?: ಚೀನಾ ಕುರಿತ ಸರಕಾರದ ನಿಲುವಿಗೆ ರಾಹುಲ್ ಕಿಡಿ

ಹೊಸದಿಲ್ಲಿ, ಫೆ. 27: ಚೀನಾವು ಆರ್ಥಿಕವಾಗಿ ಭಾರತಕ್ಕಿಂತ ಬಲಾಢ್ಯವಾಗಿದೆ ಎಂಬ ವಿದೇಶ ವ್ಯವಹಾರಗಳ ಸಚಿವ ಎಸ್. ಜೈಶಂಕರ್(S. Jaishankar) ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi), ಇದು ಹೇಡಿತನವಾಗಿದೆ ಎಂದು ಬಣ್ಣಿಸಿದ್ದಾರೆ.

‘‘ಇದನ್ನು ನೀವು ರಾಷ್ಟ್ರೀಯತೆ ಎಂಬುದಾಗಿ ಕರೆಯುವಿರೇ? ಇದು ಹೇಡಿತನ’’ ಎಂದು ರಾಯ್ಪುರದಲ್ಲಿ ರವಿವಾರ ನಡೆದ ಕಾಂಗ್ರೆಸ್ ಪಕ್ಷದ 85ನೇ ಪೂರ್ಣಾಧಿವೇಶನದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಹೇಳಿದರು.

‘‘ಭಾರತವು ಚೀನಾಕ್ಕಿಂತ ಆರ್ಥಿಕವಾಗಿ ದುರ್ಬಲವಾಗಿದೆ, ನಾವು ಅದರ ವಿರುದ್ಧ ಹೇಗೆ ಹೋರಾಟ ಮಾಡುವುದು ಎಂದು ಒಬ್ಬ ಸಚಿವರು ಸಂದರ್ಶನವೊಂದರಲ್ಲಿ ಹೇಳುತ್ತಾರೆ. ನಾವು ಬ್ರಿಟಿಶರ ವಿರುದ್ಧ ಹೋರಾಡುತ್ತಿದ್ದಾಗ ನಮ್ಮ ಆರ್ಥಿಕತೆ ತುಂಬಾ ದೊಡ್ಡದಾಗಿತ್ತೇ? ಇದು ಸಾವರ್ಕರ್ ಸಿದ್ಧಾಂತ. ನಿಮಗಿಂತ ಬಲಿಷ್ಠರಾಗಿರುವವರ ಮುಂದೆ ಮಂಡಿಯೂರಿ ಎನ್ನುವುದು. ಹಾಗಾದರೆ, ನಿಮಗಿಂತ ದುರ್ಬಲರಾಗಿರುವವರ ವಿರುದ್ಧ ಮಾತ್ರ ನೀವು ಹೋರಾಟ ಮಾಡುತ್ತೀರಾ? ಇದನ್ನೇ ನಾವು ಹೇಡಿತನ ಎನ್ನುವುದು’’ ಎಂದರು.

‘‘ನಮಗೆ ನಿಮ್ಮ ಎದುರು ನಿಲ್ಲಲು ಸಾಧ್ಯವಿಲ್ಲ, ಯಾಕೆಂದರೆ ನೀವು ನಮಗಿಂತ ಬಲಿಷ್ಠರು ಎಂಬುದಾಗಿ ಭಾರತದ ಸಚಿವರು ಚೀನಾಕ್ಕೆ ಹೇಳುತ್ತಿದ್ದಾರೆ. ಇದು ಯಾವ ಮಾದರಿಯ ರಾಷ್ಟ್ರೀಯತೆ? ಇದಕ್ಕೊಂದು ಸೂಕ್ತ ಪದವಿದೆ. ‘ಸತ್ತಾಗ್ರಹಿ’ (ಅಧಿಕಾರಕ್ಕಾಗಿ ಲಾಲಸೆ ಪಡುವವರು). ನಮ್ಮನ್ನು ಸತ್ಯಾಗ್ರಹಿಗಳೆಂದು ಕರೆಯುತ್ತಾರೆ, ಆದರೆ ಅವರು ‘ಸತ್ತಾಗ್ರಹಿಗಳು’’’ ಎಂದು ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ಮಾಡಿದರು.

ಇತ್ತೀಚೆಗೆ ಎಎನ್ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ, ವಿದೇಶ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಚೀನಾ ವಿಷಯದಲ್ಲಿ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸುತ್ತಾ, ‘‘ಗಡಿ ನಿಯಂತ್ರಣ ರೇಖೆಗೆ ಸೇನೆಯನ್ನು ಕಳುಹಿಸಿದ್ದು ಯಾರು? ರಾಹುಲ್ ಗಾಂಧಿಯಲ್ಲ, ಪ್ರಧಾನಿ ಮೋದಿ ಕಳುಹಿಸಿದ್ದು’’ ಎಂದು ಹೇಳಿದ್ದರು.

‘‘ನಾವು ಗಡಿಯನ್ನು ಬಲಪಡಿಸುತ್ತಿದ್ದೇವೆ ಎಂದು ನಾನು ಹೇಳುವುದಿಲ್ಲ. ನಾವು ಕಾನೂನುಬದ್ಧವಾಗಿ ನಮ್ಮ ಗಡಿ ಮೂಲಸೌಕರ್ಯವನ್ನು ನಿರ್ಮಿಸುತ್ತಿದ್ದೇವೆ. ಯಾಕೆಂದರೆ ಅವರು ಅವರ ಗಡಿ ಮೂಲಸೌಕರ್ಯವನ್ನು ನಿರ್ಮಿಸುತ್ತಿದ್ದಾರೆ. ನನ್ನ ಅಭಿಪ್ರಾಯದ ಪ್ರಕಾರ, ಇದು 25 ವರ್ಷಗಳ ಹಿಂದೆಯೇ ಆಗಬೇಕಾಗಿತ್ತು’’ ಎಂದಿದ್ದರು.

‘‘ನೋಡಿ, ಅವರು (ಚೀನಾ) ಆರ್ಥಿಕವಾಗಿ ಬಲಿಷ್ಠರು. ನಾನು ಏನು ಮಾಡಲಿ? ನಾವು ಆರ್ಥಿಕವಾಗಿ ದುರ್ಬಲರು. ಆರ್ಥಿಕವಾಗಿ ಪ್ರಬಲರಾಗಿರುವ ಅವರೊಂದಿಗೆ ನಾನು ಜಗಳ ಮಾಡಲು ಸಾಧ್ಯವೇ? ಇದು ಪ್ರತಿರೋಧ ವ್ಯಕ್ತಪಡಿಸುವ ವಿಷಯವಲ್ಲ, ಇದು ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದ ವಿಷಯ’’ ಎಂದು ಜೈಶಂಕರ್ ಹೇಳಿದ್ದರು.

share
Next Story
X