Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಚ್.ಡಿ. ರೇವಣ್ಣರ ಅನುಮತಿ ಇಲ್ಲದೇ ಇಲ್ಲಿ...

ಎಚ್.ಡಿ. ರೇವಣ್ಣರ ಅನುಮತಿ ಇಲ್ಲದೇ ಇಲ್ಲಿ ಯಾವುದೂ ನಡೆಯಲ್ಲ, ನಾನ್ಯಾವ ಲೆಕ್ಕ?: ಶಾಸಕ ಎ.ಟಿ. ರಾಮಸ್ವಾಮಿ ಬೇಸರ

''ಹಾಸನದಲ್ಲಿ ಗುಲಾಮಗಿರಿ ಇದೆ, ಕೈಕಟ್ಟಿ ನಿಲ್ಲಬೇಕಿದೆ...''

27 Feb 2023 9:56 PM IST
share
ಎಚ್.ಡಿ. ರೇವಣ್ಣರ ಅನುಮತಿ ಇಲ್ಲದೇ ಇಲ್ಲಿ ಯಾವುದೂ ನಡೆಯಲ್ಲ, ನಾನ್ಯಾವ ಲೆಕ್ಕ?: ಶಾಸಕ ಎ.ಟಿ. ರಾಮಸ್ವಾಮಿ ಬೇಸರ
''ಹಾಸನದಲ್ಲಿ ಗುಲಾಮಗಿರಿ ಇದೆ, ಕೈಕಟ್ಟಿ ನಿಲ್ಲಬೇಕಿದೆ...''

ಹಾಸನ: 'ಎಚ್.ಡಿ. ರೇವಣ್ಣರವರ ಅನುಮತಿ ಇಲ್ಲದೇ ಹಾಸನ ಜಿಲ್ಲೆಯಲ್ಲಿ ಯಾವುದೂ ನಡೆಯುವುದಿಲ್ಲ. ಮನೆಯ ಹಿರಿಯ ಮುತ್ಸದ್ದಿಯನ್ನೇ ಮನೆ ಮತ್ತು ಜಿಲ್ಲೆಯಿಂದ ಆಚೆ ಕಳಿಸಿದವರು ಇನ್ನು ಇವರ ಮುಂದೆ ನಾನ್ಯಾವ ಲೆಕ್ಕ?' ಎಂದು ಜೆಡಿಎಸ್  ಶಾಸಕ ಎ.ಟಿ. ರಾಮಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, 'ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ದೆ ಮಾಡುವುದು ಖಚಿತ. ಯಾವ ಪಕ್ಷದಿಂದ ಸ್ಪರ್ಧಿಸಲಿದ್ದೇನೆ ಎಂಬುದನ್ನು ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ' ಎಂದು ಹೇಳಿದರು.

''2018ರ ಚುನಾವಣೆಯಲ್ಲು ಕೂಡ ಇನ್ನು ಚುನಾವಣಾ ಫಲಿತಾಂಶ ಅಂತಿಮ ಆಗದೆಯೇ ಮೈತ್ರಿ ಆಗಿತ್ತು. ನಾವಿನ್ನು ಮತ ಎಣಿಕೆ ಕೇಂದ್ರದಲ್ಲಿ ಇರುವಾಗಲೇ ಕುಮಾರಸ್ವಾಮಿ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಜೊತೆಗೆ ಮೈತ್ರಿ ಎಂದು ತೀರ್ಮಾನ ಮಾಡಲಾಗಿತ್ತು. ಚರ್ಚೆಯನ್ನೇ ಮಾಡದೆ, ಒಂದು ಭೂಮಿಕೆ ಸಿಧ್ದಮಾಡದೆ ಮೈತ್ರಿ ಮಾಡಿ ಕೇವಲ 14.ತಿಂಗಳಿಗೆ ಸರ್ಕಾರ ಪತನ ಆಯ್ತು'' ಎಂದು ಹೇಳಿದರು. 

'ನಾನು ಶಾಸಕನಾಗಿದ್ದ ವೇಳೆ ನನ್ನನ್ನ ಸರ್ಕಾರಿ ಭೂಮಿ ಒತ್ತುವರಿ ತೆರವು ಸಮಿತಿಗೆ ಅದ್ಯಕ್ಷನನ್ನಾಗಿ ಮಾಡಿದ್ದಾಗ ಈ ವೇಳೆ ನನಗೆ ಯಾರೂ ಯಾವುದೇ ಒತ್ತಡ ಹೇರದ ಕಾರಣ ಉತ್ತಮ ವರದಿ ನೀಡಲು ನೆರವಾಯ್ತು. ಸರ್ಕಾರಕ್ಕೆ, ಪಕ್ಷಕ್ಕೆ, ಜನರಿಗೆ ಗೌರವ ಬರುವಂತೆ ನಾನು ನಡೆದುಕೊಂಡೆದ್ದೆನು. ನಾನು ಅಕ್ರಮಭೂ ಒತ್ತುವರಿ ತೆರವು ಮಾಡಿದ ಕಾರಣ ಭೂ ಮಾಫಿಯಾದಿಂದ ಬೆದರಿಕೆ ಬರಬಹುದು ಎಂದು ಭದ್ರತೆ ಒಡೆಯಲು ಹೇಳಿದ್ದರು. ಆದರೆ ಇದುವರೆಗೆ ನಾನು ಅಂಗರಕ್ಷಕನನ್ನ ಪಡೆದಿಲ್ಲ. ಕಾರಣ ನಾನು ನ್ಯಾಯಪರವಾಗಿ ಕೆಲಸ ಮಾಡಿದ್ದೇನೆ. ಕೆಲವರು ಸ್ವಾರ್ಥಕ್ಕಾಗಿ ಸತ್ಯವನ್ನು ಸಾಯಿಸುತ್ತಾರೆ, ಯಾರನ್ನು ಬೇಕಿದ್ದರೂ ಬಲಿ ಕೊಡ್ತಾರೆ' ಎಂದು ರೇವಣ್ಣನವರ ವಿರುದ್ಧ ಹರಿಹಾಯ್ದರು.

'ಒಂದು ವರ್ಷದಿಂದ ನಮ್ಮ ಕ್ಷೇತ್ರದಲ್ಲಿ ಒಬ್ಬರು ನಾನೇ ಅಭ್ಯರ್ಥಿ ಎಂದು ಮೀಟಿಂಗ್ ಮಾಡುತ್ತಿದ್ದರು. ರೇವಣ್ಣರ ಅನುಮತಿ ಇಲ್ಲದೆ ಇದೆಲ್ಲವೂ ನಡೆಯಲು ಸಾದ್ಯವೇ ಎಂಬುದು ನಮ್ಮ ಪ್ರಶ್ನೆ. ಕುಮಾರಸ್ವಾಮಿ ಅವರ ಬಗ್ಗೆ ನನಗೆ ಅಪಾರ ಗೌರವ ಇದೆ. ಅದರೆ ಸತ್ಯ ಮರೆ ಮಾಚಬಾರದು. ಎ.ಟಿ. ರಾಮಸ್ವಾಮಿ ಎರಡು ವರ್ಷದಿಂದ ನಮ್ಮ ಶಾಸಕಾಂಗ ಪಕ್ಷದ ಸಭೆಗೆ ಬಂದಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆಗೆ ಬೇಸರವ್ಯಕ್ತಪಡಿಸಿದರು. ಅವರೇ ಸಭೆಗೆ ಬಂದಿರಲಿಲ್ಲ ನಾನು ಹೋಗಿದ್ದೆ. ಬೇಕಿದ್ರೆ ಸಹಿ ಪುಸ್ತಕ ತೆಗೆದು ನೋಡಿ ನಂತರ ಮಾತನಾಡಲಿ' ಎಂದು ಸವಾಲು ಹಾಕಿದರು. 

share
Next Story
X