Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ​ಇಸ್ರೇಲಿ ವಸಾಹತುಗಾರರ ದಾಂಧಲೆ;...

​ಇಸ್ರೇಲಿ ವಸಾಹತುಗಾರರ ದಾಂಧಲೆ; ಫೆಲೆಸ್ತೀನೀಯರ ಮನೆ, ಕಾರುಗಳಿಗೆ ಬೆಂಕಿ‌

27 Feb 2023 11:51 PM IST
share
​ಇಸ್ರೇಲಿ ವಸಾಹತುಗಾರರ ದಾಂಧಲೆ; ಫೆಲೆಸ್ತೀನೀಯರ ಮನೆ, ಕಾರುಗಳಿಗೆ ಬೆಂಕಿ‌

ಜೆರುಸಲೇಂ, ಫೆ.27: ಆಕ್ರಮಿತ ಪಶ್ಚಿಮದಂಡೆಯ ನಬ್ಲೂಸ್ನ ಹುವಾರ ಪಟ್ಟಣದಲ್ಲಿ ಇಸ್ರೇಲಿ ವಸಾಹತುಗಾರರು ದಾಂಧಲೆ ನಡೆಸಿ ಫೆಲೆಸ್ತೀನೀಯರ ಮನೆ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿರುವುದಾಗಿ ವರದಿಯಾಗಿದೆ.

ರವಿವಾರ ತಡರಾತ್ರಿ ವಸಾಹತುಗಾರರು ನಡೆಸಿರುವ ಅತ್ಯಂತ ಭೀಕರ ಹಿಂಸಾಚಾರದಲ್ಲಿ 30 ಮನೆಗಳು ಹಾಗೂ ಕಾರುಗಳು ಬೆಂಕಿಗೆ ಆಹುತಿಯಾಗಿವೆ. ಇದೇ ಸಂದರ್ಭ ಇಸ್ರೇಲ್ ಸೇನೆಯ ಗುಂಡೇಟಿನಿಂದ  37 ವರ್ಷದ ಫೆಲೆಸ್ತೀನ್ ಪ್ರಜೆಯೊಬ್ಬ ಮೃತಪಟ್ಟಿರುವುದಾಗಿ ಫೆಲೆಸ್ತೀನ್ ಆರೋಗ್ಯ ಇಲಾಖೆ ಹೇಳಿದೆ. ದಾಂಧಲೆಯ ಸಂದರ್ಭ ಇಬ್ಬರು   ಗುಂಡೇಟಿನಿಂದ ಗಾಯಗೊಂಡರೆ, ಒಬ್ಬ ವ್ಯಕ್ತಿಗೆ ಇರಿಯಲಾಗಿದೆ. ಮತ್ತೊಬ್ಬ ವ್ಯಕ್ತಿಗೆ ಕಬ್ಬಿಣದ ರಾಡ್ನಿಂದ ಥಳಿಸಲಾಗಿದ್ದು ತೀವ್ರ ಗಾಯಗೊಂಡಿದ್ದಾನೆ. ಭದ್ರತಾ ಪಡೆ ಸಿಡಿಸಿದ ಅಶ್ರುವಾಯುವಿನಿಂದ ಸುಮಾರು 95 ಜನ ಅಸ್ವಸ್ಥಗೊಂಡಿದ್ದಾರೆ ಎಂದು ಪೆಲೆಸ್ತೀನಿಯನ್ ರೆಡ್ಕ್ರೆಸೆಂಟ್ ವರದಿ ಮಾಡಿದೆ. 

ಈ ದಾಂಧಲೆ ಮತ್ತು ಹಿಂಸಾಚಾರದಲ್ಲಿ ಸುಮಾರು 400ರಷ್ಟು ಯೆಹೂದಿ ವಸಾಹತುಗಾರರು ಪಾಲ್ಗೊಂಡಿದ್ದರು ಎಂದು ನಬ್ಲೂಸ್ ಪ್ರದೇಶದಲ್ಲಿ ಇಸ್ರೇಲಿ ವಸಾಹತು ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸುವ ಫೆಲೆಸ್ತೀನಿಯನ್ ಅಧಿಕಾರಿ ಘಸಾನ್ ಡಗ್ಲಾಸ್ ಹೇಳಿದ್ದಾರೆ. ‘ಇದು ಆಕ್ರಮಣಕಾರ ಪಡೆಯ ರಕ್ಷಣೆಯಲ್ಲಿ ವಸಾಹತುಗಾರರು ನಡೆಸಿರುವ ಭಯೋತ್ಪಾದಕ ಕೃತ್ಯವಾಗಿದೆ. ಇದಕ್ಕೆ ಇಸ್ರೇಲ್ ಸರಕಾರ ಸಂಪೂರ್ಣ ಹೊಣೆಯಾಗಿದೆ’ ಎಂದು ಫೆಲೆಸ್ತೀನಿಯನ್ ಅಧ್ಯಕ್ಷ ಮಹ್ಮೂದ್ ಅಬ್ಬಾಸ್ ಖಂಡಿಸಿದ್ದಾರೆ.ಶಾಂತರಾಗಿರುವಂತೆ ಮನವಿ ಮಾಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆಥನ್ಯಾಹು, ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಎಚ್ಚರಿಸಿದ್ದಾರೆ. ಹುವಾರಾದಲ್ಲಿನ ಹಿಂಸಾಚಾರದಿಂದ ಆಘಾತವಾಗಿದೆ. ಈ ಅಂತ್ಯವಿಲ್ಲದ ಹಿಂಸಾಚಾರವನ್ನು ತಪ್ಪಿಸಲು ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಯುರೋಪಿಯನ್ ಯೂನಿಯನ್ ಆಗ್ರಹಿಸಿದೆ.

PALESTINE UNDER ATTACK

lsraeli settlers are raiding the Palestinian village Huwara, south of Nablus, destroying & burning Palestinian cars, shops, buildings & houses, some with families inside‼️

Red Crescent reports 100 Palestinians wounded, 100 cars & 75 homes burnt so far. pic.twitter.com/bnw9I93xMJ

— Leanne M. (@LeanneMohamad) February 26, 2023
share
Next Story
X