Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 4 ಕೋಟಿ ಜನರನ್ನು ತಲುಪುವ ಬಿಜೆಪಿಯ ರಥಗಳ...

4 ಕೋಟಿ ಜನರನ್ನು ತಲುಪುವ ಬಿಜೆಪಿಯ ರಥಗಳ ಯಾತ್ರೆಗಳು: ಎನ್.ರವಿಕುಮಾರ್

28 Feb 2023 12:06 PM IST
share
4 ಕೋಟಿ ಜನರನ್ನು ತಲುಪುವ ಬಿಜೆಪಿಯ ರಥಗಳ ಯಾತ್ರೆಗಳು: ಎನ್.ರವಿಕುಮಾರ್

ಬೆಂಗಳೂರು, ಫೆ.27: ಬಿಜೆಪಿಯ ನಾಲ್ಕು ರಥಗಳು ಒಟ್ಟು 4 ಕೋಟಿ ಜನರನ್ನು ತಲುಪುವ ಉದ್ದೇಶ ಹೊಂದಿದ್ದು, ಪಕ್ಷ ಬಹುಮತ ಪಡೆಯಲು ಇದು ಪೂರಕ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ತಿಳಿಸಿದರು.

ಸೋಮವಾರ ಲಾಲ್‍ಬಾಗ್ ಸಮೀಪದ ಎಸ್.ಎಂ.ಕಣ್ಣಪ್ಪ ಆಟೋ ಮೊಬೈಲ್ಸ್‍ನಲ್ಲಿ ಬಿಜೆಪಿ ವಿಜಯಸಂಕಲ್ಪ ಯಾತ್ರೆಯ 4 ರಥಗಳ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 4 ರಥಗಳ ಲೈಲ್ಯಾಂಡ್ ಚಾಸಿಯನ್ನು ಪ್ರಕಾಶ್ ರೋಡ್‍ಲೈನ್ಸ್ ನವರು ನಿರ್ಮಿಸುತ್ತಿದ್ದಾರೆ. ಪ್ರತಿ ರಥವು 30 ಅಡಿ ಉದ್ದ, 8 ಅಡಿ ಅಗಲದ್ದಾಗಿದೆ. ರಥದಲ್ಲಿ ನಿಂತು ಭಾಷಣ ಮಾಡಲು ಸುಂದರ ಕೆನೊಪಿ ರಚಿಸಿದ್ದೇವೆ ಎಂದರು.

4 ಮೊಬೈಲ್ ಚಾರ್ಜರ್‍ಗಳು, ರೋಡ್ ಶೋಗೆ ಪೂರಕ ಮೈಕ್ ವ್ಯವಸ್ಥೆ ಇದ್ದು, ಸುಮಾರು ಒಂದು ಕಿ.ಮೀ. ದೂರಕ್ಕೆ ಕೇಳಿಸುವಷ್ಟು ಪ್ರಬಲವಾಗಿದೆ. ಕೆನೊಪಿ ಮೇಲೆ 4 ದೊಡ್ಡ ಹಾರನ್ ಇದೆ. ಬಸ್ ಒಳಗಡೆ 7 ಆಸನಗಳಿವೆ. ಹೋಂ ಥಿಯೇಟರ್ ಇದೆ. 32 ಇಂಚಿನ ಟಿವಿ, ಚಾಲಕನ ಜೊತೆ ಮಾತನಾಡಲು ಇಂಟರ್‍ಕಾಂ ವ್ಯವಸ್ಥೆ ಇದೆ. ಜನರೇಟರ್ ಇದೆ. ಆಡಿಯೋ ಸಿಸ್ಟಂ, ಕ್ಯಾಮೆರಾ, ಹೊರಮುಖವಾಗಿ ಎಲ್‍ಇಡಿ ಡಿಸ್‍ಪ್ಲೇ ಇದೆ ಎಂದು ಅವರು ತಿಳಿಸಿದರು.

ಚುನಾವಣಾ ಗೀತೆ, ಭಾಷಣ ಕೇಳಿಸುವುದಲ್ಲದೆ, 5 ಸಾವಿರ ಜನರಿಗೆ ಬಸ್‍ನಿಂದ ಭಾಷಣ ಮಾಡುವ ವ್ಯವಸ್ಥೆ ಒಳಗೊಂಡಿದೆ. ಯಾತ್ರೆ ಯಶಸ್ವಿಗೆ ಮುಂಚಿತವಾಗಿಯೇ 4 ಸಪೋರ್ಟ್ ವಾಹನ ತೆರಳಲಿದೆ. ಅದು ಕೂಡ ಬ್ರ್ಯಾಂಡೆಡ್ ಆಗಿದೆ. ಮಾಧ್ಯಮದವರು ವಿಡಿಯೋ, ಫೋಟೋ ತೆಗೆಯಲು ಅನುಕೂಲ ಮಾಡಿಕೊಡಲು 4 ಮೀಡಿಯಾ ವೆಹಿಕಲ್ ಇರುತ್ತದೆ ಎಂದು ರವಿಕುಮಾರ್ ಹೇಳಿದರು.

ರಥಯಾತ್ರೆ, ಪಾದಯಾತ್ರೆ, ಕಾರ್ಯಕರ್ತರ ಪರಿಶ್ರಮ, ನಾಯಕರ ಪರಿಶ್ರಮದಿಂದ ಬಿಜೆಪಿಯನ್ನು ದೇಶದಲ್ಲಿ ಕಟ್ಟಿದ್ದೇವೆ. ಹೋರಾಟಗಳು, ಆಂದೋಲನಗಳು, ಅಭಿವೃದ್ಧಿ ಕಾರ್ಯಗಳು ನಮ್ಮ ಬಿಜೆಪಿಗೆ ದೇಶ ಮತ್ತು ರಾಜ್ಯದಲ್ಲಿ 2 ಸೀಟಿನಿಂದ ಸಂಪೂರ್ಣ ಬಹುಮತ ತಂದುಕೊಡುವಲ್ಲಿ ರಥಯಾತ್ರೆಗಳು ಮುಖ್ಯ ಪಾತ್ರ ವಹಿಸಿವೆ ಎಂದು ಅವರು ತಿಳಿಸಿದರು.

share
Next Story
X