Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಂಪಿನಿಂದ ಮತಾಂತರ ಆರೋಪ:...

ಗುಂಪಿನಿಂದ ಮತಾಂತರ ಆರೋಪ: ಘಾಝಿಯಾಬಾದ್‌ನಲ್ಲಿ ಪಾದ್ರಿ ಹಾಗೂ ಪತ್ನಿಯನ್ನು ಬಂಧಿಸಿದ ಪೊಲೀಸರು

28 Feb 2023 3:03 PM IST
share
ಗುಂಪಿನಿಂದ ಮತಾಂತರ ಆರೋಪ: ಘಾಝಿಯಾಬಾದ್‌ನಲ್ಲಿ ಪಾದ್ರಿ ಹಾಗೂ ಪತ್ನಿಯನ್ನು ಬಂಧಿಸಿದ ಪೊಲೀಸರು

ಘಾಝಿಯಾಬಾದ್: ಒತ್ತಡ ಹಾಗೂ ಆಮಿಷದ ಮೂಲಕ ಘಾಝಿಯಾಬಾದ್ ನಿವಾಸಿಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡುತ್ತಿದ್ದರು ಎಂಬ ಆರೋಪದಲ್ಲಿ ಪಾದ್ರಿ ಹಾಗೂ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು scroll.in ವರದಿ ಮಾಡಿದೆ.

ಹಿಂದುತ್ವವಾದಿ ಸಂಘಟನೆಯಾದ ಬಜರಂಗ ದಳದ ಕಾರ್ಯಕರ್ತರು ನೀಡಿದ ದೂರನ್ನು ಆಧರಿಸಿ ಪಾದ್ರಿ ಸಂತೋಷ್ ಜಾನ್ ಹಾಗೂ ಅವರ ಪತ್ನಿ ಜೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆದರೆ, ಜಾನ್ ಹಾಗೂ ಅವರ ಪತ್ನಿಗೆ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಕ್ರಿಶ್ಚಿಯನ್ ಕಾರ್ಯಕರ್ತೆ ಮೀನಾಕ್ಷಿ ಸಿಂಗ್  ಮತಾಂತರದ ಆರೋಪವನ್ನು ನಿರಾಕರಿಸಿದ್ದಾರೆ.

"ರವಿವಾರ ಪಾದ್ರಿ ಹಾಗೂ ಅವರ ಪತ್ನಿ ಸೇವಾಕಾರ್ಯ ನಡೆಸುವಾಗ ಸ್ಥಳಕ್ಕೆ ಆಗಮಿಸಿದ ಪುಂಡರ ಗುಂಪೊಂದು ಪ್ರಕ್ಷುಬ್ಧ ವಾತಾವರಣ ನಿರ್ಮಿಸಿತಲ್ಲದೆ, ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ,  ನಂತರ ಪೊಲೀಸರಿಗೆ ಕರೆ ಮಾಡಿತು. ಪೊಲೀಸರು ಪಾದ್ರಿ ಹಾಗೂ ಅವರ ಪತ್ನಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದರಾದರೂ, ವಿಚಾರಣೆಯ ನಂತರ ಬಿಡುಗಡೆ ಮಾಡಿದರು" ಎಂದು ಮೀನಾಕ್ಷಿ ಸಿಂಗ್ ಪ್ರತಿಪಾದಿಸಿದ್ದಾರೆ.

40-50 ಮಂದಿಯ ಗುಂಪು ಪೊಲೀಸ್ ಠಾಣೆಯೆದುರು ಪ್ರತಿಭಟನೆ ನಡೆಸಿ ಅವರ ಬಂಧನಕ್ಕೆ ಒತ್ತಾಯಿಸಿದ್ದರಿಂದ ಪೊಲೀಸರು ಮತ್ತೆ ದಂಪತಿಗಳನ್ನು ವಶಕ್ಕೆ ಪಡೆದರು. ಪುಂಡರ ಗುಂಪಿನಿಂದ ಒತ್ತಡಕ್ಕೆ ಒಳಗಾಗಿದ್ದರಿಂದ ಪೊಲೀಸರು ಮತ್ತೆ ಅವರನ್ನು ವಶಕ್ಕೆ ಪಡೆದಿದ್ದಾರೆ. ದಂಪತಿಗಳ ಫೋನ್ ಹಾಗೂ ಲ್ಯಾಪ್‌ಟಾಪ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದೂ ಅವರು ಹೇಳಿದ್ದಾರೆ.

ಉತ್ತರ ಪ್ರದೇಶ ಕಾನೂನುಬಾಹಿರ ಧಾರ್ಮಿಕ ಮತಾಂತರ ಸುಗ್ರೀವಾಜ್ಞೆ, 2020ರ ಅಡಿಯಲ್ಲಿ ಘಾಝಿಯಾಬಾದ್ ನಿವಾಸಿ ಪ್ರವೀಣ್ ನಾಗರ್ ಎಂಬುವವರು ಸಲ್ಲಿಸಿರುವ ದೂರನ್ನು ಆಧರಿಸಿ, ಪ್ರಾಥಮಿಕ ಮಾಹಿತಿ ವರದಿಯನ್ನು ದಾಖಲಿಸಲಾಗಿದೆ.

ಮೀನಾಕ್ಷಿ ಸಿಂಗ್ ಪ್ರಕಾರ, ಈ ಪ್ರಕರಣವನ್ನು ರವಿವಾರ ರಾತ್ರಿ 9.30ರ ಹೊತ್ತಿಗೆ ದಾಖಲಿಸಲಾಗಿದೆ. ಸೋಮವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೋರ್ಟ್ ದಂಪತಿಗಳಿಗೆ ಜಾಮೀನು ನಿರಾಕರಿಸಿದೆ.

ಸುಪ್ರೀಂಕೋರ್ಟ್ ಮಾರ್ಗಸೂಚಿ ಪ್ರಕಾರ, ಅಪರಾಧ ದಂಡ ಸಂಹಿತೆಯ ಸೆಕ್ಷನ್ 41ರನ್ವಯ ಯಾವುದೇ ಅಪರಾಧ ಏಳು ವರ್ಷಗಳಿಗಿಂತ ಕಡಿಮೆ ಅವಧಿಯ ಶಿಕ್ಷೆಯನ್ನು ಮಾತ್ರ ಆಕರ್ಷಿಸುವಂತಿದ್ದರೆ ಅಂತಹ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿ, ಪೊಲೀಸರು ಬಂಧಿಸಬಹುದಾಗಿದೆ.

Goons barged into a Church in Delhi NCR & disrupted Sunday worship service on Feb 26. They got Pastor Santosh Abraham & his wife arrested! In this "free" country any Christian can be booked on as baseless an allegation as "forced conversion"@USCIRF @India_NHRC @INCIndia @hrw pic.twitter.com/Vylvrqns5C

— Philip Eapen (@ppeapen) February 27, 2023
share
Next Story
X