Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಮಾ.1, 2ರ ಸಂಜೆ ಪಶ್ಚಿಮ...

ಉಡುಪಿ: ಮಾ.1, 2ರ ಸಂಜೆ ಪಶ್ಚಿಮ ಆಕಾಶದಲ್ಲಿ ಗ್ರಹಗಳೆರಡರ ಮೋಡಿ

28 Feb 2023 6:56 PM IST
share
ಉಡುಪಿ: ಮಾ.1, 2ರ ಸಂಜೆ ಪಶ್ಚಿಮ ಆಕಾಶದಲ್ಲಿ ಗ್ರಹಗಳೆರಡರ ಮೋಡಿ

ಉಡುಪಿ, ಫೆ.28: ಈಗ ಕೆಲವು ದಿನಗಳಿಂದ ಸಂಜೆಯ ವೇಳೆ ಪಶ್ಚಿಮ ಆಕಾಶದಲ್ಲಿ ಗುರು-ಶುಕ್ರರ ಜೋಡಿ ಬಲು ಸುಂದರವಾಗಿ ಕಾಣುತ್ತಿದೆ. ಇವುಗಳಿಗೆ ಕಲಶವಿಟ್ಟಂತೆ ಮಾ.1ರ ಬುಧವಾರ ಸಂಜೆ ಗುರು ಗ್ರಹ, ಶುಕ್ರ ಗ್ರಹದ ಅರ್ಧ ಡಿಗ್ರಿ ಸಮೀಪ ಕಾಣಿಸಲಿದೆ.

ಬರೇ ಕಣ್ಣಿಗೆ ಕಾಣುವ ಅತಿ ಸುಂದರ ಗ್ರಹಗಳಾದ ಗುರು ಹಾಗೂ ಶುಕ್ರರ ಜೋಡಾಟ ಈಗ ಆಕಾಶದಲ್ಲಿ ನಡೆಯುತ್ತಿದೆ. ಗುರು ಗ್ರಹ ಹಾಗೂ ಶುಕ್ರ ಗ್ರಹಗಳು ಬರೇ ಕಣ್ಣಿಗೂ ಕಾಣಲು ಅತಿ ಸುಂದರ. ಇವು ಈಗ ಕೆಲ ದಿನಗಳಿಂದ ಪಶ್ಚಿಮ ಆಕಾಶದಲ್ಲಿ ಸಂಜೆಯಾಗುತ್ತಿದ್ದಂತೆ ಸೂರ್ಯಾಸ್ತಕ್ಕೆ ಹಿಡಿದ ಅವಳಿ ದೀವಟಿಕೆಯೋ ಎನ್ನುವಂತೆ ಅಕ್ಕಪಕ್ಕದಲ್ಲಿ ಹೊಳೆಯುತ್ತಿರುತ್ತವೆ. ಇದೊಂದು ಆಕಾಶದಲ್ಲಿ ಕಾಣಸಿಗುವ ಅಪರೂಪದ ವಿದ್ಯಾಮಾನ.

ಅವುಗಳಲ್ಲೂ ನಾನೇ ಚೆಂದವೆಂದು ಹೊಳೆಯುತ್ತಿರುವ ಶುಕ್ರ ಗ್ರಹ ಈಗ ಭೂಮಿಯಿಂದ ಸುಮಾರು 20.5 ಕೋಟಿ ಕಿಮೀ ದೂರದಲ್ಲಿದ್ದರೆ, ಗುರು ಗ್ರಹವೀಗ ಭೂಮಿಯಿಂದ 86 ಕೋಟಿ ಕಿಮೀನಷ್ಟು ದೂರದಲ್ಲಿದೆ. ಗುರು ಗ್ರಹದ ಗಾತ್ರ  ಶುಕ್ರನಿಗಿಂತ ಸುಮಾರು 1400ರಷ್ಟು ದೊಡ್ಡದು. ಆದರೂ ಶುಕ್ರ ಫಳಫಳ ಹೊಳೆಯುತ್ತಿದೆ.

ಶುಕ್ರ ಗ್ರಹ ಹೊಳೆಯಲು ಆ ಗ್ರಹದ ವಾತಾವರಣವೇ ಕಾರಣ. ಸ್ವಯಂ ಪ್ರಭೆ ಇಲ್ಲದ ಈ ಗ್ರಹದ ವಾತಾವರಣದಲ್ಲಿರುವ ಕಾರ್ಬನ್‌ನ ಅಕ್ಸೈಡುಗಳು ಹಾಗೂ ಸಲ್ಫರ್ ಡೈಆಕ್ಸೈಡ್‌ನ ತೆಳು ಕವಚ ಸುಮಾರು ಶೇ.80 ಅಂಶ ಸೂರ್ಯನ ಬೆಳಕನ್ನು ಪ್ರತಿಫಲಿಸುವುದೇ ಇದಕ್ಕೆ ಕಾರಣ.

ಶುಕ್ರ ಗ್ರಹ ಆಗಸ್ಟ್‌ವರೆಗೂ ಸಂಜೆ ಆಕಾಶದಲ್ಲಿ ಬೇರೆ ಬೇರೆ ಎತ್ತರದಲ್ಲಿ ಹೊಳೆಯಲಿದೆ. ಆದರೆ ಗುರು ಗ್ರಹ ಕೆಲವೇ ದಿನಗಳಲ್ಲಿ ಮರೆಯಾಗಲಿದೆ. ಸಂಜೆಯ ಸೂರ್ಯಾಸ್ತ  ಹಾಗೂ ಸೂರ್ಯೋದಯ ಕೆಂಬಣ್ಣದ ಬಣ್ಣ ಈಗ ಅತಿ ಸುಂದರ ಎನ್ನುತ್ತಾರೆ ಉಡುಪಿಯ ಭೌತ ವಿಜ್ಞಾನಿ ಹಾಗೂ ನಿವೃತ್ತ ಪ್ರಾಧ್ಯಾಪಕ ಡಾ.ಎ.ಪಿ.ಭಟ್. 

ಆಕಾಶಕಾಯ ಹಾಗೂ ಭೌತಶಾಸ್ತ್ರದ ಆಸಕ್ತರು ಈ ಅಪರೂಪದ ವಿದ್ಯಾಮಾನವನ್ನು ನೋಡಿ ಆನಂದಿಸುವಂತೆ ಡಾ.ಎ.ಪಿ. ಭಟ್ ಸಲಹೆ ನೀಡಿದ್ದಾರೆ. 

share
Next Story
X