Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮರ್ಕಝ್ ಸಮ್ಮೇಳನ ಯಶಸ್ವಿಗೊಳಿಸಲು...

ಮರ್ಕಝ್ ಸಮ್ಮೇಳನ ಯಶಸ್ವಿಗೊಳಿಸಲು ಸಖಾಫೀಸ್ ಸಂಘಟನೆ ಕರೆ

28 Feb 2023 11:12 PM IST
share
ಮರ್ಕಝ್ ಸಮ್ಮೇಳನ ಯಶಸ್ವಿಗೊಳಿಸಲು ಸಖಾಫೀಸ್ ಸಂಘಟನೆ ಕರೆ

ಮಂಗಳೂರು: ವಿಶ್ವವಿಖ್ಯಾತ ಸಮನ್ವಯ ಶಿಕ್ಷಣ ಸಂಸ್ಥೆ, ಸುನ್ನೀ ಸಾಂಸ್ಕ್ರತಿಕ ಕೇಂದ್ರ ’ಮರ್ಕಝ್ ಸಖಾಫತಿ ಸುನ್ನಿಯ್ಯ ಇದರ ಘಟಿಕೋತ್ಸವ ಹಾಗೂ ಖತ್ಮುಲ್ ಬುಖಾರಿ ಮಹಾ ಸಂಗಮವು ಮಾರ್ಚ್ 2ರಂದು ಬೆಳಗ್ಗೆ ಹತ್ತು ಗಂಟೆಗೆ ಕೋಝಿಕ್ಕೋಡ್‌ ಕಾರಂದೂರು ಮರ್ಕಝ್ ನಲ್ಲಿ ನಡೆಯಲಿದೆ.

ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ  ಈ ವಿಷಯ ತಿಳಿಸಿದ ಕೇಂದ್ರ ಸಖಾಫಿ ಶೂರಾ ನಾಯಕರಾದ ಡಾ. ಎಮ್ಮೆಸ್ಸೆಂ ಝೈನಿ  ಕಾಮಿಲ್ ಸಖಾಫಿ ಅವರು  ಮರ್ಕಝ್ ಶರೀಅತ್ ಕಾಲೇಜಿನಲ್ಲಿ ಕಲಿತ 437 ವಿದ್ಯಾರ್ಥಿಗಳಿಗೆ ಫಾಝಿಲ್ ಸಖಾಫಿ, ಶರೀಅತ್ ಕಾಲೇಜ್ ಸ್ನಾತಕೋತ್ತರ ವಿಭಾಗದಿಂದ ಹೊರಬರುವ 62 ವಿದ್ಯಾರ್ಥಿಗಳಿಗೆ ಕಾಮಿಲ್ ಸಖಾಫಿ  ಹಾಗೂ ಮರ್ಕಝ್ ನಾಲೇಜ್ ಸಿಟಿಯಲ್ಲಿ ವ್ಯಾಸಂಗ ಮುಗಿಸಿದ 33 ವಿದ್ಯಾರ್ಥಿಗಳಿಗೆ  ವಾರಿಸ್ ಸಖಾಫಿ ಪದವಿ  ಸೇರಿದಂತೆ ಒಟ್ಟು 532 ವಿದ್ಯಾರ್ಥಿಗಳಿಗೆ ಬಿರುದು   ನೀಡಲಾಗುತ್ತದೆ ಎಂದು  ಹೇಳಿದರು.

1978 ರಲ್ಲಿ ಪ್ರಾರಂಭಗೊಂಡ  ಮರ್ಕಝುಸ್ಸಖಾಫತಿ ಸುನ್ನಿಯ್ಯದ ಅಧೀನದಲ್ಲಿ ದೇಶದ ವಿವಿಧ ಭಾಗಗಳಲ್ಲಿ ಹಾಗೂ ದೇಶದ ಹೊರಗೂ ಸಾವಿರಾರು ಶಿಕ್ಷಣ ಸಂಸ್ಥೆಗಳು ಕಾರ್ಯಾಚರಿಸುತ್ತಿವೆ. ಕೋಝಿಕ್ಕೋಡ್ ಸಮೀಪ ಕೈದಪ್ಪೋಯಿಲ್‌ನಲ್ಲಿ ಕಾರ್ಯಾಚರಿಸುತ್ತಿರುವ ಮರ್ಕಝ್ ನಾಲೇಜ್ ಸಿಟಿ’ಯು ಈಗಾಗಾಲೇ ದೇಶದ ಶೈಕ್ಷಣಿಕ ಭೂಪಟದಲ್ಲಿ ಗುರುತಿಸಲ್ಪಟ್ಟ ಜ್ಞಾನ ನಗರಿಯಾಗಿದೆ ಎಂದರು.

ಕಳೆದ ನಾಲ್ಕುವರೆ  ದಶಕಗಳಿಂದ ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಅನನ್ಯ ಸೇವೆಗಳನ್ನು ಮಾಡಿರುವ  ಮರ್ಕಝ್ ಸಂಸ್ಥೆಗಳು ಭಾರತದ ಗ್ರಾಂಡ್ ಮುಫ್ತಿ  ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕರ್ ಮುಸ್ಲಿಯಾರ್ ಸಾರಥ್ಯದಲ್ಲಿ ಅನುಪಮವಾಗಿ ಮುನ್ನಡೆಯುತ್ತಿದೆ ಎಂದು ನುಡಿದರು.

ಮಾರ್ಚ್ 2ರಂದು ಗುರುವಾರ ಬೆಳಗ್ಗೆ ಹತ್ತು ಗಂಟೆಯಿಂದ ರಾತ್ರಿ ತನಕ ನಡೆಯುವ ಸಮ್ಮೇಳನದಲ್ಲಿ ಸನದುದಾನ, ದಿಕ್ರ್ ಹಲ್ಖಾ,  ಖತ್ಮುಲ್ ಬುಖಾರಿ,ಉಲಮಾ ಸಂಗಮ, ದಸ್ತಾರ್ ಬಂದೀ, ಮೀಡಿಯಾ ಸೆಮಿನಾರ್ ಹಾಗೂ ಯುಎಇ ರಾಷ್ಟ್ರಪಿತ  ಶೈಖ್ ಝಾಯಿದ್ ಹೆಸರಿನಲ್ಲಿ ಪೀಸ್ ಕಾನ್ಸರೆನ್ಸ್ ನಡೆಯಲಿದೆ ಎಂದು ಡಾ. ಎಮ್ಮೆಸ್ಸೆಂ ಝೈನಿ  ಕಾಮಿಲ್ ಸಖಾಫಿ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಸಖಾಫಿ ಕೌನ್ಸಿಲ್ ಅಧ್ಯಕ್ಷ  ಪಿಪಿ ಅಹ್ಮದ್ ಸಖಾಫಿ ಕಾಶಿಪಟ್ಟ, ಪ್ರಧಾನ ಕಾರ್ಯದರ್ಶಿ  ಕೆಕೆಎಂ ಕಾಮಿಲ್ ಸಖಾಫಿ , ಕಾರ್ಯದರ್ಶಿಗಳಾದ   ಬಿ ಕೆ ಉಸ್ಮಾನ್ ಸಖಾಫಿ ಕಣ್ಣೂರು ಮತ್ತು ಮುಸ್ತಫ ಸಖಾಫಿ ಬೇಂಗಿಲ ,ಉಪಾಧ್ಯಕ್ಷ  ಬಿ.ಎಂ. ಮುಹಮ್ಮದ್ ಕಾಮಿಲ್ ಸಖಾಫಿ ಉಪಸ್ಥಿತರಿದ್ದರು

share
Next Story
X