Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸದನದ ಸದಸ್ಯರು ವಿಪ್‌ಗೆ ಬದ್ಧರಾಗಬೇಕು,...

ಸದನದ ಸದಸ್ಯರು ವಿಪ್‌ಗೆ ಬದ್ಧರಾಗಬೇಕು, ಇಲ್ಲದೇ ಹೋದರೆ ಅನರ್ಹತೆ ಕ್ರಮ ಎದುರಿಸಬಹುದು : ಸುಪ್ರೀಂ ಕೋರ್ಟ್‌

1 March 2023 12:26 PM IST
share
ಸದನದ ಸದಸ್ಯರು ವಿಪ್‌ಗೆ ಬದ್ಧರಾಗಬೇಕು, ಇಲ್ಲದೇ ಹೋದರೆ ಅನರ್ಹತೆ ಕ್ರಮ ಎದುರಿಸಬಹುದು : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಸದನವೊಂದರ ಸದಸ್ಯರು ವಿಪ್‌ಗೆ ಬದ್ಧರಾಗಬೇಕಿದೆ ಹಾಗೂ ಆಡಳಿತ ಮೈತ್ರಿಕೂಟದ ಭಾಗವಾಗಿರುವ ಒಂದು ರಾಜಕೀಯ ಪಕ್ಷದೊಳಗಿನ ಯಾವುದೇ ಶಾಸಕರ ಒಂದು ಗುಂಪು ತಾವು ಮೈತ್ರಿಕೂಟದ ಭಾಗವಾಗಿರಲು ಬಯಸುವುದಿಲ್ಲ ಎಂದು ಹೇಳಿದರೆ ಅವರನ್ನು ಅನರ್ಹಗೊಳಿಸಬಹುದು, ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

"ಒಮ್ಮೆ ಒಂದು ಸರ್ಕಾರ ರಚನೆಯಾದ ನಂತರ, ಆಡಳಿತ ಪಕ್ಷದ ಶಾಸಕರ ಯಾವುದೇ ಗುಂಪಿಗೆ ತಾವು ಈ ಮೈತ್ರಿಕೂಟದಲ್ಲಿ ಮುಂದುವರಿಯಲು ಬಯಸುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಹಾಗೆ ಮಾಡಿದರೆ ಅನರ್ಹತೆಗೊಳಿಸುವುದಕ್ಕೆ ಸಂಬಂಧಿಸಿದ ನಿಯಮಗಳನ್ನು ಅನ್ವಯಿಸಬಹುದು. ಸದಸ್ಯರು ವಿಪ್‌ಗೆ ಬದ್ಧರಾಗಬೇಕು ಹಾಗೂ ವಿಲೀನವಾಗದ ಹೊರತು ಸದನದಲ್ಲಿ ಪಕ್ಷದ ಪರ ಮತ ಚಲಾಯಿಸಲು ಬದ್ಧರು," ಎಂದು ಪಂಚ ಸದಸ್ಯರ ಸಂವಿಧಾನಿಕ ಪೀಠದ ನೇತೃತ್ವ ವಹಿಸಿದ್ದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ತಿಳಿಸಿದರು.

ಶಿವಸೇನೆಯಲ್ಲಿ ಉಂಟಾದ ಒಡಕಿನಿಂದ ಕಳೆದ ವರ್ಷ ರಾಜಸ್ಥಾನದಲ್ಲಿ ಉದ್ಭವಿಸಿದ ರಾಜಕೀಯ ಬಿಕ್ಕಟ್ಟಿನ ನಂತರ ಸಲ್ಲಿಸಲಾಗಿದ್ದ ಹಲವು ಅರ್ಜಿಗಳ ವಿಚಾರಣೆ ವೇಳೆ ಮೇಲಿನಂತೆ ಸುಪ್ರೀಂ ಕೋರ್ಟ್‌ ಹೇಳಿದೆ.

"ನಾವು ಮೈತ್ರಿಕೂಟದ ಜೊತೆ ಹೋಗಲು ಬಯಸುವುದಿಲ್ಲ ಎಂದು ಯಾರೂ ಹೇಳಲು ಸಾಧ್ಯವಿಲ್ಲ. ಹಾಗೆ ಮಾಡಬೇಕಿದ್ದರೆ ನಿಮ್ಮ ನಾಯಕನ ಬಳಿ ಹೋಗಿ ಸದನದ ಹೊರಗೆ ನಿರ್ಧಾರ ಕೈಗೊಳ್ಳಿ. ಸದನದ ಸದಸ್ಯರಾಗಿರುವಷ್ಟು ಕಾಲ ಸದನದ ಶಿಸ್ತಿಗೆ ಬದ್ಧರಾಗಬೇಕು. ಹಾಗಿರುವಾಗ ನಿಮ್ಮ ಪಕ್ಷದ ಪರ ಮತ ಚಲಾಯಿಸಬೇಕು," ಎಂದು ಮುಖ್ಯ ನ್ಯಾಯಮೂರ್ತಿಗಳು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಬಣ ಪರ ವಕೀಲ ಎನ್‌ ಕೆ ಕೌಲ್‌ ಅವರ ವಾದ ಮಂಡನೆ ನಂತರ ಹೇಳಿದರು.

ಸಂವಿಧಾನಿಕ ಪೀಠದಲ್ಲಿ ನ್ಯಾಯಮೂರ್ತಿಗಳಾದ ಎಂ ಆರ್‌ ಶಾ, ಕೃಷ್ಣ ಮುರಾರಿ, ಹಿಮಾ ಕೊಹ್ಲಿ ಮತ್ತು ಪಿ ಎಸ್‌ ನರಸಿಂಹ ಕೂಡ ಇದ್ದಾರೆ.

"ಒಂದು ದಿನ ಎರಡು ರಾಜಕೀಯ ವಿಪ್‌ಗಳಿದ್ದವು. ನಾವು ಪಕ್ಷದ ತೀರ್ಮಾನವನ್ನು ಪಾಲಿಸುತ್ತಿದ್ದೇವೆ. ಆದರೆ ನನ್ನ ರಾಜಕೀಯ ವಿಪ್‌ ಅಥವಾ ಅವರ ರಾಜಕೀಯ ವಿಪ್‌ ನಡುವೆ ನಿಜವಾದ ವಿಪ್‌ ಯಾವುದು ಎಂಬುದು ಪ್ರಶ್ನೆ," ಎಂದು ಕೌಲ್‌ ಹೇಳಿದರಲ್ಲದೆ ಶಾಸಕರ ಬಂಡಾಯದ ನಂತರ ರಾಜ್ಯಪಾಲರು ವಿಶ್ವಾಸಮತ ಯಾಚನೆಗೆ ಸೂಚಿಸುವುದು ಸರಿಯಾದ ಕ್ರಮ ಎಂದರು. ಆಗ ಪ್ರತಿಕ್ರಿಯಿಸಿದ ಸಿಜೆಐ ಯಾವುದೇ ರಾಜಕೀಯ ಪಕ್ಷ ಮೈತ್ರಿಕೂಟದಿಂದ ಹಿಂದೆ ಸರಿದಿದ್ದರೆ ಈ ಪ್ರಶ್ಣೆ ಬರುತ್ತದೆ ಎಂದು ಹೇಳಿದರು.

share
Next Story
X