Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಯಾಗ್ ರಾಜ್: ಗ್ಯಾಂಗ್ ಸ್ಟರ್ ಅತಿಕ್ ...

ಪ್ರಯಾಗ್ ರಾಜ್: ಗ್ಯಾಂಗ್ ಸ್ಟರ್ ಅತಿಕ್ ಅಹ್ಮದ್ ಸಹಚರನ ಮನೆ ಬುಲ್ಡೋಝರ್ ಮೂಲಕ ಧ್ವಂಸ

1 March 2023 1:49 PM IST
share
ಪ್ರಯಾಗ್ ರಾಜ್: ಗ್ಯಾಂಗ್ ಸ್ಟರ್ ಅತಿಕ್  ಅಹ್ಮದ್ ಸಹಚರನ ಮನೆ ಬುಲ್ಡೋಝರ್ ಮೂಲಕ ಧ್ವಂಸ

ಲಕ್ನೋ: ಉತ್ತರ ಪ್ರದೇಶದಲ್ಲಿ ಕೊಲೆ ಪ್ರಕರಣದ ಸಾಕ್ಷಿಯೊಬ್ಬರನ್ನು ಹಗಲು ಹೊತ್ತಿನಲ್ಲಿ ಹತ್ಯೆಗೈದ ಐದು  ದಿನಗಳ ಬಳಿಕ ಹತ್ಯೆಗೆ ಸಂಚು ರೂಪಿಸಿದ್ದ ಆರೋಪ ಹೊತ್ತಿರುವ ದರೋಡೆಕೋರ ಅತಿಕ್ ಅಹ್ಮದ್  ಹತ್ತಿರದ ಸಂಬಂಧಿಯ ಮನೆಯನ್ನು  ಆದಿತ್ಯನಾಥ್ ಸರಕಾರವು ಬುಧವಾರ ಬುಲ್ಡೋಝರ್‌ ಮೂಲಕ ಧ್ವಂಸಗೊಳಿಸಿದೆ.

2005ರಲ್ಲಿ ರಾಜಕಾರಣಿ ರಾಜು ಪಾಲ್  ಕೊಲೆ ಪ್ರಕರಣದ ಸಾಕ್ಷಿಯಾಗಿದ್ದ ವಕೀಲ ಉಮೇಶ್ ಪಾಲ್ ನನ್ನು ಪ್ರಯಾಗ್‌ರಾಜ್‌ನಲ್ಲಿರುವ ಆತನ ಮನೆಯ ಹೊರಗೆ ಶುಕ್ರವಾರ ನಡೆದ ಗುಂಡಿನ ಚಕಮಕಿಯಲ್ಲಿ ಕೊಲ್ಲಲಾಗಿತ್ತು. ಐವರು ನಡೆಸಿದ ಗುಂಡಿನ ದಾಳಿಯಲ್ಲಿ ಪಾಲ್ ಅವರ ಭದ್ರತಾ ಸಿಬ್ಬಂದಿಯೂ ಸಾವನ್ನಪ್ಪಿದ್ದ.

ಗ್ಯಾಂಗ್ ಸ್ಟರ್ -ರಾಜಕಾರಣಿ ಹಾಗೂ  ಸಮಾಜವಾದಿ ಪಕ್ಷದ ಮಾಜಿ ನಾಯಕ ಅತಿಕ್ ಅಹ್ಮದ್ ಹತ್ಯೆಯನ್ನು ಯೋಜಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಅತಿಕ್ ಅಹ್ಮದ್ ನ ಕಡು ಪ್ರತಿಸ್ಪರ್ಧಿಯಾಗಿದ್ದ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಶಾಸಕ ರಾಜು ಪಾಲ್ ಅವರ ಹತ್ಯೆಯನ್ನು ಉಮೇಶ್ ಪಾಲ್ ಕಣ್ನಾರೆ ನೋಡಿದ್ದ. ಅಹಮದಾಬಾದ್‌ನ ಜೈಲಿನಲ್ಲಿರುವ ಅತಿಕ್ ಅಹ್ಮದ್ ಸಾಕ್ಷಿಯನ್ನು ಕೊಲ್ಲಲು ತನ್ನ ಹತ್ತಿರದ ಐದು ಅಥವಾ ಆರು ಸಹಚರರನ್ನು ಕಳುಹಿಸಿದ್ದಾಗಿ ಹೇಳಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಶೂಟೌಟ್‌ ಬಳಿಕ ನಾಪತ್ತೆಯಾಗಿರುವ ಅತಿಕ್ ಅಹ್ಮದ್ ಇನ್ನೊಬ್ಬ ಆಪ್ತ ಸಹಾಯಕ ಜಾಫರ್ ಅಹ್ಮದ್  ಗೆ ಸೇರಿರುವ  ಪ್ರಯಾಗ್‌ರಾಜ್‌ನಲ್ಲಿರುವ ಮನೆಯನ್ನು ಕೆಡವಲು ಇಂದು ಬೆಳಗ್ಗೆ ಬುಲ್ಡೋಝರ್‌ಗಳು ಆಗಮಿಸಿವೆ. 

ಇಂದು ಮುಂಜಾನೆ ಪೊಲೀಸರು ಲಕ್ನೋದಲ್ಲಿರುವ ಅತಿಕ್ ಅಹ್ಮದ್ ಮನೆಯ ಮೇಲೆ ದಾಳಿ ನಡೆಸಿ ಎರಡು ಐಷಾರಾಮಿ ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

share
Next Story
X