Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಸ್ತೆ, ನೆಟ್‌ವರ್ಕ್ ಮೂಲಸೌಕರ್ಯ ವಂಚಿತ...

ರಸ್ತೆ, ನೆಟ್‌ವರ್ಕ್ ಮೂಲಸೌಕರ್ಯ ವಂಚಿತ ಮಡಾಮಕ್ಕಿ ಗ್ರಾಮಸ್ಥರು!

ಐದಾರು ದಶಕಗಳಿಂದ ಅಭಿವೃದ್ಧಿ ಮರಿಚಿಕೆ; ಚುನಾವಣೆ ಬಹಿಷ್ಕಾರ ಎಚ್ಚರಿಕೆ

1 March 2023 8:44 PM IST
share
ರಸ್ತೆ, ನೆಟ್‌ವರ್ಕ್ ಮೂಲಸೌಕರ್ಯ ವಂಚಿತ ಮಡಾಮಕ್ಕಿ ಗ್ರಾಮಸ್ಥರು!
ಐದಾರು ದಶಕಗಳಿಂದ ಅಭಿವೃದ್ಧಿ ಮರಿಚಿಕೆ; ಚುನಾವಣೆ ಬಹಿಷ್ಕಾರ ಎಚ್ಚರಿಕೆ

ಕುಂದಾಪುರ, ಮಾ.1: ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಕುಂದಾಪುರ ವಿಧಾನಸಭಾ ಕ್ಷೇತ್ರದ ಮಡಾಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ಬಹಿಷ್ಕಾರದ ಕೂಗು ಕೇಳಿಬರುತ್ತಿದೆ.

ನಕ್ಸಲ್ ಪೀಡಿತ ಪ್ರದೇಶವೆಂಬ ಹಣೆಪಟ್ಟಿ ಹೊತ್ತಿರುವ ಅರಣ್ಯ ತಪ್ಪಲು ಭಾಗದ ಮಡಾಮಕ್ಕಿ ಗ್ರಾಪಂ ವ್ಯಾಪ್ತಿಯ ಕುಂಟಾಮಕ್ಕಿ, ಹಂಜ, ಕಾರಿಮನೆ, ಹಾಗೂ ಎಡಮಲೆ ಜನರು ಕಳೆದ ಐದಾರು ದಶಕಗಳಿಂದ ಮೂಲಸೌಕರ್ಯ ದಿಂದ ವಂಚಿತರಾಗಿದ್ದಾರೆ. ಸುಮಾರು 8 ಕಿ.ಮೀ ವ್ಯಾಪ್ತಿಯಲ್ಲಿ ರಸ್ತೆಯೇ ಇಲ್ಲ. ಮೊಬೈಲ್ ನೆಟ್‌ವರ್ಕ್ ಸಿಗುತ್ತಿಲ್ಲ. ಬಸ್ ಸಂಪರ್ಕದ ಭಾಗ್ಯ ಈ ಭಾಗಕ್ಕೆ ಇನ್ನೂ ಸಿಕ್ಕಿಲ್ಲ.

ಪರಿಶಿಷ್ಟ ಜಾತಿ-ಪಂಗಡದ 8 ಮನೆಗಳು ಸಹಿತ 60 ಕುಟುಂಬಗಳು ಇಲ್ಲಿ ವಾಸಿಸುತ್ತಿದ್ದು ಕೃಷಿ-ಕೂಲಿ ನೆಚ್ಚಿಕೊಂಡ ಬಹುತೇಕ ಹಿಂದುಳಿದ ವರ್ಗದವರು. 50 ಅಧಿಕ ವಿದ್ಯಾರ್ಥಿಗಳು, ಬಹಳಷ್ಟು ಹಿರಿಯ ನಾಗರಿಕರು, ಅನಾರೋಗ್ಯ ಬಾಧಿತರು ಈ ಭಾಗದಲ್ಲಿದ್ದು ಹಲವು ದಶಕಗಳಿಂದ ರಸ್ತೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ಬೇಡಿಕೆ ನೀಡಿದ್ದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ.

ಈ ಗ್ರಾಮದಿಂದ ಮುಖ್ಯ ಪೇಟೆ ಹೆಬ್ರಿಗೆ ಹೋಗಲು 25 ಕಿ.ಮೀ ದೂರ ಸಾಗಬೇಕು. ಶಿಕ್ಷಣಕ್ಕಾಗಿ ದೂರದ ಕಾರ್ಕಳ, ಹೆಬ್ರಿ, ಹಾಲಾಡಿಗೆ ಹೋಗಬೇಕು. ಕೊರೋನಾ ಸಂದರ್ಭ ನೆಟ್‌ವರ್ಕ್ ಸಮಸ್ಯೆಯಿಂದ ಇಲ್ಲಿನ ವಿದ್ಯಾರ್ಥಿಗಳು ಆನ್‌ಲೈನ್ ತರಗತಿಯಿಂದಲೂ ವಂಚಿತರಾಗಿದ್ದರು. ಇನ್ನು ಅನಾರೋಗ್ಯ ಪೀಡಿತರು ಬೆಳ್ವೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೇ ಹೋಗಬೇಕಾಗಿದ್ದು ಇಲ್ಲಿನ ರಸ್ತೆ ಅವ್ಯವಸ್ಥೆಯಿಂದಾಗಿ ಯಾವುದೇ ವಾಹನ, ರಿಕ್ಷಾ ಬರುವುದಿಲ್ಲ.

ಜೋಲಿ ಬಳಸಿ ಅಂತವರನ್ನು ಹೊತ್ತು ಒಯ್ಯಬೇಕಾದ ದುಸ್ಥಿತಿಯೂ ಇಲ್ಲಿ ನಡೆದಿತ್ತು. ಉಳಿದಂತೆ ಹಕ್ಕುಪತ್ರ ಸಮಸ್ಯೆ ಬಗೆಹರಿದಿಲ್ಲ. ಕಾಡುಪ್ರಾಣಿ ಉಪಟಳಕ್ಕೆ ಜನರು ಹೈರಾಣಾಗಿದ್ದಾರೆ. ತನ್ನ ಮಗು ಅನಾರೋಗ್ಯದ ವೇಳೆ ಸಂಕಷ್ಟ ಪಟ್ಟಿದ್ದು ಬಡವರ ಸಮಸ್ಯೆಗೆ ಸ್ಪಂದನೆ ಸಿಗುತ್ತಿಲ್ಲ ಎಂದು ರೇಷ್ಮಾ ಕಾರಿಮನೆ ತಿಳಿಸಿದ್ದಾರೆ. ತಮ್ಮೂರಿನ ಸಮಸ್ಯೆ ಬಗ್ಗೆ ಹಿರಿಯ ಮಹಿಳೆಯರು, ನಾಗರಿಕರು, ವಿದ್ಯಾರ್ಥಿಗಳು ಅವಲತ್ತುಕೊಂಡರು.

ಮೂಲಸೌಕರ್ಯ ವೃದ್ಧಿಗೆ ಮಾಡಿದ ಮನವಿ ನೀರಿನಲ್ಲಿ ಮಾಡಿದ ಹೋಮ ದಂತಾಗಿದ್ದು ಇದೀಗ ಚುನಾವಣೆ ಬಹಿಷ್ಕಾರ ಮಾಡುವ ಒಮ್ಮತದ ನಿರ್ಧಾರ ಮಾಡಿದ್ದೇವೆ ಎಂದು ಸ್ಥಳೀಯರಾದ ನವೀನ್ ಯಡಮಲೆ, ಸುಮಂತ್ ಶೆಟ್ಟಿ ತಿಳಿಸಿದರು. ಸ್ಥಳೀಯ ಆಟೋ ಚಾಲಕ ಪ್ರಸಾದ್ ಹಾಗೂ ಲೋಕೇಶ್ ತಮ್ಮ ಸಮಸ್ಯೆ ಬಗ್ಗೆ ಹೇಳಿಕೊಂಡರು.

ಪ್ರತಿ ಬಾರಿ ಚುನಾವಣೆ ಸಂದರ್ಭದಲ್ಲಿ ಜನಪ್ರತಿನಿಧಿಗಳು ಬಂದು ಮೂಲ ಸೌಕರ್ಯ ಒದಗಿಸುವ ಭರವಸೆ ಈವರೆಗೆ ಈಡೇರಿಲ್ಲ. ನಮ್ಮದು ಯಾವುದೇ ಪಕ್ಷ, ಯಾವುದೇ ವ್ಯಕ್ತಿ ವಿರುದ್ಧದ ಹೋರಾಟವಲ್ಲ. ನಮ್ಮ ಬೇಡಿಕೆ ಪೂರೈಸಿ, ಆಶ್ವಾಸನೆ ಬೇಡ, ಬದಲಾಗಿ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಂಡು ಚುನಾವಣೆ ಪ್ರಚಾರಕ್ಕೆ ಬನ್ನಿ ಎಂಬುದಾಗಿದೆ. ’ಜನಪ್ರತಿನಿಧಿಗಳೇ, ಅಧಿಕಾರಿಗಳೇ..ನಿಮ್ಮ ಗಮನ ನಮ್ಮ ಹಳ್ಳಿಯತ್ತ ಇರಲಿ’, ’ನಮ್ಮ ರಸ್ತೆ ನಮ್ಮ ಹಕ್ಕು, ನಮ್ಮ ಮತ ನಮ್ಮ ಹಕ್ಕು’, ’ರಸ್ತೆಯಾಗದ ಹೊರತು ಮತ ಕೇಳಲು ಬರಬೇಡಿ’, ಎಂಬ ವಾಕ್ಯದೊಂದಿಗೆ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಸಲಾಗಿದೆ.

‘ನಕ್ಸಲ್‌ ಪೀಡಿತ ಪ್ರದೇಶ ಹಣೆಪಟ್ಟಿ ಹೊತ್ತ ಗ್ರಾಮದಲ್ಲಿ ಅಭಿವೃದ್ಧಿ ಹಿನ್ನೆಡೆ ಯಾಗಿದೆ. 60 ಕುಟುಂಬ ವಾಸವಿರುವ ಈ ಪ್ರದೇಶದಲ್ಲಿ ರಸ್ತೆಯಿಲ್ಲ. ನೆಟ್ ವರ್ಕ್ ಸಿಗುವುದಿಲ್ಲ. ಅನಾರೋಗ್ಯಕ್ಕೊಳಗಾದವರನ್ನು ಆಸ್ಪತ್ರೆಗೆ ಸಾಗಿಸಲು, ಮೃತಪಟ್ಟವರ ಶವ ಹೊತ್ತೊಯ್ಯಲು ಜೋಲಿ ಗತಿ. ನಮ್ಮ ಸಮಸ್ಯೆಗೆ ಸ್ಪಂದನೆ ನೀಡುತ್ತಿಲ್ಲ. ಹೀಗಾಗಿ ವಿಧಾನಸಭೆ ಸಹಿತ ಮುಂಬರುವ ಎಲ್ಲಾ ಚುನಾವಣೆ ಯಲ್ಲಿ ಮತದಾನ ಮಾಡದಿರುವ ತೀರ್ಮಾನಕ್ಕೆ ಬಂದಿದ್ದೇವೆʼ.
-ಅಮ್ಮಣಿ ಕಾರಿಮನೆ, ಸ್ಥಳೀಯ ಹಿರಿಯ ಮಹಿಳೆ

‘ಮಡಾಮಕ್ಕಿಯ ಕುಂಟಾಮಕ್ಕಿ, ಹಂಜ, ಕಾರಿಮನೆ, ಹಾಗೂ ಎಡಮಲೆ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಕುಂದಾಪುರ ಶಾಸಕರು ಹಾಗೂ ಜನಪ್ರತಿನಿಧಿಗಳು ಮುತುವರ್ಜಿ ವಹಿಸಿದ್ದೇವೆ. ಆದರೆ ವೈಲ್ಡ್ ಲೈಫ್ ಎಂದು ರಸ್ತೆ  ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಎರಡು  ಬಾರಿ ರಸ್ತೆ ನಿರ್ಮಾಣಕ್ಕೆ ಬಂದ ಕೋಟ್ಯಾಂತರ ರೂ. ಅನುದಾನ ವನ್ಯಜೀವಿ ಅರಣ್ಯ ವಲಯ ಎಂಬ ಕಾರಣಕ್ಕಾಗಿ ತಾಂತ್ರಿಕ ಅಡಚಣೆಯಿಂದ ವಾಪಾಸ್ಸಾಗಿದೆ. ಸರಕಾರ ಮಟ್ಟದಲ್ಲಿ ಮೂಲ ಸೌಕರ್ಯ ವಂಚಿತ ಭಾಗಕ್ಕೆ ರಸ್ತೆ, ಅಗತ್ಯ ಸೌಕರ್ಯವಾಗಬೇಕಾಗಿದೆ.
- ಚಂದ್ರಶೇಖರ ಶೆಟ್ಟಿ ಸೂರ್ಗೋಳಿ, ತಾಪಂ ಮಾಜಿ ಸದಸ್ಯ

share
Next Story
X