Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗ್ರೀಸ್: ಭೀಕರ ರೈಲು ಅಪಘಾತದಲ್ಲಿ ಕನಿಷ್ಟ...

ಗ್ರೀಸ್: ಭೀಕರ ರೈಲು ಅಪಘಾತದಲ್ಲಿ ಕನಿಷ್ಟ 36 ಮಂದಿ ಮೃತ್ಯು

1 March 2023 10:35 PM IST
share
ಗ್ರೀಸ್: ಭೀಕರ ರೈಲು ಅಪಘಾತದಲ್ಲಿ ಕನಿಷ್ಟ 36 ಮಂದಿ ಮೃತ್ಯು

ಅಥೆನ್ಸ್, ಮಾ.1: ಗ್ರೀಸ್ ನಲ್ಲಿ ಮಂಗಳವಾರ ಪ್ರಯಾಣಿಕರ ರೈಲು ಹಾಗೂ ಗೂಡ್ಸ್ ರೈಲು ಮುಖಾಮುಖಿ ಡಿಕ್ಕಿಯಾಗಿ ಕನಿಷ್ಟ 36 ಮಂದಿ ಮೃತಪಟ್ಟಿದ್ದಾರೆ. ಇತರ 85 ಮಂದಿ ಗಾಯಗೊಂಡಿದ್ದು ಅಪಘಾತದಿಂದಾಗಿ ರೈಲು ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

‌ಗಾಯಗೊಂಡವರಲ್ಲಿ 6 ಮಂದಿಯನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಸ್ಥಳೀಯ ಕಾಲಮಾನ ರಾತ್ರಿ 7:30ರ ವೇಳೆ ಪ್ರಯಾಣಿಕರ ರೈಲು ಅಥೆನ್ಸ್ ನಿಲ್ದಾಣದಿಂದ ಪ್ರಯಾಣ ಮುಂದುವರಿಸಿತ್ತು. ಗೂಡ್ಸ್ ರೈಲು ಥೆಸಲೊನಿಕಿಯಿಂದ ಲರಿಸ್ಸಾದತ್ತ ತೆರಳುತ್ತಿತ್ತು. ಎರಡೂ ರೈಲುಗಳು ಏಕಕಾಲಕ್ಕೆ ಒಂದೇ ಹಳಿಯಲ್ಲಿ ಸಂಚರಿಸುತ್ತಿದ್ದು ಸುರಂಗ ಮಾರ್ಗವೊಂದರಿಂದ ಪ್ರಯಾಣಿಕರ ರೈಲು ಹೊರಬರುತ್ತಿದ್ದಂತೆಯೇ ಎದುರುಗಡೆಯಿಂದ ಬಂದ ಗೂಡ್ಸ್ ರೈಲು ಮುಖಾಮುಖಿ ಡಿಕ್ಕಿಯಾಗಿದೆ.

ಪ್ರಯಾಣಿಕರ ರೈಲಿನಲ್ಲಿದ್ದ 350 ಪ್ರಯಾಣಿಕರಲ್ಲಿ 250 ಪ್ರಯಾಣಿಕರನ್ನು ದುರಂತದ ಸ್ಥಳದಿಂದ ಸುರಕ್ಷಿತವಾಗಿ ತೆರವುಗೊಳಿಸಿ ಬಸ್ಸುಗಳ ಮೂಲಕ ಥೆಸಲೊನಿಕಿಗೆ ಸ್ಥಳಾಂತರಿಸಲಾಗಿದೆ ಎಂದು ಮಾಧ್ಯಮ ವರದಿ ಹೇಳಿದೆ. 1972ರಲ್ಲಿ ಲರಿಸ್ಸಾ ನಗರದ ಹೊರಭಾಗದಲ್ಲಿ 2 ರೈಲುಗಳ ಮುಖಾಮುಖಿ ಅಪಘಾತದಲ್ಲಿ 19 ಪ್ರಯಾಣಿಕರು ಮೃತಪಟ್ಟಿದ್ದರು.

ಅಪಘಾತದ ತೀವ್ರತೆಗೆ ಪ್ರಯಾಣಿಕರ ರೈಲು ಹಳಿತಪ್ಪಿ ಮಗುಚಿಬಿದ್ದಿದ್ದು ರೈಲಿನ ಕಿಟಕಿಗಳು ನಜ್ಜುಗುಜ್ಜಾಗಿವೆ. ರೈಲಿನ ಒಂದು ಬೋಗಿ ಹಳಿಯಲ್ಲಿ 90 ಡಿಗ್ರಿಯಷ್ಟು ನೇರ ನಿಂತಿದೆ. ಭೀಕರ ಸದ್ದಿನೊಂದಿಗೆ ಭಾರೀ ಬೆಂಕಿ ಕಾಣಿಸಿಕೊಂಡಾಗ ಪ್ರಯಾಣಿಕರು ಗಾಭರಿಯಿಂದ ಕಿರುಚುತ್ತಾ ರೈಲಿನ ಕಿಟಕಿ ಬಾಗಿಲನ್ನು ಮುರಿದು ಹೊರಬರುವ ಪ್ರಯತ್ನ ಮಾಡುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲು, ಅವಶೇಷಗಳಡಿ ಸಿಕ್ಕಿಕೊಂಡವರನ್ನು ರಕ್ಷಿಸಲು, ಮೃತರ ಸಂಬಂಧಿಕರಿಗೆ ಮಾನಸಿಕ ಬೆಂಬಲ ನೀಡುವುದು ನಮ್ಮ   ಮೊದಲ ಆದ್ಯತೆಯಾಗಿದೆ ಎಂದು ಸರಕಾರದ ವಕ್ತಾರ ಗಿಯಾನಿಸ್ ಒಕೊನೊಮೊವು ಹೇಳಿದ್ದಾರೆ. ದುರಂತಕ್ಕೆ ಕಾರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದವರು ಹೇಳಿದ್ದಾರೆ.

share
Next Story
X