Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಝುಬೇರ್ ವಿರುದ್ಧ ಮಾನಹಾನಿಕರ ಪೋಸ್ಟ್:...

ಝುಬೇರ್ ವಿರುದ್ಧ ಮಾನಹಾನಿಕರ ಪೋಸ್ಟ್: ಆರೋಪಿ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ ಎಂದು ಕೇಳಿದ ದಿಲ್ಲಿ ಹೈಕೋರ್ಟ್

2 March 2023 2:45 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಝುಬೇರ್ ವಿರುದ್ಧ ಮಾನಹಾನಿಕರ ಪೋಸ್ಟ್: ಆರೋಪಿ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ ಎಂದು ಕೇಳಿದ ದಿಲ್ಲಿ ಹೈಕೋರ್ಟ್

ಹೊಸ ದಿಲ್ಲಿ: ವಾಸ್ತವ ಪರಿಶೋಧಕ ಹಾಗೂ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮುಹಮ್ಮದ್ ಝುಬೇರ್ ವಿರುದ್ಧ ಪೋಕ್ಸೊ ಪ್ರಕರಣದಲ್ಲಿ ಪ್ರಾಥಮಿಕ ಮಾಹಿತಿ ವರದಿ ದಾಖಲಿಸಿದ ನಂತರ ಅವರ ವಿರುದ್ಧ ಮಾನಹಾನಿಕಾರಕ ಪೋಸ್ಟ್‌ಗಳನ್ನು ಮಾಡಿದ್ದ ವ್ಯಕ್ತಿಯ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ ಎಂದು ದಿಲ್ಲಿ ಹೈಕೋರ್ಟ್, ದಿಲ್ಲಿ ಪೊಲೀಸರನ್ನು ಗುರುವಾರ ಪ್ರಶ್ನಿಸಿದೆ ಎಂದು livelaw.in ವರದಿ ಮಾಡಿದೆ.

ಮುಹಮ್ಮದ್ ಝುಬೇರ್ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಅನೂಪ್ ಜೈರಾಮ್ ಭಂಭಾನಿ, "ಈ ವ್ಯಕ್ತಿ(ಝುಬೇರ್)ಯ ವಿರುದ್ಧ ನೀವು ಯಾವುದೇ ಸಾಕ್ಷಿಯನ್ನು ಪತ್ತೆ ಹಚ್ಚಲಾಗಲಿಲ್ಲ ಮತ್ತು ಈತನ ಹೆಸರನ್ನು ಆರೋಪ ಪಟ್ಟಿಯಲ್ಲೂ ನಮೂದಿಸಿಲ್ಲ. ಆದರೆ, ಅಪರಾಧ ಸ್ವರೂಪದ ಟ್ವೀಟ್‌ಗಳನ್ನು ಮಾಡಿದ ವ್ಯಕ್ತಿ(ಜಗದೀಶ್ ಸಿಂಗ್)ಯ ವಿರುದ್ಧ ನೀವೇನು ಕ್ರಮ ಕೈಗೊಂಡಿದ್ದೀರಿ?" ಎಂದು ದಿಲ್ಲಿ ಪೊಲೀಸರ ಪರ ವಕೀಲರನ್ನು ಖಾರವಾಗಿ ಪ್ರಶ್ನಿಸಿದ್ದಾರೆ.

ಝುಬೇರ್ ಅವರು ಬಳಕೆದಾರರೊಬ್ಬರ ಪ್ರೊಫೈಲ್ ಭಾವಚಿತ್ರವೊಂದನ್ನು ಪೋಸ್ಟ್ ಮಾಡಿ, ನಿಮ್ಮ ಮೊಮ್ಮಗಳ ಚಿತ್ರವನ್ನು ಪ್ರೊಫೈಲ್ ಭಾವಚಿತ್ರವಾಗಿಸಿಕೊಂಡು ಮಾನಹಾನಿಕಾರಕ ಭಾಷೆಯಲ್ಲಿ ಪ್ರತಿಕ್ರಿಯಿಸುವುದು ಸಮರ್ಪಕವೇ ಎಂದು ಪ್ರಶ್ನಿಸಿದ್ದರು. ಈ ಪೋಸ್ಟ್ ಮಾಡುವಾಗ ಝುಬೇರ್, ಆ ಅಪ್ರಾಪ್ತ ಬಾಲಕಿಯ ಮುಖವನ್ನು ಮರೆಮಾಚಿದ್ದರು. ಈ ಪೋಸ್ಟಿಗೆ ಸಂಬಂಧ ಪಟ್ಟಂತೆ ಝುಬೇರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಆ ಟ್ವೀಟ್‌ನಲ್ಲಿ, "ಮಿ. ಎಕ್ಸ್‌ಎಕ್ಸ್‌ಎಕ್ಸ್, ಸಾಮಾಜಿಕ ಮಾಧ್ಯಮಗಳಲ್ಲಿ ಜನರನ್ನು ನಿಂದಿಸುವ ನಿಮ್ಮ ಅರೆಕಾಲಿಕ ಉದ್ಯೋಗದ ಬಗ್ಗೆ ನಿಮ್ಮ ಮೊಮ್ಮಗಳಿಗೆ ತಿಳಿದಿದೆಯಾ? ನಿಮ್ಮ ಪ್ರೊಫೆಲ್ ಭಾವಚಿತ್ರವನ್ನು ಬದಲಿಸಿ ಎಂಬುದು ನನ್ನ ಸಲಹೆಯಾಗಿದೆ" ಎಂದು ಬರೆದಿದ್ದರು.

ಆನಂತರ, ಸದರಿ ಬಳಕೆದಾರ ಝುಬೇರ್ ವಿರುದ್ಧ ತನ್ನ ಮೊಮ್ಮಗಳಿಗೆ ಸೈಬರ್ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಹಲವು ದೂರುಗಳನ್ನು ದಾಖಲಿಸಿದ್ದರು. ಈ ದೂರನ್ನು ಆಧರಿಸಿ, ದಿಲ್ಲಿ ಪೊಲೀಸರು ಪೋಕ್ಸೋ ಕಾಯ್ದೆ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 509B, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67 ಹಾಗೂ 67A ಅನ್ವಯ ಝುಬೇರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.

ನ್ಯಾ‌. ಭಂಭಾನಿ ಅವರು ಪ್ರಕರಣದ ಮರು ವಿಚಾರಣೆಯನ್ನು ಮಾರ್ಚ್ 13ಕ್ಕೆ ನಿಗದಿಗೊಳಿಸಿದ್ದು, ಪ್ರಕರಣ ಅಂದೇನಾದರೂ ತಾರ್ಕಿಕ ಅಂತ್ಯ ತಲುಪಬಹುದೇ ಎಂದು ನೋಡಬೇಕಿದೆ ಎಂದು ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X