Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಹಕಾರಿ ಸಂಸ್ಥೆಗಳು ಕಾರ್ಪೋರೇಟ್...

ಸಹಕಾರಿ ಸಂಸ್ಥೆಗಳು ಕಾರ್ಪೋರೇಟ್ ಶೈಲಿಯಲ್ಲಿ ಬೆಳೆಯಬೇಕು: ಡಾ.ಎಂ.ಎನ್. ರಾಜೇಂದ್ರ ಕುಮಾರ್ ಸಲಹೆ

2 March 2023 8:16 PM IST
share
ಸಹಕಾರಿ ಸಂಸ್ಥೆಗಳು ಕಾರ್ಪೋರೇಟ್ ಶೈಲಿಯಲ್ಲಿ ಬೆಳೆಯಬೇಕು: ಡಾ.ಎಂ.ಎನ್. ರಾಜೇಂದ್ರ ಕುಮಾರ್ ಸಲಹೆ

ಉಡುಪಿ: ಜಿಲ್ಲೆಯಲ್ಲಿರುವ ಎಲ್ಲಾ 54 ಸಹಕಾರಿ ಕ್ಷೇತ್ರದ ಸಂಸ್ಥೆಗಳೆಲ್ಲವೂ ಲಾಭದಾಯಕವಾಗಿ ನಡೆಯುತ್ತಿವೆ. ಇದಕ್ಕೆ ಸಹಕಾರಿ ಸಂಸ್ಥೆಗಳು ಜನರಿಗೆ ನೀಡುವ ನಗುಮೊಗದ ಸೇವೆಯೇ ಪ್ರಮುಖ ಕಾರಣ ಎಂದು ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಹಾಗೂ ಮಂಗಳೂರಿನ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಹೊಟೇಲ್ ಓಷಿಯನ್‌ಪರ್ಲ್ ಸಭಾಂಗಣದಲ್ಲಿ ಗುರುವಾರ ನಡೆದ ಉಡುಪಿ ಜಿಲ್ಲೆಯ ಎಲ್ಲಾ ಪ್ರಾಥಮಿಕ  ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಆಯೋಜಿಸಲಾದ ಒಂದು ದಿನದ ರಾಜ್ಯಮಟ್ಟದ ವಿಶೇಷ ಸಹಕಾರ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಇಂದು ವಾಣಿಜ್ಯ ಬ್ಯಾಂಕುಗಳು ವಿಕಸಿತಗೊಳ್ಳುವ ಬದಲು ಸಂಕುಚಿತಗೊಳ್ಳುತ್ತಿವೆ. ಜಿಲ್ಲೆಯಲ್ಲಿ ಹುಟ್ಟಿ, ಬೆಳೆದ ಬ್ಯಾಂಕುಗಳು ಅಸ್ತಿತ್ವವನ್ನು ಕಳೆದುಕೊಂಡಿವೆ. ಈಗ ಗ್ರಾಹಕನೊಬ್ಬ ಇಂಥ ಬ್ಯಾಂಕುಗಳಿಗೆ ಹೋದರೆ ಪರಕೀಯನೆಂಬ ಭಾವನೆ ಬರುವಂತಿದೆ. ಸ್ಥಳೀಯ ಭಾಷೆ, ಸಂಸ್ಕೃತಿ ಅರಿಯದವರಿಂದ ಉತ್ತಮ ಸೇವೆ ಕೊಡಲು ಸಾಧ್ಯವಿಲ್ಲ ಎಂದವರು ಹೇಳಿದರು.

ಆದರೆ ಸಹಕಾರಿ ಕ್ಷೇತ್ರದ ಸಂಸ್ಥೆಗಳಿಂದು ನವನೂತನ ಸೇವೆಗಳನ್ನು ನೀಡುವ  ಮೂಲಕ ಬಲಾಢ್ಯಗೊಳ್ಳುತ್ತಿವೆ. ಬ್ಯಾಂಕುಗಳಿನ್ನು ವಾರದಲ್ಲಿ ಐದು ದಿನ ಸೇವೆ ನೀಡಿದರೆ, ನಾವು ವರ್ಷವಿಡೀ ಸೇವೆಯಲ್ಲಿ ನಿರತರಾಗಿರುತ್ತೇವೆ. ಹೀಗಾಗಿ ಜನರಿಗೆ ನಮ್ಮಲ್ಲಿ ವಿಶ್ವಾಸ ಮೂಡಿದೆ ಎಂದು ಎಂ.ಎನ್.ಆರ್. ಅಭಿಪ್ರಾಯಪಟ್ಟರು.

ಕೇವಲ ಕೃಷಿ ಸಾಲ ನೀಡುವುದರಿಂದ ಸಹಕಾರಿ ಸಂಸ್ಥೆಗಳಿಗೆ ಲಾಭ ಸಿಗುವುದಿಲ್ಲ. ನಾವು ನೀಡುವ ಇತರ ಸೇವೆಗಳಿಂದ ನಿಜವಾಗಿಯೂ ನಾವು ಲಾಭ ಸಂಪಾದಿಸುತಿದ್ದೇವೆ ಎಂದ ರಾಜೇಂದ್ರಕುಮಾರ್, ದೇಶದಲ್ಲಿಂದು 66,000 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಿವೆ. ಇವುಗಳನ್ನು 2ಲಕ್ಷಕ್ಕೇರಿಸುವುದಾಗಿ ಘೋಷಿಸಲಾಗಿದೆ. ಇಂಥ ಕ್ರಮಗಳಿಂದ ಸಂಸ್ಥೆ ಸದೃಢವಾಗಿ ಉಳಿಯಲು ಸಾಧ್ಯವಾಗುವುದಿಲ್ಲ. ಸಂಸ್ಥೆ ಸದೃಢಗೊಳ್ಳದೇ ಲಾಭ ಗಳಿಸಲು ಸಾಧ್ಯವಿಲ್ಲ ಎಂದೂ ಅವರು ಹೇಳಿದರು.

ಜಿಲ್ಲೆಯ ಸಹಕಾರಿ ಕ್ಷೇತ್ರದ ಸಂಸ್ಥೆಗಳು ಒಳ್ಳೆಯ ಕಾರ್ಪೋರೇಟ್ ಶೈಲಿಯಲ್ಲಿ ಬೆಳೆಯಬೇಕು. ಆಗ ಜನರಿಗೂ ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತದೆ. ಈಗಾಗಲೇ ಜಿಲ್ಲೆಯ ಸಹಕಾರಿ ಸಂಸ್ಥೆಗಳು ಸ್ವಂತ ಕಟ್ಟಡ,  ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಉತ್ತಮ ಸೇವೆ ನೀಡುತ್ತಿವೆ. ಜನರ ವಿಶ್ವಾಸದಿಂದ ಸಂಸ್ಥೆ ಸದೃಢವಾಗಿ ಬೆಳೆಯಲು ಸಾಧ್ಯವಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಹಾಗೂ ರಾಜ್ಯ ಸಹಕಾರಿ ಮಹಾಮಂಡಳದ ನಿರ್ದೇಶಕ ಬಿ.ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಸಹಕಾರ ಕ್ಷೇತ್ರ ಈ ಮಟ್ಟಕ್ಕೆ ಸದೃಢಗೊಂಡು ಬೆಳೆಯಲು ಕ್ಷೇತ್ರದ ಮೇಲೆ ಜನರಿಟ್ಟ ನಂಬಿಕೆ ಹಾಗೂ ವಿಶ್ವಾಸಗಳೇ ಕಾರಣ ಹಾಗೂ ಈ ಕ್ಷೇತ್ರದಲ್ಲಿ ಯಾವುದೇ ಸಮಸ್ಥೆಗಳು ಬಂದಾಗ ಪರಿಹಾರದ ಮಾರ್ಗದರ್ಶನ ನೀಡುವ ರಾಜೇಂದ್ರಕುಮಾರ್ ರಂಥವರ ಸಲಹೆ-ಸೂಚನೆಗಳೇ ಕಾರಣ ಎಂದರು.

ಯೂನಿಯನ್ ನಡೆಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.  ಡಾ.ಎಂ.ಎನ್. ರಾಜೇಂದ್ರ ಕುಮಾರ್‌ರನ್ನು ಯೂನಿಯನ್ ವತಿಯಿಂದ ಸನ್ಮಾನಿಸಲಾಯಿತು. ಅಲ್ಲದೇ ಸಂಸ್ಥೆಯಿಂದ ನಿವೃತ್ತರಾದ ಲೆಕ್ಕಪರಿಶೋಧಕ ಗಣೇಶ್ ಮಯ್ಯ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.

ಸಮಾರಂಭದಲ್ಲಿ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ, ರಾಜು ಪೂಜಾರಿ, ರಾಜೇಶ್ ರಾವ್ ಪಾಂಗಾಳ, ಜಿಲ್ಲೆಯ ಸಹಕಾರ ಸಂಘ ಗಳ ಉಪನಿಬಂಧಕ ಲಕ್ಷ್ಮೀನಾರಾಯಣ ಜಿ.ಎನ್., ನಿವೃತ್ತ ಅಪರ ನಿಬಂಧಕ ಎಚ್.ಎಸ್.ನಾಗರಾಜಯ್ಯ, ಯೂನಿಯನ್‌ನ ನಿರ್ದೇಶಕರಾದ ಕಟಪಾಡಿ ಶಂಕರ ಪೂಜಾರಿ, ಎಚ್.ಗಂಗಾಧರ ಶೆಟ್ಟಿ, ಯಶಪಾಲ್ ಸುವರ್ಣ, ಅಕೋಶ್‌ಕುಮಾರ್ ಶೆಟ್ಟಿ,ಅಶೋಕ್ ಕುಮಾರ್ ಬಲ್ಲಾಳ್ ಉಪಸ್ಥಿತರಿದ್ದರು.

ಯೂನಿಯನ್‌ನ ನಿರ್ದೇಶಕ ಹರೀಶ್ ಕಿಣಿ ಅತಿಥಿಗಳನ್ನು ಸ್ವಾಗತಿಸಿದರೆ, ಶ್ರೀಧರ ಪಿ.ಎಸ್. ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹರೀಶ್ ಬಿ.ಬಿ. ವಂದಿಸಿದರು.

share
Next Story
X