Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಕ್ಲಿಯಾರ್ ಇಂಪ್ಲಾಂಟ್ ಯೋಜನೆಯಡಿ 115...

ಕಾಕ್ಲಿಯಾರ್ ಇಂಪ್ಲಾಂಟ್ ಯೋಜನೆಯಡಿ 115 ಮಕ್ಕಳಿಗೆ ಶಸ್ತ್ರಚಿಕಿತ್ಸೆ: ಸಚಿವ ಡಾ.ಕೆ.ಸುಧಾಕರ್

''5 ವರ್ಷದೊಳಗಿನ 2,381 ಮಕ್ಕಳಲ್ಲಿ ಗಂಭೀರ ಶ್ರವಣ ದೋಷವಿದೆ''

2 March 2023 5:20 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕಾಕ್ಲಿಯಾರ್ ಇಂಪ್ಲಾಂಟ್ ಯೋಜನೆಯಡಿ 115 ಮಕ್ಕಳಿಗೆ ಶಸ್ತ್ರಚಿಕಿತ್ಸೆ: ಸಚಿವ ಡಾ.ಕೆ.ಸುಧಾಕರ್
''5 ವರ್ಷದೊಳಗಿನ 2,381 ಮಕ್ಕಳಲ್ಲಿ ಗಂಭೀರ ಶ್ರವಣ ದೋಷವಿದೆ''

ಬೆಂಗಳೂರು, ಮಾ. 2: ರಾಜ್ಯ ಸರಕಾರದ ಕಾಕ್ಲಿಯಾರ್ ಇಂಪ್ಲಾಂಟ್ ಯೋಜನೆಯಡಿ, ಇದೇ ವರ್ಷ 115 ಮಕ್ಕಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇಂತಹ ಕ್ರಮಗಳ ಮೂಲಕ ಕಿವಿಯ ಆರೋಗ್ಯ ರಕ್ಷಣೆಗೆ ಒತ್ತು ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಪ್ರತಿ ವರ್ಷ ಮಾ.3ರಂದು ವಿಶ್ವ ಶ್ರವಣ ದಿನ ಆಚರಿಸುತ್ತಿದ್ದು, ಈ ವರ್ಷ ‘ಕಿವಿ ಮತ್ತು ಶ್ರವಣ ಆರೈಕೆ ಎಲ್ಲರಿಗಾಗಿ, ಬನ್ನಿ ವಾಸ್ತವವಾಗಿಸೋಣ’ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಎಲ್ಲ ಆರೋಗ್ಯ ಕಾರ್ಯಕರ್ತೆಯರಿಗೆ, ಕಿವಿಯ ಆರೈಕೆ, ಪ್ರಥಮ ಚಿಕಿತ್ಸೆ ಹಾಗೂ ತಪಾಸಣೆ ಬಗ್ಗೆ ತರಬೇತಿ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಈ ಮೂಲಕ ಕಿವಿಯ ಆರೈಕೆ ಹಾಗೂ ಶ್ರವಣ ಆರೈಕೆಯನ್ನು ಪ್ರಾಥಮಿಕ ಆರೋಗ್ಯ ಸೇವೆಗಳಲ್ಲಿ ವಿಲೀನಗೊಳಿಸಲಾಗುತ್ತಿದೆ. 6 ವರ್ಷದೊಳಗಿನ ಮಕ್ಕಳಲ್ಲಿನ ಗಂಭೀರ ಸ್ವರೂಪದ ಶ್ರವಣ ದೋಷದ ನಿವಾರಣೆಗೆ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆ ತರಲಾಗಿದೆ. ಇದರಲ್ಲಿ, ಈ ವರ್ಷ 115 ಮಕ್ಕಳಿಗೆ ಶಸ್ತ್ರಚಿಕಿತ್ಸೆ ಮಾಡಿದ್ದು, ಉಳಿದ 577 ಫಲಾನುಭವಿಗಳಿಗೆ ವಿವಿಧ ಹಂತದಲ್ಲಿ ಕಾಕ್ಲಿಯಾರ್ ಶಸ್ತ್ರಚಿಕಿತ್ಸೆಗಾಗಿ ತಯಾರಿ ನಡೆಸಲಾಗಿದೆ ಎಂದು ಸುಧಾಕರ್ ಮಾಹಿತಿ ನೀಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ವಿಶ್ವದಾದ್ಯಂತ 430 ದಶಲಕ್ಷ ಜನರು ಶ್ರವಣ ದೋಷದಿಂದ ಬಳಲುತ್ತಿದ್ದಾರೆ. 2050ರ ವೇಳೆಗೆ ಈ ಸಂಖ್ಯೆ 700 ದಶಲಕ್ಷ ದಾಟುವ ಆತಂಕವಿದೆ. ರಾಜ್ಯದಲ್ಲಿ 2008-09 ರಲ್ಲಿ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮ ಜಾರಿಯಾಗಿದ್ದು, ಉಪಕರಣ ಮತ್ತು ಶಸ್ತ್ರಚಿಕಿತ್ಸೆಗಾಗಿ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಕಳೆದ 5 ವರ್ಷಗಳಲ್ಲಿ ಎನ್.ಪಿ.ಪಿ.ಸಿ.ಡಿ ಕಾರ್ಯಕ್ರಮ ವಿಭಾಗದಿಂದ, 2,00,305 ಶ್ರವಣ ದೋಷವುಳ್ಳವರನ್ನು ಹಾಗೂ 35,418 ಗಂಭೀರ ಶ್ರವಣ ದೋಷವುಳ್ಳವರನ್ನು ಗುರುತಿಸಲಾಗಿದೆ. 5 ವರ್ಷದೊಳಗಿನ 2,381 ಮಕ್ಕಳಲ್ಲಿ ಗಂಭೀರ ಶ್ರವಣ ದೋಷವಿದೆ. ರಾಜ್ಯದ ಎಲ್ಲ ಇ.ಎನ್.ಟಿ ತಜ್ಞರ ಸಹಾಯದಿಂದ ಕಿವಿಯ ಸಮಸ್ಯೆಗಳಿಗೆ 10,213 ಶಸ್ತ್ರಚಿಕಿತ್ಸೆ ಮಾಡಲಾಗಿದೆ. 11,857 ಫಲಾನುಭವಿಗಳಿಗೆ ಶ್ರವಣ ಸಾಧನ ನೀಡಲಾಗಿದೆ ಎಂದು ಸುಧಾಕರ್ ತಿಳಿಸಿದ್ದಾರೆ.

ಈ ವಿಶ್ವ ಶ್ರವಣ ದಿನದಂದು, ಎಲ್ಲ ಜಿಲ್ಲೆಗಳಲ್ಲಿ ಶ್ರವಣ ತಪಾಸಣಾ ಶಿಬಿರ ನಡೆಸಿ ಚಿಕಿತ್ಸೆ ಒದಗಿಸಲಾಗುವುದು. 6 ವರ್ಷದೊಳಗಿನ ಮಕ್ಕಳಲ್ಲಿ ಎರಡು ಕಿವಿಗಳಲ್ಲಿ ಗಂಭೀರ ಸ್ವರೂಪದ ಶ್ರವಣ ದೋಷಗಳನ್ನು ಗುರುತಿಸಿ ಕಾಕ್ಲಿಯಾರ್ ಇಂಪ್ಲಾಂಟ್ ಅವಶ್ಯಕತೆಯಿದ್ದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುವುದು. ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆಯಿಂದ ಮತ್ತು ಸಂಘ ಸಂಸ್ಥೆಗಳಿಂದ ಶ್ರವಣ ಸಾಧನಗಳನ್ನು ಒದಗಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಅವರು ಪ್ರಕಟನೆಯಲ್ಲಿ ವಿವರಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X