Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬೆಲಾರಸ್: ನೊಬೆಲ್ ಪ್ರಶಸ್ತಿ ಪುರಸ್ಕೃತ...

ಬೆಲಾರಸ್: ನೊಬೆಲ್ ಪ್ರಶಸ್ತಿ ಪುರಸ್ಕೃತ ವ್ಯಕ್ತಿಗೆ 10 ವರ್ಷ ಜೈಲುಶಿಕ್ಷೆ

3 March 2023 11:09 PM IST
share
ಬೆಲಾರಸ್: ನೊಬೆಲ್ ಪ್ರಶಸ್ತಿ ಪುರಸ್ಕೃತ ವ್ಯಕ್ತಿಗೆ 10 ವರ್ಷ ಜೈಲುಶಿಕ್ಷೆ

ಮಿಂಸ್ಕ್, ಮಾ.3: ಕಾನೂನು ಸುವ್ಯವಸ್ಥೆಗೆ ಭಂಗ ತರುವ ಕೃತ್ಯಗಳಿಗೆ ಹಣಕಾಸಿನ ನೆರವು ಒದಗಿಸಿದ ಹಾಗೂ ಸ್ಮಗ್ಲಿಂಗ್ ಆರೋಪದಲ್ಲಿ ಬೆಲಾರಸ್ ನ ಪ್ರಮುಖ ಮಾನವಹಕ್ಕು ಪ್ರತಿಪಾದಕ ಮತ್ತು 2022ರ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಅಲೆಸ್ ಬಿಯಾಲಿಯಟ್ಸ್ಕಿಗೆ ಬೆಲಾರಸ್ ನ ನ್ಯಾಯಾಲಯ ಶುಕ್ರವಾರ 10 ವರ್ಷದ ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಬಿಯಾಲಿಯಟ್ಸ್ಕಿ ಸ್ಥಾಪಿಸಿದ ವಿಯಾಸ್ನ ಮಾನವಹಕ್ಕುಗಳ ಸಂಸ್ಥೆಯ ಇತರ ಮೂರು ಉನ್ನತ ಅಧಿಕಾರಿಗಳಿಗೂ ಜೈಲುಶಿಕ್ಷೆ ವಿಧಿಸಲಾಗಿದೆ. ವಲಿಯಾಂಟ್ಸಿನ್ ಸ್ಟೆಫಾನೊವಿಚ್ ಗೆ 9 ವರ್ಷದ ಶಿಕ್ಷೆ, ಉಲದ್ಝಿಮಿರ್ ಲಬ್ಕೋವಿಕ್ಸ್ಗೆ 7 ವರ್ಷದ ಶಿಕ್ಷೆ ಹಾಗೂ ಡಿಮಿಟ್ರಿ ಸಲ್ಯುಯೋವ್ ಗೆ 8 ವರ್ಷದ ಜೈಲುಶಿಕ್ಷೆ ವಿಧಿಸಲಾಗಿದೆ. 2020ರ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮ ನಡೆಸುವ ಮೂಲಕ ಬೆಲಾರಸ್ ನ ಸರ್ವಾಧಿಕಾರಿ ಅಧ್ಯಕ್ಷ ಅಲೆಕ್ಸಾಂಡರ್ ಲುಕಶೆಂಕೊ ಮತ್ತೊಂದು ಅವಧಿಗೆ ಅಧಿಕಾರ ಪಡೆದಿದ್ದಾರೆ ಎಂದು ದೇಶದಾದ್ಯಂತ ಭುಗಿಲೆದ್ದ ಪ್ರತಿಭಟನೆಗೆ ಬಿಯಾಲಿಯಟ್ಸ್ಕಿ ಹಾಗೂ ಇತರ ಮೂವರು ಬೆಂಬಲ ನೀಡಿದ್ದರು ಎಂಬ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು.

ಬಿಯಾಲಿಯಟ್ಸ್ಕಿ, ವಲಿಯಾಂಟ್ಸಿನ್ ಸ್ಟೆಫಾನೊವಿಚ್ ಮತ್ತು ಉಲದ್ಝಿಮಿರ್ ಲಬ್ಕೋವಿಕ್ಸ್ರನ್ನು ಅಧಿಕಾರಿಗಳು ಬಂಧಿಸಿದ್ದರು. ಆದರೆ ಬಂಧನದಿಂದ ತಪ್ಪಿಸಿಕೊಂಡಿದ್ದ ಸಲ್ಯುಯೋವ್ ವಿದೇಶಕ್ಕೆ ಪಲಾಯನ ಮಾಡಿದ್ದರು. ರಹಸ್ಯವಾಗಿ ನಡೆದಿದ್ದ ವಿಚಾರಣೆ ಸಂದರ್ಭ ಬಿಯಾಲಿಯಟ್ಸ್ಕಿ ಹಾಗೂ ಇತರ ಇಬ್ಬರನ್ನು ನ್ಯಾಯಾಲಯದ ಆವರಣದಲ್ಲಿ ಪಂಜರದಂತಹ ಕೋಣೆಯಲ್ಲಿ ಇರಿಸಲಾಗಿತ್ತು. ವಿಚಾರಣೆಯ ನೆಪದಲ್ಲಿ 21 ತಿಂಗಳು ಜೈಲಿನಲ್ಲಿ ಬಂಧಿಯಾಗಿದ್ದ ಈ ಮೂವರಿಗೆ ಜೈಲುಶಿಕ್ಷೆ ವಿಧಿಸಿರುವುದನ್ನು ವ್ಯಾಪಕವಾಗಿ ಖಂಡಿಸಲಾಗಿದೆ.

ಈ ನಾಚಿಕೆಗೇಡಿನ ಅನ್ಯಾಯದ ವಿರುದ್ಧ ಹೋರಾಡಲು ಮತ್ತು ಅವರನ್ನು ಬಂಧಮುಕ್ತಗೊಳಿಸಲು ನಾವು ಸಾಧ್ಯವಿರುವ ಎಲ್ಲವನ್ನೂ ಮಾಡಬೇಕಾಗಿದೆ ಎಂದು ದೇಶಭ್ರಷ್ಟರಾಗಿರುವ ಬೆಲಾರಸ್ ವಿಪಕ್ಷ ಮುಖಂಡ ಸ್ವಿಯಟ್ಲಾನಾ ಸಿಖನೌಸ್ಕಾಯ ಪ್ರತಿಕ್ರಿಯಿಸಿದ್ದಾರೆ.

share
Next Story
X