Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉ.ಪ್ರ.: ಮೇಲ್ಜಾತಿಗಳಿಂದ ಸಾಮಾಜಿಕ...

ಉ.ಪ್ರ.: ಮೇಲ್ಜಾತಿಗಳಿಂದ ಸಾಮಾಜಿಕ ಬಹಿಷ್ಕಾರಕ್ಕೊಳಗಾಗಿ ಬಲವಂತಕ್ಕೊಳಗಾಗಿ ಗ್ರಾಮ ತೊರೆದ ಎರಡು ದಲಿತ ಕುಟುಂಬಗಳು

3 March 2023 11:39 PM IST
share

ಫತೇಹಾಬಾದ್,ಮಾ.3: ಮೇಲ್ಜಾತಿ ಸಮುದಾಯದವರು ಸಾಮಾಜಿಕ ಬಹಿಷ್ಕಾರ ಹಾಕಿದ್ದರಿಂದಾಗಿ ಎರಡು ದಲಿತ ಕುಟುಂಬಗಳ ಏಳು ಮಂದಿ ಸದಸ್ಯರು ತಮ್ಮ ಗ್ರಾಮವನ್ನೇ ತೊರೆದ ಘಟನೆ ಉತ್ತರಪ್ರದೇಶದ ಫತೇಹಬಾದ್ ಜಿಲ್ಲೆಯಲ್ಲಿ ನಡೆದಿದೆ. ಜಂಡ್ವಾಲಾ ಸೊಟೆರ್ ಗ್ರಾಮದಲ್ಲಿ ದಲಿತ ಸಮುದಾಯದವರೇ ಆದ ವಿವಾಹಿತ ಪುರುಷ (32) ಹಾಗೂ ಅವಿವಾಹಿತ ಮಹಿಳೆ (23)ಯ ನಡುವಿನ ಪ್ರೇಮಪ್ರಕರಣವನ್ನು ನೆಪವಾಗಿರಿಸಿಕೊಂಡು ಈ ದಲಿತ ಕುಟುಂಬಗಳನ್ನು ಬಲವಂತದಿಂದ ಗ್ರಾಮ ತೊರೆಯುವಂತೆ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.

ಮೇಲ್ಜಾತಿ ಸಮುದಾಯಗಳ ಸಾಮಾಜಿಕ ಬಹಿಷ್ಕಾರದ ಹಿನ್ನೆಲೆಯಲ್ಲಿ ಯುವತಿಯ ತಂದೆ, ಗ್ರಾಮದ ಸರಪಂಚ,ಗ್ರಾಮಲೆಕ್ಕಿಗ ಸೇರಿದಂತೆ 18 ಮಂದಿ ವಿರುದ್ಧ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆಲವು ಗ್ರಾಮಸ್ಥರು ಎರಡೂ ಕುಟುಂಬಗಳ ಸದಸ್ಯರನ್ನು ಹತ್ಯೆಗೈಯುವ ಹಾಗೂ ಅವರ ಮನೆಗೆ ಬೆಂಕಿ ಹಚ್ಚುವ ಬೆದರಿಕೆಯನ್ನು ಕೂಡಾ ಒಡ್ಡಿದ್ದಾರೆಂದು ಅವರು ಹೇಳಿದರು.

ಜಂದ್ವಾಲಾ ಸೊಟ್ಟೆರ್ ಗ್ರಾಮದ ನಿವಾಸಿ ಸೋಮಬೀರ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಸದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆಯೆಂದು ಫತೇಹಬಾದ್ ಪೊಲೀಸರು ತಿಳಿಸಿದ್ದಾರೆ.

ತಾನು ಹಾಗೂ ಸಹೋದರ ಮಂಗತ್ರಾಮ್ ವಿವಾಹಿತರಾಗಿದ್ದು, ಪ್ರತ್ಯೇಕ ಮನೆಗಳಲ್ಲಿ ವಾಸವಾಗಿರುವುದಾಗಿ ಸೋಮಬೀರ್ ದೂರಿನಲ್ಲಿ ತಿಳಿಸಿದ್ದಾರೆ. ಸೋದರ್ ಮಂಗತ್ರಾಮ್ಗೆ ಇಬ್ಬರು ಮಕ್ಕಳಿದ್ದು, ಆತ ಕೆಲವು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೇಮಿಸುತ್ತಿದ್ದ ಹಾಗೂ ಆಕೆಯ ಜೊತೆ ವಾಸವಾಗಿದ್ದ . ಇದರಿಂದಾಗಿ ತಮ್ಮಿಬ್ಬರ ನಡುವೆ ವಿರಸವುಂಟಾಗಿತ್ತೆಂದು ಸೋಮಬೀರ್ ಹೇಳಿದ್ದಾನೆ.

 ‘‘ ಯುವತಿಯ ಸಂಬಂಧಿಕರು ಮಂಗತ್ರಾಮ್ ಹಾಗೂ ನನ್ನ ವಿರುದ್ಧ ಗ್ರಾಮದ ಮುಖ್ಯಸ್ಥರಿಗೆ ದೂರು ನೀಡಿದ್ದರು ಆನಂತರ ಮೇಲ್ಜಾತಿಗೆ ಸೇರಿದ ಕೆಲವರು ಯುವತಿಯ ಕುಟುಂಬ ಸದಸ್ಯರ ಜೊತೆ ಸಂಚು ಹೂಡಿ, ಪಂಚಾಯತಿ ಕರೆದಿದ್ದರು. ನಮ್ಮ ಮನೆಯನ್ನು ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಮಾಡಿ ಗ್ರಾಮತೊರೆಯುವಂತೆ ಅವರು ಬಲವಂತಪಡಿಸಿದ್ದರು. ಈ ಪ್ರಕರಣದಲ್ಲಿ ತನ್ನ ಯಾವುದೇ ತಪ್ಪಿಲ್ಲವೆಂದು ನಾನು ಗೋಗರೆದರೂ, ಯಾರೂ ಕೂಡಾ ಕಿವಿಗೊಡಲಿಲ್ಲ’’ ಎಂದು ಸೋಮಬೀರ್ ತಿಳಿಸಿದ್ದಾರೆ.

ಫೆಬ್ರವರಿ 25ರಂದು ಕರೆಯಲಾದ ಪಂಚಾಯತ್ನಲ್ಲಿ ಆರೋಪಿಗಳು ತಮ್ಮ ವಿರುದ್ಧ ಜಾತಿ ನಿಂದನೆಗಳನ್ನು ಮಾಡಿದ್ದರು ಹಾಗೂ ಗ್ರಾಮವನ್ನು ತೊರೆಯುವಂತೆ ಬಲವಂತಪಡಿಸಿದ್ದರು ಎಂದು ಅವರು ಹೇಳಿದ್ದಾರೆ.

ದಲಿತ ಕುಟುಂಬಗಳಿಗೆ ಬಹಿಷ್ಕಾರ ಹಾಕಿದ ಘಟನೆಯ ಬಗ್ಗೆ ಸುದ್ದಿಗಾರರು ಫತೇಹಬಾದ್ ಎಸ್ಪಿ ಆಸ್ತಾ ಮೋದಿ ಅವರನ್ನು ಸಂಪರ್ಕಿಸಿದ್ದರು. ಆದರೆ ಅವರು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆಂದು ತಿಳಿದುಬಂದಿದೆ.

share
Next Story
X