ಜಲೀಲ್ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು

ಮಂಗಳೂರು, ಮಾ.4: ಸುಮಾರು ಎರಡೂವರೆ ತಿಂಗಳ ಹಿಂದೆ ಸುರತ್ಕಲ್ ಸಮೀಪದ ಕಾಟಿಪಳ್ಳ 4ನೇ ಬ್ಲಾಕ್ನಲ್ಲಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣದ ಆರೋಪಿಯೊಬ್ಬನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಜೂರು ಮಾಡಿದೆ.
ಪ್ರಕರಣದ ಮೂರನೇ ಆರೋಪಿ ಪವನ್ ಎಂಬಾತನಿಗೆ ನ್ಯಾಯಾಲಯ ಶರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.
ಗುರುವಾರ ನ್ಯಾಯಾಲಯದಲ್ಲಿ ದೀರ್ಘ ವಾದ-ಪ್ರತಿವಾದದ ಬಳಿಕ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಜೋಷಿ ಆರೋಪಿಗೆ ಶರತ್ತು ಬದ್ದ ಜಾಮೀನು ಮಂಜೂರು ಮಾಡಿದ್ದಾರೆ. ಆರೋಪಿಯ ಪರವಾಗಿ ಮಂಗಳೂರಿನ ವಕೀಲರಾದ ಶ್ರೇಯಸ್ ಎಸ್.ಕೆ. ಮತ್ತು ಹರ್ಷಿತ್ ವಾದಿಸಿದ್ದಾರೆ.
Next Story