Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದಲ್ಲಿ ಹೊಸ ಹೂಡಿಕೆಗೆ ಖಚಿತ ಒಪ್ಪಂದ...

ಭಾರತದಲ್ಲಿ ಹೊಸ ಹೂಡಿಕೆಗೆ ಖಚಿತ ಒಪ್ಪಂದ ಮಾಡಿಕೊಂಡಿಲ್ಲ: ಫಾಕ್ಸ್ಕಾನ್

4 March 2023 3:18 PM IST
share
ಭಾರತದಲ್ಲಿ ಹೊಸ ಹೂಡಿಕೆಗೆ ಖಚಿತ  ಒಪ್ಪಂದ ಮಾಡಿಕೊಂಡಿಲ್ಲ: ಫಾಕ್ಸ್ಕಾನ್

ತೈಪೆ,ಮಾ.4: ತನ್ನ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿದ್ದನ್ನು ತೈವಾನಿನ ಪ್ರಮುಖ ತಂತ್ರಜ್ಞಾನ ಸಂಸ್ಥೆ ಫಾಕ್ಸ್ಕಾನ್ ಶನಿವಾರ ಒಪ್ಪಿಕೊಂಡಿದೆಯಾದರೂ ತಾನು ಯಾವುದೇ ಬದ್ಧ,ಖಚಿತ ಒಪ್ಪಂದಗಳನ್ನು ಮಾಡಿಕೊಂಡಿರುವುದನ್ನು ನಿರಾಕರಿಸಿದೆ. ಫಾಕ್ಸ್ಕಾನ್ ಭಾರತದಲ್ಲಿ ಹೊಸ ಹೂಡಿಕೆಯನ್ನು ಮಾಡಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಕಂಪನಿಯ ಈ ಹೇಳಿಕೆ ಹೊರಬಿದ್ದಿದೆ.

ಫೆ.27ರಿಂದ ಮಾ.4ರವರೆಗೆ ತನ್ನ ಅಧ್ಯಕ್ಷ ಹಾಗೂ ಸಿಇಒ ಯಂಗ್ ಲಿಯು ಅವರ ಭಾರತ ಭೇಟಿ ಸಂದರ್ಭದಲ್ಲಿ ಹೊಸ ಹೂಡಿಕೆಗಳಿಗಾಗಿ ಯಾವುದೇ ಖಚಿತ ಒಪ್ಪಂದವನ್ನು ಮಾಡಿಕೊಂಡಿಲ್ಲ ಎಂದು ಫಾಕ್ಸ್ಕಾನ್ ಹೇಳಿಕೆಯಲ್ಲಿ ತಿಳಿಸಿದೆ.
ಮಾತುಕತೆಗಳು ಮತ್ತು ಆಂತರಿಕ ಪುನರ್ಪರಿಶೀಲನೆ ನಡೆಯುತ್ತಿವೆ. ಮಾಧ್ಯಮಗಳಲ್ಲಿ ಚರ್ಚೆಯಾಗಿರುವ ಹೂಡಿಕೆ ಮೊತ್ತಗಳು ಕಂಪನಿಯು ಬಿಡುಗಡೆ ಮಾಡಿರುವ ಮಾಹಿತಿಯಲ್ಲ ಎಂದು ಅದು ಹೇಳಿದೆ. 

ಪ್ರಸ್ತುತ ವರದಿಯಾಗುತ್ತಿರುವ ಉದ್ಯೋಗಗಳ ಅಂಕಿಅಂಶಗಳು ಕಂಪನಿಯೊಂದಿಗೆ ನೇರ ಉದ್ಯೋಗಳನ್ನು ಪ್ರತಿಬಿಂಬಿಸುವುದಿಲ್ಲ ಎಂದೂ ಫಾಕ್ಸ್ಕಾನ್ ಹೇಳಿದೆ. 

ಐಫೋನ್ಗಳ ಪ್ರಮುಖ ತಯಾರಿಕೆ ಕಂಪನಿಯಾಗಿರುವ ಫಾಕ್ಸ್ಕಾನ್ಗೆ ಬೆಂಗಳೂರಿನ ಹೊರವಲಯದಲ್ಲಿ ಜಾಗವನ್ನು ಒದಗಿಸಲಾಗಿದೆ. 300 ಎಕರೆ ವಿಸ್ತೀರ್ಣದ ಈ ಕ್ಯಾಂಪಸ್ ಆ್ಯಪಲ್ ಫೋನ್ಗಳ ಬೃಹತ್ ತಯಾರಿಕೆ ಘಟಕಗಳಲ್ಲಿ ಒಂದಾಗಲಿದೆ ಎಂದು ಮಾಧ್ಯಮಗಳು ಶುಕ್ರವಾರ ವರದಿ ಮಾಡಿದ್ದವು.

ಆ್ಯಪಲ್ ಶೀಘ್ರವೇ ರಾಜ್ಯದಲ್ಲಿಯ ತನ್ನ ನೂತನ ಘಟಕದಲ್ಲಿ ಐಫೋನ್ಗಳನ್ನು ತಯಾರಿಸಲಿದೆ ಮತ್ತು ಇದರಿಂದ ಒಂದು ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಕರ್ನಾಟಕದ ಮುಖ್ಯಮತ್ರಿ ಬಸವರಾಜ ಬೊಮ್ಮಾಯಿ ಟ್ವೀಟಿಸಿದ್ದರು. ಫಾಕ್ಸ್ಕಾನ್ ಕರ್ನಾಟಕದ ತನ್ನ ನೂತನ ಘಟಕದಲ್ಲಿ 700 ಮಿಲಿಯ ಡಾ.(ಸುಮಾರು 5,732 ಕೋ.ರೂ.)ಗಳ ಹೂಡಿಕೆಯನ್ನು ಮಾಡಲಿದೆ ಎಂದು ಬ್ಲೂಮ್ಬರ್ಗ್ ವರದಿ ಮಾಡಿತ್ತು.

ತೆಲಂಗಾಣದಲ್ಲಿ ಇಲೆಕ್ಟ್ರಾನಿಕ್ಸ್ ತಯಾರಿಕೆ ಘಟಕದ ಸ್ಥಾಪನೆಗಾಗಿ ಲಿಯು ಗುರುವಾರ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎಂದು ಅಲ್ಲಿಯ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರೂ ಟ್ವೀಟಿಸಿದ್ದರು.

ಆ್ಯಪಲ್ ಫೋನ್ಗಳ ತಯಾರಿಕೆಯಲ್ಲಿ ವಿಶ್ವದಲ್ಲಿ ಎರಡನೇ ಸ್ಥಾನದಲ್ಲಿರುವ ಫಾಕ್ಸ್ಕಾನ್,ಈಗಾಗಲೇ ತಮಿಳುನಾಡಿನಲ್ಲಿಯ ತನ್ನ ಘಟಕದಲ್ಲಿ ಇತ್ತಿಚಿನ ಪೀಳಿಗೆಯ ಐಫೋನ್ಗಳನ್ನು ತಯಾರಿಸುತ್ತಿದೆ.

ಇದನ್ನು ಓದಿ: ಸುಳ್ಳು ಸುದ್ದಿಗಳ ಯುಗದಲ್ಲಿ ಸತ್ಯವು 'ಬಲಿಪಶು'ವಾಗಿದೆ: ಸಿಜೆಐ ಚಂದ್ರಚೂಡ್

share
Next Story
X