Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಹಿಳೆಯರು ವೈದ್ಯಕೀಯ,ಶಿಕ್ಷಣ ಸಹಿತ ಹಲವು...

ಮಹಿಳೆಯರು ವೈದ್ಯಕೀಯ,ಶಿಕ್ಷಣ ಸಹಿತ ಹಲವು ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದಾರೆ: ಅಸ್ಮಾ ಮೊಹಮ್ಮದ್ ಅಸಫ್

ಬ್ಯಾರಿ ಮೇಳದಲ್ಲಿ ಮಹಿಳಾ ಉದ್ಯಮಿಗಳ ಸಮಾವೇಶ

4 March 2023 5:28 PM IST
share
ಮಹಿಳೆಯರು ವೈದ್ಯಕೀಯ,ಶಿಕ್ಷಣ ಸಹಿತ ಹಲವು ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದಾರೆ: ಅಸ್ಮಾ ಮೊಹಮ್ಮದ್ ಅಸಫ್
ಬ್ಯಾರಿ ಮೇಳದಲ್ಲಿ ಮಹಿಳಾ ಉದ್ಯಮಿಗಳ ಸಮಾವೇಶ

ಮಂಗಳೂರು: ಭಾರತದಲ್ಲಿ ಮಹಿಳಾ ಉದ್ಯಮಿಗಳ ಸಂಖ್ಯೆ ಹೆಚ್ಚುತ್ತಿದೆ, ವ್ಯಾಪಾರದಲ್ಲಿ ಮಹಿಳೆಯರು ಹೊಂದಾಣಿಕೆ ಮಾಡಲು ಸಮರ್ಥರಾಗಿದ್ದಾರೆ ಎಂದು ತೋರಿಸಿದ್ದು, ಮಹಿಳೆಯರಿಗೆ ಉದ್ಯಮ ಕ್ಷೇತ್ರ ಕೇವಲ ಸವಾಲಿನದ್ದಾಗಿದೆ ಎಂದು ಪಂಪ್‌ವೆಲ್‌ನ ತಖ್ವಾ ಪಬ್ಲಿಕ್ ಸ್ಕೂಲ್‌ನ ಆಡಳಿತಾಧಿಕಾರಿ ಅಸ್ಮಾ ಮೊಹಮ್ಮದ್ ಅಸಫ್ ಹೇಳಿದ್ದಾರೆ.

ಇಲ್ಲಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯುತ್ತಿರುವ ಬ್ಯಾರಿ ಮೇಳದ ಎರಡನೇ ದಿನವಾಗಿರುವ ಶನಿವಾರ ಮಹಿಳಾ ಉದ್ಯಮಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಇಂದು ಕರಾವಳಿ ಕರ್ನಾಟಕದ ಬ್ಯಾರಿ ಸಮುದಾಯವು ಅಂತರ್‌ರಾಷ್ಟ್ರೀಯ ವ್ಯಾಪಾರ, ಶಿಕ್ಷಣ, ವೈದ್ಯಕೀಯ ಮತ್ತು ತಂತ್ರಜ್ಞಾನದಂತಹ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದೆ ಎಂದರು.

ಡಾ. ಅಂಜುಮ್ ಬಗ್ಗೆ ಜಾಗತಿಕವಾಗಿ ಅತ್ಯಾಧುನಿಕ  ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ನಡೆಸಲು ನಮ್ಮಲ್ಲಿ ಪರಿಣತಿ ಪಡೆದಿರುವ ಪ್ರಪ್ರಥಮ ಮಹಿಳಾ ರೋಬೋಟಿಕ್ ಸರ್ಜನ್ ಆಗಿದ್ದಾರೆ. ಅವರು ನಿಜವಾದ ಚಾಂಪಿಯನ್ ಎಂದು ಬಣ್ಣಿಸಿದರು.

ಬ್ಯಾರಿ ಮೇಳವು ಸಮಾಜದ ಎಲ್ಲಾ ವರ್ಗದವರನ್ನು ಒಟ್ಟಿಗೆ ತರುತ್ತಿದೆ, ಅವರ ನಡುವಿನ ಬಾಂಧವ್ಯವನ್ನು ಬಲಪಡಿಸುತ್ತಿದೆ ಎಂದು ಹೇಳಲು ನನಗೆ ಸಂತೋಷವಾಗಿದೆ ಎಂದರು.

ಉದ್ಯಮಿ ಎಂಬ ಪದವು ಲಿಂಗ ತಟಸ್ಥ ಪದವಾಗಿದ್ದರೂ, ಇದು ಬಹಳ ಹಿಂದಿನಿಂದಲೂ ಪುರುಷರಿಗಾಗಿ ಕಾಯ್ದಿರಿಸಲಾಗಿದೆ. ಆದರೆ ಕಾಲ ಬದಲಾಗಿದೆ. ಮಹಿಳೆಯರಿಗೆ ಉದ್ಯಮದಲ್ಲಿ ಮುಂದುವರಿಯಲು ಪ್ರೋತ್ಸಾಹ ನೀಡುತ್ತಿರುವ  ಬಿಸಿಸಿಐಗೆ ತಾನು ಆಭಾರಿಯಾಗಿದ್ದೇನೆ ಎಂದು ಅವರು ಹೇಳಿದರು.

ಬ್ಯಾರಿ ಮೇಳವು ಸಮಾಜದ ಎಲ್ಲಾ ವರ್ಗದವರನ್ನು ಒಟ್ಟಿಗೆ ತರುತ್ತಿದೆ, ಅವರ ನಡುವಿನ ಬಾಂಧವ್ಯವನ್ನು ಬಲಪಡಿಸುತ್ತಿದೆ ಎಂದು ಹೇಳಲು ನನಗೆ ಸಂತೋಷವಾಗುತ್ತದೆ ಎಂದು ನುಡಿದರು.

ಆರೋಗ್ಯದ ಜಾಗೃತಿ ಬಗ್ಗೆ ಮಾತನಾಡಿದ ಸ್ತ್ರೀ ರೋಗ ತಜ್ಞೆ, ಆಂಕೊಲಾಜಿಸ್ಟ್ ಡಾ. ಮರಿಯಮ್ ಅಂಜುಮ್ ಇಫ್ತಿಕರ್ ಅವರು  ಮಹಿಳೆಯರನ್ನು ಬಾಧಿಸುವ ಕ್ಯಾನ್ಸರ್ ರೋಗಗಳ ಬಗ್ಗೆ ಮಾಹಿತಿ ನೀಡಿ ತಡೆಗಟ್ಟುವ ವಿಧಾನದ ಬಗ್ಗೆ ವಿವರಿಸಿದರು.

ಜಾಗತಿಕವಾಗಿ ಉದ್ಯಮ ವಿಸ್ತರಣೆ ಬಗ್ಗೆ ಕುನಾಫ ವರ್ಲ್ಡ್‌ನ ಸಹ ಸಂಸ್ಥಾಪಕಿ ರೂಹಿ ಝಮ್ಝೀರ್, ಹೊಸ ಉದ್ಯಮ ಅವಕಾಶಗಳ ಬಗ್ಗೆ ಹಮ್ದ್ ಫುಡ್ಸ್‌ನ ಸ್ಥಾಪಕಿ ಶಾಹಿದಾ, ಕೌಟುಂಬಿಕ ಬದುಕು ಮತ್ತು ಕರ್ತವ್ಯ ನಿರ್ವಹಣೆ ಬಗ್ಗೆ ಅಲಿಘಡ ಮುಸ್ಲಿಂ ವಿವಿಯ ರೂಬಾ ಫಾತಿಮಾ ವಿಚಾರ ಮಂಡಿಸಿದರು.

450ಕ್ಕೂ ಅಧಿಕ ಮಹಿಳೆಯರು ಈ ಸಮಾವೇಶದಲ್ಲಿ ಭಾಗವಹಿಸಿದ್ದರು.

ಝಾಕಿಯಾ ಕಾರ್ಯಕ್ರಮ ನಿರೂಪಿಸಿದರು.

share
Next Story
X