ಮೆಸ್ಕಾಂ ಜನಸಂಪರ್ಕ ಸಭೆ

ಉಡುಪಿ, ಮಾ.4: ಮೆಸ್ಕಾಂ ಶಂಕರನಾರಾಯಣ ಉಪವಿಭಾಗ ಕಚೇರಿ ಯಲ್ಲಿ ಮಾ.7ರಂದು ಬೆಳಿಗ್ಗೆ 10:30ರಿಂದ 12 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಸಭೆಯಲ್ಲಿ ಸಂಬಂಧ ಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಿದ್ದು, ಗ್ರಾಹಕರು ಈ ಅವಕಾಶ ವನ್ನು ಸದುಪಯೋಗಪಡಿಸಿ ಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಇದಕ್ಕಾಗಿ ದೂರವಾಣಿ ಸಂಖ್ಯೆ: 08259-280300ನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.
Next Story