ಮಂಗಳೂರು: ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಓರ್ವ ಸೆರೆ

ಮಂಗಳೂರು, ಮಾ.4: ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲಗುತ್ತು ಪರಿಸರದ ಮನೆಯಲ್ಲಿ ಮಾ.1ರಂದು ತನ್ನ ಪುತ್ರಿಯೊಂದಿಗೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೇಶವ ಎಂಬಾತನನ್ನು ಬಂಧಿಸಿದ್ದಾರೆ.
ಆರೋಪಿ ಕೇಶವ ಎಂಬಾತನು ವಿಜಯಾ ಎಂಬಾಕೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ವಿಜಾಯ ಬರೆದಿಟ್ಟಿದ್ದಾರೆ ಎನ್ನಲಾದ ಡೆತ್ನೋಟ್ ಮನೆಯಲ್ಲಿ ಪೊಲೀಸರಿಗೆ ಸಿಕ್ಕಿದ್ದು, ಅದರ ಆಧಾರದಲ್ಲಿ ತನಿಖೆ ಮುಂದುವರೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೋಡಿಯಾಲಗುತ್ತು ನಿವಾಸಿ ವಿಜಯಾ (33) ಅವರು ತನ್ನ ನಾಲ್ಕು ವರ್ಷದ ಪುತ್ರಿ ಶೋಭಿಕಾ ಹಾಗೂ 12 ವರ್ಷ ಪ್ರಾಯದ ಪುತ್ರಿಯೊಂದಿಗೆ ನೇಣುಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಪೈಕಿ 12 ವರ್ಷ ಪ್ರಾಯದ ಪುತ್ರಿ ಅಪಾಯದಿಂದ ಪಾರಾಗಿದ್ದರೆ, ವಿಜಯಾ ಮತ್ತು ಶೋಭಿಕಾ ಮೃತಪಟ್ಟಿದ್ದಾರೆ.
Next Story