Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಆಘಾತಕಾರಿ,ಪಿತೃಪ್ರಭುತ್ವದ ಪಕ್ಷಪಾತ’:...

‘ಆಘಾತಕಾರಿ,ಪಿತೃಪ್ರಭುತ್ವದ ಪಕ್ಷಪಾತ’: ಕೋರ್ಟ್ ತೀರ್ಪಿಗೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಟೀಕೆ

ಹಥ್ರಾಸ್ ಸಾಮೂಹಿಕ ಅತ್ಯಾಚಾರ-ಕೊಲೆ ಪ್ರಕರಣ

5 March 2023 6:37 PM IST
share
‘ಆಘಾತಕಾರಿ,ಪಿತೃಪ್ರಭುತ್ವದ ಪಕ್ಷಪಾತ’: ಕೋರ್ಟ್ ತೀರ್ಪಿಗೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಟೀಕೆ
ಹಥ್ರಾಸ್ ಸಾಮೂಹಿಕ ಅತ್ಯಾಚಾರ-ಕೊಲೆ ಪ್ರಕರಣ

ಹೊಸದಿಲ್ಲಿ: ಹಥ್ರಾಸ್ ಪ್ರಕರಣದಲ್ಲಿ ನಾಲ್ವರನ್ನು ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪಗಳಿಂದ ಮುಕ್ತಗೊಳಿಸಿರುವ ನ್ಯಾಯಾಲಯದ ತೀರ್ಪನ್ನು ತರಾಟೆಗೆತ್ತಿಕೊಂಡಿರುವ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ (AIDWA ), ತೀರ್ಪನ್ನು ಆಘಾತಕಾರಿ ಎಂದು ಬಣ್ಣಿಸಿದೆ. ತೀರ್ಪಿನ ವಿರುದ್ಧ ತಕ್ಷಣವೇ ಮೇಲ್ಮನವಿಯನ್ನು ಸಲ್ಲಿಸುವಂತೆ ಅದು ಸಿಬಿಐ ಅನ್ನು ಆಗ್ರಹಿಸಿದೆ.

2020, ಸೆ.14ರಂದು ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ 19ರ ಹರೆಯದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕ್ರೂರ ಹಲ್ಲೆ ನಡೆಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಯುವತಿ 15 ದಿನಗಳ ಬಳಿಕ ದಿಲ್ಲಿಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಳು.

ಹಥ್ರಾಸ್ ನ ಎಸ್ಸಿ/ಎಸ್ಟಿ ನ್ಯಾಯಾಲಯವು ಗುರುವಾರ ಪ್ರಕರಣದ ತೀರ್ಪನ್ನು ಪ್ರಕಟಿಸಿದ್ದು,ವಿಶೇಷ ನ್ಯಾಯಾಧೀಶ ತ್ರಿಲೋಕಸಿಂಗ್ ಪಾಲ್ ಅವರು,ಮೇಲ್ಜಾತಿಗೆ ಸೇರಿದ ನಾಲ್ವರು ಠಾಕೂರ್ಗಳನ್ನು ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪಗಳಿಂದ ಮುಕ್ತಗೊಳಿಸಿದ್ದಾರೆ. ಪ್ರಮುಖ ಆರೋಪಿ ಸಂದೀಪ (20)ಗೆ ಮಾತ್ರ ಕೊಲೆಯಲ್ಲದ ನರಹತ್ಯೆ ಆರೋಪದಲ್ಲಿ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದ್ದು,ರವಿ (35),ಲವಕುಶ (23) ಮತ್ತು ರಾಮು (26) ಬಿಡುಗಡೆಗೊಂಡಿದ್ದಾರೆ.

ಪಿತೃಪ್ರಭುತ್ವ ಮತ್ತು ಜಾತಿವಾದಿ ಪಕ್ಷಪಾತದ ದುರ್ನಾತವನ್ನು ಬೀರುತ್ತಿರುವ ತೀರ್ಪು ಮೇಲ್ಜಾತಿಯ ಎಲ್ಲ ನಾಲ್ವರನ್ನು ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪಗಳಿಂದ ಮುಕ್ತಗೊಳಿಸಿದೆ. ಬಲಿಪಶು ಯುವತಿಯ ಮರಣ ಹೇಳಿಕೆ ಮತ್ತು ಆಕೆ ಅನುಭವಿಸಿದ್ದ ಕ್ರೂರ ಹಿಂಸೆಯನ್ನು ತೀರ್ಪು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಐಡ್ವಾ ಹೇಳಿಕೆಯಲ್ಲಿ ತಿಳಿಸಿದೆ.
ಪ್ರಕರಣವು ವರದಿಯಾದಾಗಿನಿಂದಲೂ ಐಡ್ವಾ ಮತ್ತು ಇತರ ಸಂಘಟನೆಗಳು ಉತ್ತರ ಪ್ರದೇಶ ಪೊಲೀಸರು ಪಕ್ಷಪಾತದಿಂದ ವರ್ತಿಸುತ್ತಿದ್ದಾರೆ ಮತ್ತು ಆರಂಭದಿಂದಲೇ ತನಿಖೆಯನ್ನು ಕುಂಠಿತಗೊಳಿಸಿದ್ದಾರೆ ಎಂದು ಆರೋಪಿಸಿದ್ದವು.

ಪೊಲೀಸರು ಮೊದಲ ಎಫ್ಐಆರ್ನಲ್ಲಿ ಸಾಮೂಹಿಕ ಅತ್ಯಾಚಾರ ಆರೋಪವನ್ನು ಸೇರಿಸಿರಲಿಲ್ಲ,ಬಲಿಪಶು ಯುವತಿ ಪ್ರಜ್ಞೆಗೆ ಮರಳಿದ ನಂತರ ಮ್ಯಾಜಿಸ್ಟ್ರೇಟ್ರಿಗೆ ವಿಧ್ಯುಕ್ತ ಹೇಳಿಕೆಯನ್ನು ನೀಡಿದ ಬಳಿಕವಷ್ಟೇ ಸಾಮೂಹಿಕ ಅತ್ಯಾಚಾರ ಆರೋಪವನ್ನು ಸೇರಿಸಲಾಗಿತ್ತು ಮತ್ತು ಘಟನೆ ನಡೆದ 11 ದಿನಗಳ ಬಳಿಕ ವಿಧಿವಿಜ್ಞಾನ ತಜ್ಞರು ಯುವತಿಯ ಸ್ಯಾಂಪಲ್ಗಳನ್ನು ಸಂಗ್ರಹಿಸಿದ್ದರು,ಈ ವಿಳಂಬವು ಅತ್ಯಾಚಾರ ನಡೆದಿಲ್ಲ ಎಂಬ ಫಲಿತಾಂಶಕ್ಕೆ ಕಾರಣವಾಗಿತ್ತು ಮತ್ತು ವಿಧಿವಿಜ್ಞಾನ ತಜ್ಞರ ವರದಿಗೆ ಯಾವುದೇ ಬೆಲೆಯಿರಲಿಲ್ಲ. ತಾನು ನೋಡಿದಾಗ ತನ್ನ ಪುತ್ರಿಯ ಜನನಾಂಗದಿಂದ ರಕ್ತಸ್ರಾವವಾಗುತ್ತಿತ್ತು ಎಂದು ಯುವತಿಯ ತಾಯಿಯೂ ಹೇಳಿದ್ದರು ಎಂದು ಐಡ್ವಾ ಬೆಟ್ಟು ಮಾಡಿದೆ.

ಸೆ.22ರಂದು ಯುವತಿಯು ಅಲಿಗಡ ಮ್ಯಾಜಿಸ್ಟ್ರೇಟ್ ಎದುರು ನೀಡಿದ್ದ ಮರಣ ಹೇಳಿಕೆಯು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದಕ್ಕೆ ಸ್ಪಷ್ಟ ಪುರಾವೆಯಾಗಿತ್ತು. ಭಾರತದಲ್ಲಿ ಅತ್ಯಾಚಾರದ ಪ್ರಕರಣಗಳ ವಿಚಾರಣೆಯಲ್ಲಿ ಮರಣ ಹೇಳಿಕೆಯು ನಿರ್ಣಾಯಕ ಸಾಕ್ಷವಾಗಿದೆ ಎಂದು ಹೇಳಿರುವ ಐಡ್ವಾ,ಸರ್ವೋಚ್ಚ ನ್ಯಾಯಾಲಯವು ಹಲವಾರು ಪ್ರಕರಣಗಳಲ್ಲಿ ಮರಣ ಹೇಳಿಕೆಯ ಪ್ರಾಮುಖ್ಯವನ್ನು ಎತ್ತಿ ತೋರಿಸಿದೆ ಮತ್ತು ಆರೋಪಿಯನ್ನು ದೋಷನಿರ್ಣಯಕ್ಕೊಳಪಡಿಸಲು ಮರಣ ಹೇಳಿಕೆಯು ಏಕೈಕ ಆಧಾರವಾಗಬಲ್ಲದು ಎಂದು ಸ್ಪಷ್ಟಪಡಿಸಿದೆ ಎಂದು ಹೇಳಿಕೆಯಲ್ಲಿ ಬೆಟ್ಟು ಮಾಡಿದೆ.

ಘಟನೆಯ ಬಳಿಕ ಯುವತಿ ಪ್ರಜ್ಞಾವಸ್ಥೆಯಲ್ಲಿದ್ದರಿಂದ ಆರೋಪಿಗಳಾದ ಸಂದೀಪ ಮತ್ತು ಇತರರಿಗೆ ಆಕೆಯನ್ನು ಕೊಲೆ ಮಾಡುವ ಉದ್ದೇಶವಿರಲಿಲ್ಲ ಎಂಬ ನ್ಯಾಯಾಲಯದ ನಿರ್ಧಾರವೂ ತಪ್ಪಾಗಿದೆ. ನಿರ್ಭಯಾ ಪ್ರಕರಣದಲ್ಲಿ ಇಂತಹುದೇ ಸನ್ನಿವೇಶಗಳಲ್ಲಿ ನ್ಯಾಯಾಲಯವು ಕೊಲೆಯು ಸಾಬೀತಾಗಿದೆ ಎಂದು ಎತ್ತಿಹಿಡಿದಿತ್ತು. ಯಾವುದೇ ಸಂದರ್ಭದಲ್ಲಿ ಆರೋಪಿಗಳು ಬಲಿಪಶುವಿನ ಮೇಲೆ ತಮ್ಮ ಕ್ರೂರ ದಾಳಿಯ ಪರಿಣಾಮಗಳನ್ನು ತಿಳಿದಿದ್ದರು ಎಂದು ಭಾವಿಸಬೇಕಾಗುತ್ತದೆ ಎಂದು ಐಡ್ವಾ ಪ್ರತಿಪಾದಿಸಿದೆ.

ಈ ನಡುವೆ ಹತ ಯುವತಿಯ ಕುಟುಂಬವು ನ್ಯಾಯಕ್ಕಾಗಿ ತನ್ನ ಹೋರಾಟವನ್ನು ಮುಂದುವರಿಸುವುದಾಗಿ ತಿಳಿಸಿದೆ.

share
Next Story
X