Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫೆಲೆಸ್ತೀನೀಯರ ಕುರಿತ ಇಸ್ರೇಲ್ ಸಚಿವರ...

ಫೆಲೆಸ್ತೀನೀಯರ ಕುರಿತ ಇಸ್ರೇಲ್ ಸಚಿವರ ಹೇಳಿಕೆಗೆ ವಿಶ್ವಸಂಸ್ಥೆ ಖಂಡನೆ

5 March 2023 11:11 PM IST
share
ಫೆಲೆಸ್ತೀನೀಯರ ಕುರಿತ ಇಸ್ರೇಲ್ ಸಚಿವರ ಹೇಳಿಕೆಗೆ ವಿಶ್ವಸಂಸ್ಥೆ ಖಂಡನೆ

ಜೆರುಸಲೇಂ, ಮಾ.5: ಫೆಲೆಸ್ತೀನೀಯರ ಕುರಿತು ಇಸ್ರೇಲ್‍ನ ಕಟ್ಟಬಲಪಂಥೀಯ ಸಚಿವ ಬೆಝಲೆಲ್ ಸ್ಮೊಟ್ರಿಚ್ ನೀಡಿರುವ ಹೇಳಿಕೆಗೆ ಅಂತರಾಷ್ಟ್ರೀಯ ಸಮುದಾಯದಿಂದ ವ್ಯಾಪಕ ಆಕ್ರೋಶ, ಟೀಕೆ ವ್ಯಕ್ತವಾಗುತ್ತಿದ್ದಂತೆಯೇ, ಸಚಿವರು ಈ ರೀತಿಯ ಅನುಚಿತ ಹೇಳಿಕೆ ನೀಡಬಾರದಿತ್ತು ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರತಿಕ್ರಿಯಿಸಿದ್ದಾರೆ.

ವಿತ್ತಸಚಿವರಾಗಿರುವ ಸ್ಮೊಟ್ರಿಚ್, ಎರಡು ದಿನದ ಹಿಂದೆ ಸುದ್ಧಿಗೋಷ್ಟಿಯಲ್ಲಿ ಮಾತನಾಡುತ್ತಿದ್ದ ಸಂದರ್ಭ ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಫೆಲೆಸ್ತೀನೀಯರ ಗ್ರಾಮ ಹವಾರಾದಲ್ಲಿ ಇಸ್ರೇಲಿಯನ್ನರ ವಿರುದ್ಧ ನಡೆದ ದಾಳಿಯ ಕುರಿತ ಪ್ರಶ್ನೆಗೆ ` ಆ ಹವಾರಾ ನಗರವನ್ನೇ ಅಳಿಸಿ ಹಾಕುವ ಅಗತ್ಯವಿದೆ ಎಂದು ನನಗನಿಸುತ್ತದೆ' ಎಂದಿದ್ದರು.

ಈ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಸಚಿವರ ಬೇಜವಾಬ್ದಾರಿಯ, ಅಸಹ್ಯಕರ ಮತ್ತು ಅಸಂಗತ  ಹೇಳಿಕೆಯನ್ನು ಪ್ರಧಾನಿ ಬೆಂಜಮಿನ್ ನೆತನ್ಯಾಹು ತಿರಸ್ಕರಿಸಬೇಕು ಮತ್ತು ನಿರಾಕರಿಸಬೇಕು ಎಂದು ಅಮೆರಿಕದ ವಿದೇಶಾಂಗ ಇಲಾಖೆ ಆಗ್ರಹಿಸಿತ್ತು. ಇದೀಗ ನೆತನ್ಯಾಹು ತಮ್ಮ ಸಚಿವರ ಹೇಳಿಕೆ `ಅನುಚಿತ' ಎಂದಿದ್ದರೂ, ಹೇಳಿಕೆಯನ್ನು ಖಂಡಿಸಲಿಲ್ಲ. ಫೆಬ್ರವರಿ 26ರಂದು ಹವಾರಾ ನಗರದಲ್ಲಿ ಫೆಲೆಸ್ತೀನೀಯರ ಹಿಂಸಾಚಾರದಲ್ಲಿ ಇಬ್ಬರು ಇಸ್ರೇಲಿ ಸಹೋದರರ ಹತ್ಯೆ ಘಟನೆಗೆ  ವಿದೇಶೀ ಶಕ್ತಿಗಳು ಗಮನ ನೀಡಿಲ್ಲ ಎಂದು ನೆತನ್ಯಾಹು ಆರೋಪಿಸಿದ್ದಾರೆ. `ಬಾಯ್ಮಾತಿನ ವಾಕ್ಚಾತುರ್ಯದ ಬದಲು, ಹಿಂಸಾಚಾರವನ್ನು ಕಡಿಮೆ ಮಾಡಲು, ಉದ್ವಿಗ್ನತೆಯನ್ನು ಕಡಿಮೆಗೊಳಿಸುವತ್ತ ನಾವೆಲ್ಲರೂ ಗಮನ ಹರಿಸಬೇಕಾಗಿದೆ. ತಾವು ಆಡಿದ ಪದ ಸೂಕ್ತವಾಗಿರಲಿಲ್ಲ ಎಂದು ಒಪ್ಪಿಕೊಂಡಿರುವ ಸ್ಮೊಟ್ರಿಚ್‍ಗೆ ಅಭಿನಂದನೆಗಳು. ಆದರೆ ಇಬ್ಬರು ಇಸ್ರೇಲಿ ಸಹೋದರರ ಹತ್ಯೆಯ ಬಗ್ಗೆ ಫೆಲೆಸ್ತೀನ್ ಅಥಾರಿಟಿ(ಪಿಎ) ಖಂಡಿಸಬೇಕು ಎಂದು ಅಂತರಾಷ್ಟ್ರೀಯ ಸಮುದಾಯ ಒತ್ತಡ ಹೇರಲಿದೆ ಎಂದು ನಿರೀಕ್ಷಿಸುತ್ತೇನೆ' ಎಂದಿದ್ದಾರೆ.  

ಈ ಮಧ್ಯೆ, ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿರುವ ಸ್ಮೊಟ್ರಿಚ್, ತಾನು ಬಾಯ್ತಪ್ಪಿನಿಂದ ಸೂಕ್ತವಲ್ಲದ ಪದ ಬಳಕೆ ಮಾಡಿದ್ದೇನೆ. ಇಸ್ರೇಲಿಯನ್ನರ ವಿರುದ್ಧದ ಹಿಂಸಾಚಾರದ ಅಸಮಾಧಾನದಿಂದ ತಪ್ಪಾಗಿ ಮಾತನಾಡಿದ್ದೇನೆ' ಎಂದಿದ್ದಾರೆ.  

ಬೆಝಲೆಲ್ ಸ್ಮೊಟ್ರಿಚ್ ಹಿಂಸಾಚಾರ ಪ್ರಚೋದಿಸುವ ಅಕ್ಷಮ್ಯ ಹೇಳಿಕೆ ನೀಡಿದ್ದಾರೆ ಎಂದು ವಿಶ್ವಸಂಸ್ಥೆಯ ಮಾನವಹಕ್ಕುಗಳ ಮುಖ್ಯಸ್ಥರು ಖಂಡಿಸಿದ್ದಾರೆ.

ಸ್ಮೊಟ್ರಿಚ್ ಜತೆ ಅಧಿಕಾರಿಗಳ ಸಭೆಯಿಲ್ಲ: ಶ್ವೇತಭವನ

ಫೆಲೆಸ್ತೀನೀಯರ ನಗರವನ್ನು ಅಳಿಸಿ ಹಾಕಬೇಕು ಎಂಬ ಹೇಳಿಕೆ ನೀಡಿರುವ ಇಸ್ರೇಲ್ ಸಚಿವ ಬೆಝಲೆಲ್ ಸ್ಮೊಟ್ರಿಚ್ ಮುಂದಿನ ವಾರ ಅಮೆರಿಕಕ್ಕೆ ಭೇಟಿ ನೀಡುವಾಗ ಬೈಡನ್ ಆಡಳಿತದ ಅಧಿಕಾರಿಗಳನ್ನು ಭೇಟಿಯಾಗುವ ಕಾರ್ಯಕ್ರಮವಿಲ್ಲ ಎಂದು ಶ್ವೇತಭವನ ಘೋಷಿಸಿದೆ.

ಸಚಿವರಾಗಿ ನೇಮಕಗೊಂಡ ಬಳಿಕ ಅಮೆರಿಕಕ್ಕೆ ಪ್ರಪ್ರಥಮ ಭೇಟಿ ನೀಡಲಿರುವ ಸ್ಮೊಟ್ರಿಚ್, ಈ ಸಂದರ್ಭ ಅಮೆರಿಕದ ವಿತ್ತ ಕಾರ್ಯದರ್ಶಿ ಜೆನ್ ಯೆಲೆನ್ ಸಹಿತ ಇತರ ಉನ್ನತ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸುವ ಕಾರ್ಯಕ್ರಮವಿತ್ತು. ಈ ಮಧ್ಯೆ, ಫ್ರಾನ್ಸ್, ಜರ್ಮನಿ, ಜಪಾನ್, ಬ್ರಿಟನ್ ಸೇರಿದಂತೆ 19 ದೇಶಗಳ ರಾಯಭಾರಿಗಳು ಶನಿವಾರ ಹವಾರಾ ನಗರಕ್ಕೆ ಭೇಟಿ ನೀಡಿದ್ದಾರೆ. ಇಸ್ರೇಲ್ ವಿತ್ತಸಚಿವ ಸ್ಮೊಟ್ರಿಚ್ ಅವರ ಹೇಳಿಕೆಯು ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರ ನೆಡ್‍ಪ್ರೈಸ್ ಟ್ವೀಟ್ ಮಾಡಿದ್ದಾರೆ.

share
Next Story
X