Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕಿಸ್ತಾನ: ಇಮ್ರಾನ್ ಬಂಧನಕ್ಕೆ...

ಪಾಕಿಸ್ತಾನ: ಇಮ್ರಾನ್ ಬಂಧನಕ್ಕೆ `ಹೈಡ್ರಾಮಾ' ಬರಿಗೈಯಲ್ಲಿ ಮರಳಿದ ಪೊಲೀಸರು

5 March 2023 11:21 PM IST
share
ಪಾಕಿಸ್ತಾನ: ಇಮ್ರಾನ್ ಬಂಧನಕ್ಕೆ `ಹೈಡ್ರಾಮಾ ಬರಿಗೈಯಲ್ಲಿ ಮರಳಿದ ಪೊಲೀಸರು

ಲಾಹೋರ್, ಮಾ.5: ಬಂಧನ ವಾರಾಂಟ್ ಜಾರಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‍ ಖಾನ್‍ರನ್ನು ಬಂಧಿಸಲು ಅಧಿಕಾರಿಗಳು ಲಾಹೋರ್‍ನ ನಿವಾಸಕ್ಕೆ ರವಿವಾರ ಆಗಮಿಸಿದ್ದರು. ಆದರೆ ಇಮ್ರಾನ್ ಎಲ್ಲಿದ್ದಾರೆ ಎಂಬುದು ಪತ್ತೆಯಾಗದೆ ವಾಪಾಸು ತೆರಳಿದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಆದರೆ ಪೊಲೀಸರು ಮನೆಯಿಂದ ತೆರಳಿದೊಡನೆ ಇಮ್ರಾನ್ ತಮ್ಮ ಮನೆಯೆದುರು ಬೆಂಬಲಿಗರುನ್ನುದ್ದೇಶಿಸಿ ಮಾತನಾಡಿದರು.

ನ್ಯಾಯಾಲಯದ ಆದೇಶದಂತೆ ಇಮ್ರಾನ್‍ರನ್ನು ಬಂಧಿಸಲು  ಇಸ್ಲಮಾಬಾದ್ ಪೊಲೀಸರ ತಂಡವು ಲಾಹೋರ್‍ಗೆ ಆಗಮಿಸಿದೆ. ಪೊಲೀಸ್ ಅಧೀಕ್ಷಕರು ಇಮ್ರಾನ್ ಅವರ ಕೋಣೆಗೆ ಹೋದಾಗ ಇಮ್ರಾನ್ ಅಲ್ಲಿರಲಿಲ್ಲ ಎಂದು ಇಸ್ಲಮಾಬಾದ್ ಪೊಲೀಸರು ಟ್ವೀಟ್ ಮಾಡಿದ್ದಾರೆ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ಹಾಜರಾಗಲು ವಿಫಲವಾದ ಬಳಿಕ ಇಮ್ರಾನ್ ಬಂಧನಕ್ಕೆ ವಾರಾಂಟ್ ಜಾರಿಯಾಗಿತ್ತು.

ಈ ಮಧ್ಯೆ, ಇಮ್ರಾನ್ ಬಂಧನವಾಗಬಹುದು ಎಂಬ ವರದಿಯ ಬಳಿಕ ಅವರ ಲಾಹೋರ್ ನಿವಾಸದ ಎದುರು ಸಾವಿರಾರು ಬೆಂಬಲಿಗರು ನೆರೆದಿದ್ದರು. ಪೊಲೀಸರ ತಂಡ ತೆರಳಿದ ಬಳಿಕ ಲಾಹೋರ್‍ನ `ಝಮಾನ್ ಪಾರ್ಕ್' ನಿವಾಸದ ಎದುರು ಬೆಂಬಲಿಗರುನ್ನುದ್ದೇಶಿಸಿ ಇಮ್ರಾನ್‍ಖಾನ್ ಮಾತನಾಡಿದಾಗ ಮನೆಯ ಹೊರಭಾಗದಲ್ಲಿ ಸ್ಥಳೀಯ ಪೊಲೀಸರು ಹಾಜರಿದ್ದರು ಎಂದು ವರದಿಯಾಗಿದೆ. `ಸುಳ್ಳು ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲಾಗಿದ್ದು ಸಮನ್ಸ್ ಜಾರಿಯಾಗಿದೆ. ಈ ಬಗ್ಗೆ ದೇಶ ತಿಳಿದುಕೊಳ್ಳಬೇಕು. ಭ್ರಷ್ಟ ಆಡಳಿತದ ವಿರುದ್ಧ ರಾಷ್ಟ್ರವು ಒಗ್ಗಟ್ಟಿನಿಂದ ನಿಲ್ಲದಿದ್ದರೆ ಅದು ದೇಶಕ್ಕೆ ಕೆಟ್ಟಶಕುನವಾಗಲಿದೆ' ಎಂದು ಇಮ್ರಾನ್ ಹೇಳಿದರು.

ಇಸ್ಲಮಾಬಾದ್ ಪೊಲೀಸರಿಂದ ನೋಟಿಸ್ ಬಂದಿದೆ. ಆದರೆ ನೋಟಿಸ್‍ನಲ್ಲಿ ಇಮ್ರಾನ್ ಬಂಧನದ ಆದೇಶವಿರಲಿಲ್ಲ. ನಮ್ಮ ವಕೀಲರೊಂದಿಗೆ ಸಮಾಲೋಚಿಸಿ ಕಾನೂನು ಕ್ರಮದ ಬಗ್ಗೆ ನಿರ್ಧರಿಸಲಾಗುವುದು  ಎಂದು ಪಾಕಿಸ್ತಾನ್ ತೆಹ್ರೀಕೆ ಇನ್ಸಾಫ್ ಪಕ್ಷದ ಉಪಾಧ್ಯಕ್ಷ ಶಾ ಮಹ್ಮೂದ್ ಖುರೇಶಿ ಹೇಳಿದ್ದಾರೆ.

 ಇದನ್ನು ಓದಿ:  ಪಂಜಾಬ್:‌ ಜೈಲಿನಲ್ಲಿ ಗಾಯಕ ಮೂಸೆವಾಲಾ ಕೊಲೆ ಆರೋಪಿಗಳನ್ನು ಹತ್ಯೆಗೈದು ಸಂಭ್ರಮಿಸುತ್ತಿರುವ ಕೈದಿಗಳ ವಿಡಿಯೋ ವೈರಲ್‌

share
Next Story
X