Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಸಾಂದರ್ಭಿಕ ಆರ್ಥಿಕ ಹಿಂಜರಿತದ...

ಭಾರತದ ಸಾಂದರ್ಭಿಕ ಆರ್ಥಿಕ ಹಿಂಜರಿತದ ಕುರಿತು ಆತಂಕವಾಗುತ್ತಿದೆ: ರಘುರಾಮ್ ರಾಜನ್

6 March 2023 4:54 PM IST
share
ಭಾರತದ ಸಾಂದರ್ಭಿಕ ಆರ್ಥಿಕ ಹಿಂಜರಿತದ ಕುರಿತು ಆತಂಕವಾಗುತ್ತಿದೆ: ರಘುರಾಮ್ ರಾಜನ್

ಹೊಸದಿಲ್ಲಿ: ಮೂರನೆಯ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆ ಮತ್ತಷ್ಟು ಮಂದವಾಗಿರುವುದರಿಂದ ನಾನು ಆತಂಕಗೊಂಡಿದ್ದೇನೆ ಎಂದು ಭಾರತೀಯ ರಿಸರ್ವ್ ಬ್ಯಾಂಕಿನ ಮಾಜಿ ಗವರ್ನರ್ ರಘುರಾಮ್ ರಾಜನ್ (Raghuram Rajan) ಹೇಳಿದ್ದಾರೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಮಂಗಳವಾರ ಸರ್ಕಾರ ಬಿಡುಗಡೆ ಮಾಡಿದ್ದ ದತ್ತಾಂಶದ ಪ್ರಕಾರ, ಜುಲೈನಿಂದ ಸೆಪ್ಟೆಂಬರ್ ತಿಂಗಳ ಎರಡನೆ ತ್ರೈಮಾಸಿಕ ಅವಧಿಯಲ್ಲಿ ಭಾರತದ ಆರ್ಥಿಕ ಬೆಳವಣಿಗೆಯ ದರವು ಶೇ. 6.3 ಇದ್ದದ್ದು, ಅಕ್ಟೋಬರ್‌ನಿಂದ ಡಿಸೆಂಬರ್ ತಿಂಗಳ ಮೂರನೆ ತ್ರೈಮಾಸಿಕದಲ್ಲಿ ಶೇ. 4.4ಕ್ಕೆ ಕುಂಠಿತಗೊಂಡಿದೆ. ಹೀಗಿದ್ದೂ, 2021-22ರಲ್ಲಿ ಅಂದಾಜಿಸಲಾಗಿದ್ದ ಶೇ. 8.7 ಬೆಳವಣಿಗೆ ದರವನ್ನು ಶೇ. 9.1ಕ್ಕೆ ಪರಿಷ್ಕರಿಸಿದ್ದ ಸರ್ಕಾರವು, 2022-23ರಲ್ಲಿ ಶೇ. 7ರ ಬೆಳವಣಿಗೆ ದರದ ಮುನ್ನೋಟವನ್ನು ಉಳಿಸಿಕೊಂಡಿದೆ.

ಈ ಕುರಿತು PTI ಸುದ್ದಿ ಸಂಸ್ಥೆಗೆ ಸಂದರ್ಶನ ನೀಡಿರುವ ರಘುರಾಮ್ ರಾಜನ್, "ಹಿಂದಿನ ಜಿಡಿಪಿ ಬೆಳವಣಿಗೆ ದರವನ್ನು ಮೇಲ್ಮುಖವಾಗಿ ಪರಿಷ್ಕರಿಸಲಾಗಿದೆ ಎಂಬ ಆಶಾವಾದಿಗಳ ಮಾತನ್ನು ಖಂಡಿತ ಒಪ್ಪಬಹುದಾದರೂ, ನಾನು ಸಾಂದರ್ಭಿಕ ಆರ್ಥಿಕತೆ ಮಂದವಾಗಿರುವುದರ ಕುರಿತು ಕಳವಳಗೊಂಡಿದ್ದೇನೆ" ಎಂದು ಹೇಳಿದ್ದಾರೆ. "ಖಾಸಗಿ ವಲಯದವರು ಹೂಡಿಕೆ ಮಾಡಲು ಇಚ್ಛಿಸುತ್ತಿಲ್ಲ, ಆರ್‌ಬಿಐ ಈಗಲೂ ಬಡ್ಡಿ ದರ ಏರಿಕೆಯನ್ನು ಮುಂದುವರಿಸಿದೆ, ಮುಂದಿನ ವರ್ಷಗಳಲ್ಲಿ ಜಾಗತಿಕ ಬೆಳವಣಿಗೆ ಕುಂಠಿತಗೊಳ್ಳುವ ಸಾಧ್ಯತೆ ಇದೆ, ಹೀಗಿರುವಾಗ ಹೆಚ್ಚುವರಿ ಬೆಳವಣಿಗೆಯ ವೇಗವನ್ನು ಎಲ್ಲಿಂದ ಸಾಧಿಸಲಾಗುತ್ತದೆ ಎಂಬ ಬಗ್ಗೆ ನನಗೆ ಖಚಿತತೆ ಇಲ್ಲ" ಎಂದೂ ತಿಳಿಸಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕ್ 2022-23ನೇ ನಾಲ್ಕನೆ ತ್ರೈಮಾಸಿಕದ ಬೆಳವಣಿಗೆ ದರವನ್ನು ಶೇ. 4.2ಕ್ಕೆ ನಿಗದಿಗೊಳಿಸಿರುವುದರಿಂದ ನನ್ನ ಕಳವಳ ತಪ್ಪಾಗಿರಲು ಸಾಧ್ಯವಿಲ್ಲ ಎಂದು ಖ್ಯಾತ ಅರ್ಥಶಾಸ್ತ್ರಜ್ಞರೂ ಆದ ರಘುರಾಮ್ ರಾಜನ್ ಅಭಿಪ್ರಾಯ ಪಟ್ಟಿದ್ದಾರೆ.

"ಈ ಹಂತದಲ್ಲಿ ಅಕ್ಟೋಬರ್-ಡಿಸೆಂಬರ್ ಸಾಲಿನ ಸರಾಸರಿ ವಾರ್ಷಿಕ ಬೆಳವಣಿಗೆಯು ಕೊರೋನ ಸಾಂಕ್ರಾಮಿಕ ಪೂರ್ವದ ಮೂರು ವರ್ಷಗಳ ಹಿಂದಿದ್ದ ಶೇ. 3.7ರಷ್ಟಿದೆ. ಇದು ಅಪಾಯಕಾರಿಯಾಗಿ ಹಳೆಯ ಹಿಂದೂ ಬೆಳವಣಿಗೆಯ ಸಮೀಪವಿದೆ. ನಾವು ಮತ್ತಷ್ಟು ಉತ್ತಮ ಪ್ರಗತಿ ಸಾಧಿಸಬೇಕು" ಎಂದು ಹೇಳಿದ್ದಾರೆ.

ಭಾರತೀಯ ಅರ್ಥಶಾಸ್ತ್ರಜ್ಞ ರಾಜ್ ಕೃಷ್ಣ ಪ್ರಪ್ರಥಮ ಬಾರಿಗೆ 1978ರಲ್ಲಿ "ಹಿಂದೂ ಬೆಳವಣಿಗೆ ದರ" ಎಂಬ ಪದವನ್ನು 1950ರಿಂದ 1980ರ ನಡುವಿನ ಆರ್ಥಿಕ ಬೆಳವಣಿಗೆಯ ಮಂದಗತಿಯನ್ನು ವ್ಯಾಖ್ಯಾನಿಸಲು ಬಳಸಿದ್ದರು.

ಇದನ್ನೂ ಓದಿ: H3N2 ಹಾವಳಿ | ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ

share
Next Story
X