Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿಕ್ಷಕರ ಆಕ್ರಮಣಕಾರಿ ನಡವಳಿಕೆಗಳಿಂದ...

ಶಿಕ್ಷಕರ ಆಕ್ರಮಣಕಾರಿ ನಡವಳಿಕೆಗಳಿಂದ ಎಳೆಯ ಮನಸ್ಸುಗಳು ನಲುಗಬಾರದು: ಹೈಕೋರ್ಟ್

6 March 2023 6:29 PM IST
share
ಶಿಕ್ಷಕರ ಆಕ್ರಮಣಕಾರಿ ನಡವಳಿಕೆಗಳಿಂದ ಎಳೆಯ ಮನಸ್ಸುಗಳು ನಲುಗಬಾರದು: ಹೈಕೋರ್ಟ್

ಬೆಂಗಳೂರು, ಮಾ.6: ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಓದುತ್ತಿದ್ದ 5 ವರ್ಷದ ಹೆಣ್ಣು ಮಗುವಿನ ಬಟ್ಟೆ ಬಿಚ್ಚಿಸಿ ಅವಮಾನಿಸಿದ ಹಿನ್ನೆಲೆಯಲ್ಲಿ ಶಿಕ್ಷಕಿಯ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಶಿಕ್ಷಕರ ಆಕ್ರಮಣಕಾರಿ ನಡವಳಿಕೆಗಳಿಂದ ಎಳೆಯ ಮನಸ್ಸುಗಳು ನಲುಗಬಾರದು ಎಂದು ಹೇಳಿದೆ.  

ಹಲಸೂರು ಪೊಲೀಸ್ ಠಾಣೆಯಲ್ಲಿ ಮಗುವಿನ ಪೋಷಕರು ದಾಖಲಿಸಿರುವ ಎಫ್‍ಐಆರ್ ರದ್ದುಪಡಿಸುವಂತೆ ಕೋರಿ ಶಿಕ್ಷಕಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ಮಾಡಿದೆ.

ಸಂತ್ರಸ್ತ ಮಗುವಿನ ತಾಯಿ ಹಲಸೂರು ಪೊಲೀಸರಿಗೆ ದೂರು ನೀಡಿ, ತಮ್ಮ ಮಗುವಿಗೆ ಶಾಲೆಯಲ್ಲಿ ಶಿಕ್ಷಕಿ ಥಳಿಸುತ್ತಿದ್ದರು. ಇದನ್ನು ಪ್ರಶ್ನಿಸಿದ ಬಳಿಕ ಎಲ್ಲ ಮಕ್ಕಳ ಮುಂದೆ ಮಗುವಿನ ಪ್ಯಾಂಟ್ ಬಿಚ್ಚಿ ಅಪಮಾನಿಸಲಾಗಿದೆ. ನಂತರ ಮಗುವನ್ನು ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿದ್ದಾರೆ ಎಂದು ಆರೋಪಿಸಿದ್ದರು.

ದೂರಿನ ಮೇರೆಗೆ ಪೊಲೀಸರು ಪೋಕ್ಸೊ ಕಾಯ್ದೆ ಅಡಿ ಎಫ್‍ಐಆರ್ ದಾಖಲಿಸಿ, ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ 41 ವರ್ಷದ ಶಿಕ್ಷಕಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಶಿಕ್ಷಕರು ಮಕ್ಕಳೊಂದಿಗೆ ವರ್ತಿಸುವಾಗ ಜಾಗರೂಕರಾಗಿರಬೇಕು, ಕೋಲು ಪಕ್ಕಕ್ಕಿಟ್ಟು ಕಲಿಸಲು ಮುಂದಾಗಬೇಕು, ಶಿಕ್ಷಕರ ಆಕ್ರಮಣಕಾರಿ ನಡವಳಿಕೆಗಳಿಂದ ಎಳೆಯ ಮನಸ್ಸುಗಳು ನಲುಗಬಾರದು. ಹಾಗಾದಲ್ಲಿ ಮಕ್ಕಳ ಮನಸ್ಸಿನ ಮೇಲೆ ದೀರ್ಘಕಾಲೀನ ನಕಾರಾತ್ಮಕ ಪರಿಣಾಮ ಬೀರುತ್ತದೆ. ಈ ಪ್ರಕರಣದಲ್ಲಿ ಶಿಕ್ಷಕಿ ಮಗುವಿನ ಪ್ಯಾಂಟ್ ನ್ನು ಎಲ್ಲ ಮಕ್ಕಳ ಮುಂದೆ ಎಳೆದು ನಾಚಿಕೆಯಿಂದ ತಲೆ ತಗ್ಗಿಸಿ ನಿಲ್ಲುವಂತೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಗುವನ್ನು ಕತ್ತಲೆ ಕೋಣೆಯಲ್ಲಿ ಕೂಡಿಟ್ಟ ಅರೋಪವಿದೆ. ಮಗು ವಿಚಾರಣಾ ನ್ಯಾಯಾಲಯದಲ್ಲಿ ನೀಡಿರುವ ಹೇಳಿಕೆಯಲ್ಲೂ ಈ ಅಂಶಗಳಿವೆ. ಯಾವುದೇ ವ್ಯಕ್ತಿಯ ತನ್ನ ದೇಹವನ್ನು ಇತರರಿಗೆ ಪ್ರದರ್ಶಿಸುವಂತೆ ಮಾಡುವುದು ಲೈಂಗಿಕ ದೌರ್ಜನ್ಯವಾಗುತ್ತದೆ. ಹೀಗಾಗಿ ಪ್ರಕರಣವನ್ನು ವಿಚಾರಣಾ ನ್ಯಾಯಾಲಯವೇ ನಿರ್ಧರಿಸಬೇಕಿದೆ ಎಂದು ಅಭಿಪ್ರಾಯಪಟ್ಟು ಶಿಕ್ಷಕಿ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿದೆ. 

share
Next Story
X