ಬೆಂಕಿ ಅಕಸ್ಮಿಕ: ಗಾಯಾಳು ಮಹಿಳೆ ಮೃತ್ಯು

ಬ್ರಹ್ಮಾವರ, ಮಾ.6: ಉಪ್ಪೂರು ಗ್ರಾಮದ ಹೆರಾಯಿಬೆಟ್ಟು ಎಂಬಲ್ಲಿ ಬೆಂಕಿ ಅಕಸ್ಮಿಕದಿಂದ ಗಂಭೀರವಾಗಿ ಗಾಯ ಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಕಮಲ ಸೇರ್ವೆಗಾರ್ತಿ(73) ಎಂದು ಗುರುತಿಸಲಾಗಿದೆ. ಇವರು ಫೆ.28ರಂದು ಮಧ್ಯಾಹ್ನ ಮನೆಯ ಹೊರಗಡೆಯ ಒಲೆಯಲ್ಲಿ ಬಿಸಿ ನೀರನ್ನು ಕಾಯಿಸುವಾಗ ಒಲೆಯಲ್ಲಿನ ಬೆಂಕಿಯು ಅಕಸ್ಮಿಕವಾಗಿ ಕಮಲ ಸೇರ್ವೆಗಾರ್ತಿ ಅವರ ಸೀರೆಗೆ ಅಕಸ್ಮಿಕವಾಗಿ ತಗಲಿತು. ಇದರಿಂದ ಗಂಭೀರವಾಗಿ ಗಾಯ ಗೊಂಡಿದ್ದ ಇವರು, ಮಣಿಪಾಲ ಆಸ್ಪತ್ರೆಯಲ್ಲಿ ಮಾ.5ರಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story