Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘‘ಉಗ್ರರೊಂದಿಗೆ ನಕಲಿ ಕಾಳಗ’’: ಸೇನಾ...

‘‘ಉಗ್ರರೊಂದಿಗೆ ನಕಲಿ ಕಾಳಗ’’: ಸೇನಾ ಕ್ಯಾಪ್ಟನ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ಸೇನಾ ನ್ಯಾಯಾಲಯ

ಕಾಶ್ಮೀರಿದಲ್ಲಿ ಮೂವರು ಕಾರ್ಮಿಕರನ್ನು ಕೊಂದ ಪ್ರಕರಣ

6 March 2023 9:41 PM IST
share
‘‘ಉಗ್ರರೊಂದಿಗೆ ನಕಲಿ ಕಾಳಗ’’: ಸೇನಾ ಕ್ಯಾಪ್ಟನ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ಸೇನಾ ನ್ಯಾಯಾಲಯ
ಕಾಶ್ಮೀರಿದಲ್ಲಿ ಮೂವರು ಕಾರ್ಮಿಕರನ್ನು ಕೊಂದ ಪ್ರಕರಣ

ಹೊಸದಿಲ್ಲಿ, ಮಾ. 6: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗುಂಡಿನ ಕಾಳಗ ನಡೆದಿದೆ ಎಂಬಂತೆ ಬಿಂಬಿಸಿ ಮೂವರು ಕಾಶ್ಮೀರಿ ವ್ಯಕ್ತಿಗಳನ್ನು ಕೊಂದ ಪ್ರಕರಣದಲ್ಲಿ ಸೇನಾ ನ್ಯಾಯಾಲಯವೊಂದು ಸೇನಾಧಿಕಾರಿಯೊಬ್ಬರಿಗೆ ಜೀವಾವಧಿ ಶಿಕ್ಷೆಯನ್ನು ಶಿಫಾರಸು ಮಾಡಿದೆ.

ಈ ಪ್ರಕರಣದಲ್ಲಿ ಕ್ಯಾಪ್ಟನ್ ಭೂಪೇಂದ್ರ ಸಿಂಗ್ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರಗಳ) ಕಾಯ್ದೆಯ ಅಧಿಕಾರಗಳನ್ನು ಉಲ್ಲಂಘಿಸಿದ್ದಾರೆ ಎನ್ನುವುದು ಸೇನಾ ವಿಚಾರಣೆಯಲ್ಲಿ ಖಚಿತಪಟ್ಟ ಬಳಿಕ, ಅವರನ್ನು ಸೇನಾ ನ್ಯಾಯಾಲಯದ ವಿಚಾರಣೆಗೆ ಒಳಪಡಿಸಲಾಗಿತ್ತು.

ಜೀವಾವಧಿ ಶಿಕ್ಷೆಯ ಶಿಫಾರಸನ್ನು ಸೇನೆಯ ಉನ್ನತ ಅಧಿಕಾರಿಗಳು ಅಂಗೀಕರಿಸಿದರೆ ಶಿಕ್ಷೆ ಜಾರಿಯಾಗುತ್ತದೆ.

2020 ಜುಲೈ 18ರಂದು, ಭಯೋತ್ಪಾದಕರೆಂಬ ಸಂಶಯದಲ್ಲಿ ನಕಲಿ ಗುಂಡಿನ ಕಾಳಗದಲ್ಲಿ ಅಬ್ರಾರ್ ಅಹ್ಮದ್, ಇಮ್ತಿಯಾಝ್ ಅಹ್ಮದ್ ಮತ್ತು ಮುಹಮ್ಮದ್ ಇಬ್ರಾರ್ ಎಂಬವರನ್ನು ಗುಂಡು ಹಾರಿಸಿ ಕೊಲ್ಲಲಾಗಿತ್ತು. ಮೃತಪಟ್ಟವರು ಕಾರ್ಮಿಕರು ಎಂಬುದಾಗಿ ಅವರ ಸಂಬಂಧಿಕರು ಹೇಳಿದ್ದರು.

2020 ಆಗಸ್ಟ್ 9ರಂದು ಮೂವರು ವ್ಯಕ್ತಿಗಳ ಕುಟುಂಬಿಕರು ನಾಪತ್ತೆ ದೂರು ನೀಡಿದ್ದರು. ಆ ಬಳಿಕ ಸೇನೆಯು ವಿಷಯದ ಬಗ್ಗೆ ಔಪಚಾರಿಕ ತನಿಖೆ ನಡೆಸಿತು.

ತನಿಖೆ ಆರಂಭಗೊಂಡ ಒಂದು ತಿಂಗಳ ಬಳಿಕ ಹೇಳಿಕೆಯೊಂದನ್ನು ನೀಡಿದ ಸೇನೆ, ತನ್ನ ಸಿಬ್ಬಂದಿಯು ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆಯ ಅಧಿಕಾರಗಳನ್ನು ದುರುಪಯೋಗಪಡಿಸಿಕೊಂಡಿರುವುದು ‘‘ಮೇಲ್ನೋಟಕ್ಕೆ’’ ಪತ್ತೆಯಾಗಿದೆ ಎಂದು ಹೇಳಿತ್ತು. ಸಿಬ್ಬಂದಿಯ ವಿರುದ್ಧ ಸೇನಾ ಕಾಯ್ದೆಯನ್ವಯ ಶಿಸ್ತು ಕ್ರಮ ಆರಂಭಿಸಲಾಗಿದೆ ಎಂದು ಅದು ಹೇಳಿತ್ತು.

ಪೊಲೀಸರೂ ಈ ಘಟನೆಯ ಬಗ್ಗೆ ತನಿಖೆ ನಡೆಸಿದರು. ಪ್ರಕರಣದಲ್ಲಿ ಆರೋಪಿ ಸೇನಾಧಿಕಾರಿ ಸಿಂಗ್ ಸಾಕ್ಷ್ಯನಾಶಕ್ಕೆ ಪ್ರಯತ್ನಿಸಿದ್ದಾನೆ ಎಂದು ಪೊಲೀಸರು 2021 ಜನವರಿಯಲ್ಲಿ ತಮ್ಮ ಆರೋಪಪಟ್ಟಿಯಲ್ಲಿ ಹೇಳಿದರು. ಮೃತಪಟ್ಟ ಮೂವರು ಕಾರ್ಮಿಕರಾಗಿದ್ದು ಅವರಿಗೆ ಭಯೋತ್ಪಾದಕರೊಂದಿಗೆ ಯಾವುದೇ ನಂಟು ಇರಲಿಲ್ಲ ಎಂದು ಪೊಲೀಸರು ಹೇಳಿದರು. ಮೃತರಿಂದ ವಶಪಡಿಸಿಕೊಳ್ಳಲಾಯಿತೆನ್ನಲಾದ ಶಸ್ತ್ರಗಳನ್ನು ಘಟನೆ ನಡೆದ ಸ್ಥಳದಲ್ಲಿ ಸೈನಿಕರೇ ಇರಿಸಿದ್ದರು ಎಂಬುದಾಗಿಯೂ ಪೊಲೀಸರು ಹೇಳಿದರು.

share
Next Story
X