Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಹೊರಗುತ್ತಿಗೆ ನೌಕರರಿಗೆ ಶಾಸನಬದ್ಧ...

ಹೊರಗುತ್ತಿಗೆ ನೌಕರರಿಗೆ ಶಾಸನಬದ್ಧ ಭವಿಷ್ಯನಿಧಿ, ವೇತನ ಪಾವತಿಸದೆ ವಂಚನೆ

ಒಟ್ಟು ವೇತನ, ಕೂಲಿ ವೇತನಗಳನ್ನು ಲೆಕ್ಕ ಹಾಕುವಲ್ಲಿ ಬಿಡಬ್ಲ್ಯೂಎಸ್‌ಎಸ್‌ಬಿ ಕರ್ತವ್ಯಲೋಪ

ಜಿ. ಮಹಾಂತೇಶ್ಜಿ. ಮಹಾಂತೇಶ್7 March 2023 9:04 AM IST
share
ಹೊರಗುತ್ತಿಗೆ ನೌಕರರಿಗೆ ಶಾಸನಬದ್ಧ ಭವಿಷ್ಯನಿಧಿ, ವೇತನ ಪಾವತಿಸದೆ ವಂಚನೆ
ಒಟ್ಟು ವೇತನ, ಕೂಲಿ ವೇತನಗಳನ್ನು ಲೆಕ್ಕ ಹಾಕುವಲ್ಲಿ ಬಿಡಬ್ಲ್ಯೂಎಸ್‌ಎಸ್‌ಬಿ ಕರ್ತವ್ಯಲೋಪ

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ)ಯಲ್ಲಿ ಡೇಟಾ ಎಂಟ್ರಿ ಆಪರೇಟರ್ಸ್ ಸೇರಿದಂತೆ ಇನ್ನಿತರ ವಿಭಾಗಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಶಾಸನಬದ್ಧವಾಗಿ ಪಾವತಿಸಬೇಕಾದ ಕೂಲಿ, ಭವಿಷ್ಯ ನಿಧಿಯನ್ನು ಪಾವತಿಸದ ಹೊರಗುತ್ತಿಗೆ ಏಜೆನ್ಸಿಯು ಅಕ್ರಮ ಮತ್ತು ಕಾನೂನುಬಾಹಿರವಾಗಿ ಹಣ ಸಂಪಾದನೆಗೆ ದಾರಿಮಾಡಿಕೊಟ್ಟಿತ್ತು ಎಂಬ ಪ್ರಕರಣವನ್ನು ಸಿಎಜಿಯು ಹೊರಗೆಡವಿದೆ.

ಹೊರಗುತ್ತಿಗೆ ಉದ್ಯೋಗಿಗಳಿಗೆ ಶಾಸನಬದ್ಧ ಪ್ರಯೋಜನಗಳನ್ನು ನಿರಾಕರಿಸಲಾಗಿತ್ತಲ್ಲದೇ ಹೊರಗುತ್ತಿಗೆ ಸಂಸ್ಥೆಗೆ ನೀಡಬೇಕಿದ್ದ ಸೇವಾ ಶುಲ್ಕ, ಒಟ್ಟು ವೇತನ, ಕೂಲಿ ವೇತನಗಳನ್ನು ಸಮರ್ಪಕವಾಗಿ ಲೆಕ್ಕ ಹಾಕುವಲ್ಲಿ ಬಿಡಬ್ಲ್ಯೂಎಸ್‌ಎಸ್‌ಬಿ ಕರ್ತವ್ಯಲೋಪವೂ ಎಸಗಿತ್ತು ಎಂಬ ಅಂಶವನ್ನೂ ಸಿಎಜಿಯು ಬಹಿರಂಗಗೊಳಿಸಿದೆ.

ಹೊರಗುತ್ತಿಗೆ ಸಂಸ್ಥೆಯು ಕ್ರೋಢೀಕೃತ ಚಲನ್‌ಗಳನ್ನು ಸಲ್ಲಿಸಿತ್ತು. ಅವು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಲಿಯ ಹೊರಗುತ್ತಿಗೆ ಉದ್ಯೋಗಿಗಳಿಗೆ ಸಂಬಂಧಿಸಿದಂತೆ ಉದ್ಯೋಗಿಗಳ ಭವಿಷ್ಯ ನಿಧಿ ಮತ್ತು ಉದ್ಯೋಗಿಗಳ ರಾಜ್ಯ ವಿಮೆ ಕೊಡುಗೆಗಳನ್ನು ಪ್ರತ್ಯೇಕವಾಗಿ ತೋರಿಸಿರಲಿಲ್ಲ. ಡಿಡಿಒ ಹಾಗೂ ಮುಖ್ಯ ಲೆಕ್ಕಪತ್ರಗಳ ಮುಖ್ಯಾಧಿಕಾರಿಯು ಹೊರಗುತ್ತಿಗೆ ಉದ್ಯೋಗಿಗಳ ದಿನಗೂಲಿ ವೇತನ ಬಿಲ್‌ಗಳನ್ನು ಅನುಮೋದಿಸುವ ವೇಳೆಯಲ್ಲಿ ಉದ್ಯೋಗಿವಾರು ಕೊಡುಗೆ ವಿವರಗಳನ್ನು ಒಳಗೊಂಡಿರುವಂತಹ ವಿದ್ಯುನ್ಮಾನ ಸಲ್ಲಿಕೆ ಜೊತೆಯಲ್ಲಿ ಚಲನ್‌ಗಳನ್ನು ಪರಿಶೀಲಿಸಿರುತ್ತಿರಲಿಲ್ಲ. ಕೇವಲ ಒಟ್ಟಾರೆ ಕೊಡುಗೆಗಳ ಪಾವತಿ ಸ್ಥಿತಿಗತಿಗಳನ್ನು ಮಾತ್ರ ಪರಿಶೀಲಿಸುತ್ತಿದ್ದರು ಎಂದು ಸಿಎಜಿ ವರದಿಯಲ್ಲಿ ವಿವರಿಸಲಾಗಿದೆ.

‘ಈ ರೀತಿಯಾಗಿ ಗುತ್ತಿಗೆ ಷರತ್ತುಗಳಿಗೆ ಬದ್ಧವಾಗಿರುವಲ್ಲಿ ಹಾಗೂ ಶಾಸನಬದ್ಧ ಕೊಡುಗೆಗಳ ಮೇಲ್ವಿಚಾರಣೆ ಮಾಡುವಲ್ಲಿ ಬೆಂಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿಯು ವಿಫಲವಾಗಿತ್ತು. ಹೊರಗುತ್ತಿಗೆ ಉದ್ಯೋಗಿಗಳಿಗೆ ಸಂಚಿತಗೊಳ್ಳಬೇಕಿದ್ದಂತಹ ನ್ಯಾಯಸಮ್ಮತ ಪ್ರಯೋಜನಗಳಿಂದ ಅವರನ್ನು ವಂಚಿಸಲಾಗಿತ್ತು. ಹೊರಗುತ್ತಿಗೆ ಸಂಸ್ಥೆಯು ಅನುಕ್ರಮವಾಗಿ 24.83 ಕೋಟಿ ರೂ. ಹಾಗೂ 7.28 ಕೋಟಿ ರೂ.ಗಳನ್ನು ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ರಾಜ್ಯ ವಿಮೆ ಕೊಡುಗೆಗಳನ್ನು ನಿಯಮಬಾಹಿರವಾಗಿ/ಅನಧಿಕೃತವಾಗಿ ಉಳಿಸಿಕೊಳ್ಳುವಲ್ಲಿ ಪರಿಣಿಮಿಸಿತು’ ಎಂದು ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಬಿಡಬ್ಲ್ಯುಎಸ್‌ಎಸ್‌ಬಿಯು ಉದ್ಯೋಗಿಗಳ ಭವಿಷ್ಯ ನಿಧಿ, ಉದ್ಯೋಗದಾತರ ಕೊಡುಗೆಯನ್ನು ವೇತನದ ಶೇ.13.16 ದರದಲ್ಲಿ ಹಾಗೂ ಉದ್ಯೋಗಿಗಳ ರಾಜ್ಯ ವಿಮಾ ಉದ್ಯೋಗದಾತರ ಕೊಡುಗೆಯನ್ನು ಶೇ.4.75ರ ದರದಲ್ಲಿ ಪಾವತಿಸುತ್ತಿತ್ತು. ಆಡಳಿತಾತ್ಮಕ ವೆಚ್ಚ, ಶುಲ್ಕಗಳಲ್ಲಿನ ಇಳಿಕೆಯಿಂದಾಗಿ ಉದ್ಯೋಗಿಗಳ ಭವಿಷ್ಯ ನಿಧಿಗೆ ಉದ್ಯೋಗದಾತರ ಕೊಡುಗೆ ದರವು 2018ರ ಜೂನ್ 1ರಿಂದ ಇಳಿಮುಖವಾಯಿತು ಎಂಬುದು ಸಿಎಜಿ ವರದಿಯಿಂದ ತಿಳಿದು ಬಂದಿದೆ.

 ಅದೇ ರೀತಿಯಲ್ಲಿ ಉದ್ಯೋಗಿಗಳ ರಾಜ್ಯ ವಿಮೆಗೆ ಉದ್ಯೋಗದಾತರ ಕೊಡುಗೆಯ ದರವನ್ನು 2019ರ ಜುಲೈ 1ರಿಂದ ಜಾರಿಗೆ ಬಂದಂತೆ ಶೇ.4.75ರಿಂದ ಶೇ.3.25ಕ್ಕೆ ತಗ್ಗಿಸಲಾಗಿತ್ತು. ಹೀಗೆ ದರಗಳ ತಗ್ಗುವಿಕೆಯನ್ನು ಪರಿಗಣಿಸದೆಯೇ ಕೊಡುಗೆಗಳನ್ನು ಪರಿಷ್ಕರಣೆ ಪೂರ್ವ ದರಗಳಲ್ಲಿಯೆ ಪಾವತಿಸಲಾಗಿತ್ತು. ಇದರಿಂದಾಗಿ ಹೊರಗುತ್ತಿಗೆ ಸಂಸ್ಥೆಗೆ 1.82 ಕೋಟಿ ರೂ. ಮೊತ್ತವನ್ನು (ಉದ್ಯೋಗಿಗಳ ಭವಿಷ್ಯ ನಿಧಿ ಕಡೆಗೆ 0.25 ಕೋಟಿ ರೂ. ಮೊತ್ತ ಹಾಗೂ ಉದ್ಯೋಗಿಗಳ ರಾಜ್ಯವಿಮೆ ಕಡೆಗೆ 1.57 ಕೋಟಿ) ಅಧಿಕ ಪ್ರಮಾಣದಲ್ಲಿ ಪಾವತಿಸಲು ದಾರಿಮಾಡಿಕೊಟ್ಟಿತ್ತು ಎಂಬುದನ್ನು ವರದಿಯಲ್ಲಿ ವಿವರಿಸಲಾಗಿದೆ.

ಸಿಎಜಿ ವರದಿಯಲ್ಲಿ ಶಿಫಾರಸು

‘ಹೊರಗುತ್ತಿಗೆ ಸಂಸ್ಥೆಗೆ ಪಾವತಿಸಲಾಗಿರುವ ಶಾಸನಬದ್ಧ ಕೊಡುಗೆಗಳನ್ನು ಉದ್ಯೋಗಿಗಳ ಭವಿಷ್ಯ ನಿಧಿ, ಉದ್ಯೋಗಿಗಳ ರಾಜ್ಯ ವಿಮೆ ದಾಖಲೆಗಳ ಜೊತೆಯಲ್ಲಿ ಸಮನ್ವಯಗೊಳಿಸಬೇಕು. ತಪ್ಪಾಗಿ ಮಾಡಲಾದ ಲೆಕ್ಕಾಚಾರಗಳ ಕಾರಣ ಹೊರಗುತ್ತಿಗೆ ಸಂಸ್ಥೆಗೆ ಅಧಿಕ ಪ್ರಮಾಣದಲ್ಲಿ ಮಾಡಲಾಗಿರುವ ಪಾವತಿಗಳನ್ನು ವಸೂಲು ಮಾಡಬೇಕು. ಲೆಕ್ಕಪರಿಶೋಧನೆಯಲ್ಲಿ ಸ್ಪಷ್ಟಪಡಿಸಿರುವ ಲೋಪದೋಷಗಳಿಗೆ ಕಾರಣವಾಗಿರುವ ಅಧಿಕಾರಿಗಳು, ಸಿಬ್ಬಂದಿ ಮೇಲೆ ಹೊಣೆಗಾರಿಕೆ, ಜವಾಬ್ದಾರಿ ನಿಗದಿಗೊಳಿಸಬೇಕು’ ಎಂದು ಸಿಎಜಿ ವರದಿಯು ಶಿಫಾರಸು ಮಾಡಿದೆ.

ವರದಿಯಲ್ಲಿ ಉಲ್ಲೇಖ

‘ಗುತ್ತಿಗೆ ಷರತ್ತುಗಳಿಗೆ ಬದ್ಧತೆಯಿಂದ ಕೂಡಿರುವಲ್ಲಿನ ಹಾಗೂ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ರಾಜ್ಯ ವಿಮೆಯ ಶಾಸನಬದ್ಧ ಕೊಡುಗೆಗಳ ಪಾವತಿಗಳನ್ನು ಮೇಲ್ವಿಚಾರಣೆ ಮಾಡುವಲ್ಲಿ ಬೆಂಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿಯ ವಿಫಲತೆಯು 32.11 ಕೋಟಿ ರೂ. ಮೊತ್ತದಷ್ಟು ಕೊಡುಗೆಗಳನ್ನು ಕಡಿಮೆ ಪ್ರಮಾಣದಲ್ಲಿ ಮಾಡುವಲ್ಲಿ ದಾರಿಮಾಡಿಕೊಟ್ಟಿತ್ತು’ ಎಂದು ವರದಿಯಲ್ಲಿ ವಿವರಿಸಲಾಗಿದೆ.

share
ಜಿ. ಮಹಾಂತೇಶ್
ಜಿ. ಮಹಾಂತೇಶ್
Next Story
X