Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಸಕ ಮಾಡಾಳ್ ವಿರೂಪಾಕ್ಷಪ್ಪ...

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಚನ್ನಗಿರಿಯಲ್ಲೇ ಇದ್ದರೂ ಪೊಲೀಸರು ಬಂಧಿಸಿರಲಿಲ್ಲ ಏಕೆ?: ಕಾಂಗ್ರೆಸ್

''ಶಾಸಕರ ಮೆರವಣಿಗೆ ರಾಜ್ಯದ ಜನತೆಗೆ ಮಾಡುವ ಅಪಮಾನ''

7 March 2023 8:01 PM IST
share
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಚನ್ನಗಿರಿಯಲ್ಲೇ ಇದ್ದರೂ ಪೊಲೀಸರು ಬಂಧಿಸಿರಲಿಲ್ಲ ಏಕೆ?: ಕಾಂಗ್ರೆಸ್
''ಶಾಸಕರ ಮೆರವಣಿಗೆ ರಾಜ್ಯದ ಜನತೆಗೆ ಮಾಡುವ ಅಪಮಾನ''

ಬೆಂಗಳೂರು, ಮಾ. 7: ‘ಲೋಕಾಯುಕ್ತ ಪೊಲೀಸರ ಕೈಗೆ ಸಿಗದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಸಿಕ್ಕ ಕೆಲವೇ ಗಂಟೆಗಳಲ್ಲಿ ಪ್ರತ್ಯಕ್ಷರಾಗುತ್ತಾರೆ. ಮೆರವಣಿಗೆ ಮಾಡಿ ಪೊಲೀಸರಿಗೆ ಸೆಡ್ಡು ಹೊಡೆಯುತ್ತಾರೆ. ಬಿಜೆಪಿಗರು ಬಾವುಟ ಹಿಡಿದು ಸಂಭ್ರಮಿಸುತ್ತಾರೆ. ಇದು ರಾಜ್ಯದ ಜನತೆಗೆ ಮಾಡುವ ಅಪಮಾನ. ಬಿಜೆಪಿಯು ಕಾನೂನಿನ ಅಣಕವಾಡುತ್ತಿದೆ’ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಮಾಡಾಳ್ ವೀರೂಪಾಕ್ಷಪ್ಪ ಜಾಮೀನು ನೀಡಿಕೆಯ ವಿರುದ್ಧ ಸರಕಾರ ಸಮರ್ಥವಾಗಿ ವಾದ ಮಂಡಿಸಲೇ ಇಲ್ಲ. ಲೋಕಾಯುಕ್ತ ಪರ ವಕೀಲರು ಕೋರ್ಟಿಗೆ ಹಾಜರಾಗಿರಲೇ ಇಲ್ಲ. ಧಿಡೀರ್ ತನಿಖಾಧಿಕಾರಿಗಳನ್ನು ಬದಲಿಸಲಾಗುತ್ತದೆ. ಮಾಡಾಳ್ ಚನ್ನಾಗಿರಿಯಲ್ಲೇ ಇದ್ದರೂ ಪೊಲೀಸರು ಬಂಧಿಸಿರಲಿಲ್ಲ. ಬಸವರಾಜ ಬೊಮ್ಮಾಯಿ ಅವರೇ, ತುಂಬಾ ಚೆನ್ನಾಗಿದೆ ನಿಮ್ಮ ಸದಾರಮೆ ನಾಟಕ!’ ಎಂದು ಲೇವಡಿ ಮಾಡಿದೆ.

‘ಮಾಡಾಳ್ ವೀರೂಪಾಕ್ಷಪ್ಪನವರ ಹಗರಣದ ತನಿಖೆ ನಡೆಸುತ್ತಿದ್ದ ತನಿಖಾಧಿಕಾರಿಗಳನ್ನು ಏಕಾಏಕಿ ಬದಲಿಸಲಾಗಿದೆ. ಒಂದು ವಾರವಾದರೂ ಆರೋಪಿ ಶಾಸಕರನ್ನು ಬಂಧಿಸಿರಲಿಲ್ಲ. ನಿರೀಕ್ಷಣಾ ಜಾಮೀನು ದೊರಕುತ್ತಿದ್ದಂತೆಯೇ ಮಾಡಾಳ್ ಪ್ರತ್ಯಕ್ಷರಾಗುತ್ತಾರೆ. ಆದರೂ ಬಸವರಾಜ ಬೊಮ್ಮಾಯಿ ಅವರು ಭ್ರಷ್ಟರ ರಕ್ಷಣೆ ಮಾಡುತ್ತಿಲ್ಲ ಎಂಬುದನ್ನು ರಾಜ್ಯದ ಜನತೆ ನಂಬಬೇಕು’ ಎಂದು ಕಾಂಗ್ರೆಸ್ ಟೀಕಿಸಿದೆ.

‘ನಾನು ಎಲ್ಲೂ ತಲೆಮರೆಸಿಕೊಂಡಿರಲಿಲ್ಲ ಚನ್ನಗಿರಿಯಲ್ಲೇ ಇದ್ದೆ’-ಮಾಡಾಳ್ ವಿರೂಪಾಕ್ಷಪ್ಪ. ಚನ್ನಗಿರಿಯಲ್ಲೇ ಇದ್ದರೂ ಪೊಲೀಸರು ಬಂಧಿಸಿರಲಿಲ್ಲ ಏಕೆ?, ಬಂಧಿಸದಂತೆ ನೋಡಿಕೊಂಡವರು ಯಾರು?, ಇಂಟಲಿಜೆನ್ಸ್ ಹಾಗೂ ಪೊಲೀಸರು ಇಷ್ಟೊಂದು ಅಸಮರ್ಥರೇ? ಬಸವರಾಜ ಬೊಮ್ಮಾಯಿ ಅವರು ರಾಜ್ಯಕ್ಕೆ ಉತ್ತರಿಸಲೇಬೇಕು?’ ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಉಚ್ಛಾಟನೆ: ಬಿಜೆಪಿಯಲ್ಲಿ ಭ್ರಷ್ಟರನ್ನು ಉಚ್ಛಾಟಿಸುವುದಾದರೆ ಶೇ.90ರಷ್ಟು ನಾಯಕರು ಖಾಲಿಯಾಗುತ್ತಾರೆ. ಬರಿ ವಿರೂಪಾಕ್ಷಪ್ಪರನ್ನೇ ಏಕೆ, ಕೋವಿಡ್ ಹಗರಣದ ಡಾ.ಕೆ.ಸುಧಾಕರ್, ಪಿಎಸ್ಸೈ ಹಗರಣದ ಡಾ.ಅಶ್ವತ್ಥ ನಾರಾಯಣ, ಶೇ.40 ಕಮಿಷನ್ ಹಗರಣದ ಈಶ್ವರಪ್ಪ, ಮುನಿರತ್ನ, ಟೂಲ್‍ಕಿಟ್ ಹಗರಣದ ಶಿವರಾಂ ಹೆಬ್ಬಾರ್, ಕಾಕಂಬಿ ಹಗರಣದ ಬಸವರಾಜ ಬೊಮ್ಮಾಯಿ ಸೇರಿ ಎಲ್ಲರನ್ನೂ ಉಚ್ಚಾಟಿಸಬೇಕಾಲ್ಲವೇ?’ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

‘ಕಾಂಗ್ರೆಸ್ ಘೋಷಿಸಿದ 200ಯೂನಿಟ್ ಉಚಿತ ವಿದ್ಯುತ್ ಕೊಡಲು ಸಾಧ್ಯವೇ ಇಲ್ಲ ಎನ್ನುತ್ತಿದೆ ಬಿಜೆಪಿ. ವಿದ್ಯುತ್ ಸೋರಿಕೆ ತಡೆಗಟ್ಟಿದರೆ, ಇಂಧನ ಇಲಾಖೆಯಲ್ಲಿನ ಶೇ.40ರಷ್ಟು ಭ್ರಷ್ಟಾಚಾರ ತಡೆಗಟ್ಟಿದರೆ, ದೊಡ್ಡ ಕುಳಗಳ ಸಾವಿರಾರು ಕೋಟಿ ರೂ.ಬಿಲ್ ಬಾಕಿ ವಸೂಲಿ ಮಾಡಿದರೆ ಅಸಾಧ್ಯ ಯಾವುದೂ ಇಲ್ಲ. ರೈತರಿಗೆ ಉಚಿತ ವಿದ್ಯುತ್ ನೀಡಿದ ಇತಿಹಾಸವಿದೆ ನಮಗೆ’ 

-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ

"ನಾನು ಎಲ್ಲೂ ತಲೆಮರೆಸಿಕೊಂಡಿರಲಿಲ್ಲ ಚನ್ನಗಿರಿಯಲ್ಲೇ ಇದ್ದೆ"
- ಮಾಡಾಳ್ ವೀರೂಪಾಕ್ಷಪ್ಪ

ಚನ್ನಗಿರಿಯಲ್ಲೇ ಇದ್ದರೂ ಪೊಲೀಸರು ಬಂಧಿಸಿರಲಿಲ್ಲ ಏಕೆ?

ಬಂಧಿಸದಂತೆ ನೋಡಿಕೊಂಡವರು ಯಾರು?

ಇಂಟಲಿಜೆನ್ಸ್ ಹಾಗೂ ಪೊಲೀಸರು ಇಷ್ಟೊಂದು ಅಸಮರ್ಥರೇ?@BSBommai ಅವರು ರಾಜ್ಯಕ್ಕೆ ಉತ್ತರಿಸಲೇಬೇಕು?#40PercentSarkara

— Karnataka Congress (@INCKarnataka) March 7, 2023
share
Next Story
X