Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಳ್ಳೇಗಾಲ | ಅಂತರ್ಜಾತಿ ವಿವಾಹ...

ಕೊಳ್ಳೇಗಾಲ | ಅಂತರ್ಜಾತಿ ವಿವಾಹ ಆಗಿದ್ದಕ್ಕೆ ದಂಡ, ಗ್ರಾಮದಿಂದ ಬಹಿಷ್ಕಾರ: ಕುಟುಂಬಕ್ಕೆ ರಕ್ಷಣೆ ನೀಡಲು ಆಗ್ರಹ

7 March 2023 8:10 PM IST
share
ಕೊಳ್ಳೇಗಾಲ | ಅಂತರ್ಜಾತಿ ವಿವಾಹ ಆಗಿದ್ದಕ್ಕೆ ದಂಡ, ಗ್ರಾಮದಿಂದ ಬಹಿಷ್ಕಾರ: ಕುಟುಂಬಕ್ಕೆ ರಕ್ಷಣೆ ನೀಡಲು ಆಗ್ರಹ

ಬೆಂಗಳೂರು, ಮಾ.7: ಪರಿಶಿಷ್ಟ ಜಾತಿಯ ಯುವತಿಯನ್ನು ವಿವಾಹ ಮಾಡಿಕೊಂಡು ಊರಿಗೆ ಬಂದ ಉಪ್ಪಾರ ಸಮುದಾಯದ ಯುವಕನಿಗೆ ಕುಲಪಂಚಾಯಿತಿಯು ದಂಡ ವಿಧಿಸಿದ್ದು, ದಂಪತಿಗೆ ಹಾಗೂ ಅವರ ಕುಟುಂಬಕ್ಕೆ ಸರಕಾರ ರಕ್ಷಣೆ ನೀಡಬೇಕು ಎಂದು ಅಖಿಲ ಭಾರತ ಪ್ರಗತಿಪರರ ಮಹಿಳಾ ಸಂಘಟನೆ ಆಗ್ರಹಿಸಿದೆ. 

2018ರಲ್ಲಿ ಪರಿಶಿಷ್ಟ ಜಾತಿಯ ಹೆಣ್ಣು ಮಗಳನ್ನು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದ ಉಪ್ಪಾರ ಸಮುದಾಯದ ಗೋವಿಂದ ರಾಜು ಎಂಬುವವರು ವಿವಾಹವಾಗಿದ್ದರು. ಆಗ ಉಪ್ಪಾರ ಸಮುದಾಯದ ಕುಲಪಂಚಾಯತಿ ಗೋವಿಂದ ರಾಜು ಕುಟುಂಬಕ್ಕೆ 1.5ಲಕ್ಷ ರೂ.ಗಳ ದಂಡ ವಿಧಿಸಿ, ಕುಟುಂಬಕ್ಕೆ ಬಹಿಷ್ಕಾರ ಹಾಕಿತ್ತು. ಹಾಗಾಗಿ ದಂಪತಿಗಳು ಊರು ಬಿಟ್ಟು ಬೇರೆ ಕಡೆ ವಾಸವಾಗಿದ್ದರು. 

ಫೆ.13ರಂದು ತಮ್ಮ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಗೋವಿಂದ ರಾಜು ತನ್ನ ಪತ್ನಿಯೊಂದಿಗೆ ಕುಣಗಳ್ಳಿಗೆ ಬಂದಿದ್ದರು. ವಿಷಯವನ್ನು ತಿಳಿದ ಕುಲಪಂಚಾಯಿತಿ ಗೋವಿಂದ ರಾಜು ತಂದೆಯನ್ನು ಕರೆದು, ‘ನಿನ್ನ ಮಗ ಪರಿಶಿಷ್ಟ ಜಾತಿಯ ಯುವತಿಯನ್ನು ಊರಿನೊಳಗೆ ಕರೆದುಕೊಂಡು ಬಂದಿದ್ದಾನೆ. ಹಾಗಾಗಿ ನೀನು 5ಲಕ್ಷ ರೂ.ದಂಡವನ್ನು ಪಾವತಿ ಮಾಡಿ, ತಲೆಯನ್ನು ಬೋಳಿಸಿಕೊಳ್ಳಬೇಕು. ಇಲ್ಲವಾದಲ್ಲಿ ಊರಿನಿಂದ ಬಹಿಷ್ಕಾರ ಹಾಕಲಾಗುವುದು ಎಂದು ಬೆದರಿಕೆ ಹಾಕಿದ್ದಾರೆಂದು ವರದಿಯಾಗಿದೆ. 

ಈ ವಿಷಯವನ್ನು ತಿಳಿದ ದಂಪತಿಗಳು ಮಾಂಬಳ್ಳಿ ಪೋಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ. ಸಂವಿಧಾನವಿದ್ದರೂ, ಕುಲಪಂಚಾಯಿತಿಯ ಹೆಸರಿನಲ್ಲಿ ಜಾತಿ ವ್ಯವಸ್ಥೆಯನ್ನು ಜೀವಂತವಾಗಿದೆ. ಜಾತಿ ವ್ಯವಸ್ಥೆಯ ನಾಶಕ್ಕೆ ಅಂತರ್ಜಾತಿ ವಿವಾಹವು ಒಂದು ಮಾರ್ಗ ಎಂದು ಡಾ.ಅಂಬೇಡ್ಕರ್ ಸೇರಿದಂತೆ ಸಾಮಾಜಿಕ ಸುಧಾರಕರು ನಂಬಿದ್ದರು. ಆದರೆ ಬ್ರಾಹ್ಮಣ್ಯದ ಸುಳಿಯಲ್ಲಿ ಸಿಲುಕಿರುವ ಹಿಂದುಳಿದ ಜಾತಿಗಳು ತಮ್ಮ ಜಾತಿ ಕ್ರೂರತೆಯನ್ನು ಎತ್ತಿ ತೋರಿಸುದೆ. ನೊಂದ ದಂಪತಿಗಳಿಗೆ ಮತ್ತು ಅವರ ಕುಟುಂಬಗಳಿಗೆ ಸರಕಾರ ಸೂಕ್ತ ರೀತಿಯ ರಕ್ಷಣೆಯನ್ನು ಮತ್ತು ಉದ್ಯೋಗಾವಕಾಶವನ್ನು ಕಲ್ಪಿಸಬೇಕು ಎಂದು ಸಂಘಟನೆಯು ಸರಕಾರವನ್ನು ಒತ್ತಾಯಿಸಿದೆ. 

share
Next Story
X