Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫ್ರಾನ್ಸ್: ಪರಿಷ್ಕೃತ ಪಿಂಚಣಿ ಯೋಜನೆ...

ಫ್ರಾನ್ಸ್: ಪರಿಷ್ಕೃತ ಪಿಂಚಣಿ ಯೋಜನೆ ವಿರೋಧಿಸಿ ಬೃಹತ್ ಪ್ರತಿಭಟನೆ; ರೈಲು ಸಂಚಾರ ಸ್ಥಗಿತ

7 March 2023 10:33 PM IST
share
ಫ್ರಾನ್ಸ್: ಪರಿಷ್ಕೃತ ಪಿಂಚಣಿ ಯೋಜನೆ ವಿರೋಧಿಸಿ ಬೃಹತ್ ಪ್ರತಿಭಟನೆ; ರೈಲು ಸಂಚಾರ ಸ್ಥಗಿತ

ಪ್ಯಾರಿಸ್, ಮಾ.7: ಫ್ರಾನ್ಸ್ ನಲ್ಲಿ ಪರಿಷ್ಕೃತ ಪಿಂಚಣಿ ಯೋಜನೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಮಂಗಳವಾರ 6ನೇ ದಿನಕ್ಕೆ ಕಾಲಿರಿಸಿದ್ದು ವಿವಿಧೆಡೆ ರಸ್ತೆ ತಡೆ, ಜಾಥಾ ನಡೆಸಲಾಗಿದೆ. ರೈಲು ಸಂಚಾರ ಸ್ಥಗಿತಗೊಂಡಿರುವುದರಿಂದ ತೈಲ ಪೂರೈಕೆಗೆ ಅಡ್ಡಿಯಾಗಿದೆ. ದೇಶದಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ವರದಿಯಾಗಿದೆ.

ಮಾರ್ಚ್ ಅಂತ್ಯದೊಳಗೆ ಪರಿಷ್ಕೃತ ಪಿಂಚಣಿ ಯೋಜನೆಗೆ ಸಂಸತ್ತಿನ ಅನುಮೋದನೆ ಪಡೆಯಬಹುದು ಎಂದು ಸರಕಾರ ನಿರೀಕ್ಷಿಸುತ್ತಿದೆ. ಪೆನ್ಷನ್ ವಯಸ್ಸನ್ನು 2 ವರ್ಷ ಏರಿಕೆ ಮಾಡಿ 64ಕ್ಕೆ ನಿಗದಿಗೊಳಿಸುವ ಸರಕಾರದ ಪ್ರಸ್ತಾವವನ್ನು ಬೆಂಬಲಿಸದಂತೆ ಸಂಸದರ ಮೇಲೆ ಒತ್ತಡ ಹೇರಲು ನಿರಂತರ ಪ್ರತಿಭಟನೆ ನಡೆಯಲಿದೆ. ನಿರ್ಧಾರ ಹಿಂಪಡೆಯುವ ತನಕ ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ಕಾರ್ಮಿಕ ಯೂನಿಯನ್ ಮುಖ್ಯಸ್ಥ ಫ್ರೆಡೆರಿಕ್ ಸೊವಿಲಾಟ್‍ರನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ತ್ಯಾಜ್ಯ ಸಂಗ್ರಾಹಕರು ಹಾಗೂ ಟ್ರಕ್ ಚಾಲಕರೂ ಮುಷ್ಕರಕ್ಕೆ ಕೈಜೋಡಿಸಿದ್ದು ಇನ್ನಿತರ ಕ್ಷೇತ್ರಕ್ಕೂ ಪ್ರತಿಭಟನೆ ವಿಸ್ತರಿಸುವ ಸಾಧ್ಯತೆಯಿದೆ. ಹಲವೆಡೆ ಶಿಕ್ಷಕರೂ ಪ್ರತಿಭಟನೆ ಆರಂಭಿಸಿದ್ದರಿಂದ ಶಾಲೆಗೆ ರಜೆ ಘೋಷಣೆ ಅನಿವಾರ್ಯವಾಗಿದೆ. ಪ್ರತಿಭಟನೆಯಿಂದಾಗಿ ವಿದ್ಯುತ್ ಉತ್ಪಾದನೆ ಕುಂಠಿತವಾಗಿ, ತೈಲ ಪೂರೈಕೆ ಮತ್ತು ಸಂಸ್ಕರಣೆ ಕಾರ್ಯಕ್ಕೆ ಅಡ್ಡಿಯಾಗಿದೆ. ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿದ್ದರಿಂದ ಉತ್ತರ ಫ್ರಾನ್ಸ್ ನ ಅಮೀಯನ್ಸ್ ನಗರದಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದ್ದು ಜನರು ರಸ್ತೆ ಪಕ್ಕ ವಾಹನ ನಿಲ್ಲಿಸಿ ಕಾಲ್ನಡಿಗೆಯಲ್ಲೇ ಸಾಗಬೇಕಾಯಿತು. ಬಹುತೇಕ ಇಂಟರ್‍ಸಿಟಿ ರೈಲುಗಳ ಸಂಚಾರ ಸ್ಥಗಿತಗೊಂಡಿದ್ದು ಮೆಟ್ರೋ ಸೇವೆಗೂ ತಡೆಯಾಗಿದೆ. ಈ ಹಿಂದೆ ಜನವರಿ 31ರಂದು ನಡೆದಿದ್ದ ರಾಷ್ಟ್ರವ್ಯಾಪಿ ಪ್ರತಿಭಟನೆಯಲ್ಲಿ 1.27 ದಶಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು.

ಈ ಮಧ್ಯೆ, ಪಿಂಚಣಿ ಯೋಜನೆ ಪರಿಷ್ಕರಣೆ ಕುರಿತು ನಡೆಸಿದ ಜನಾಭಿಪ್ರಾಯ ಸಂಗ್ರಹಣೆಯಲ್ಲಿ ಪಾಲ್ಗೊಂಡಿದ್ದ ಹೆಚ್ಚಿನವರು ಪರಿಷ್ಕರಣೆಗೆ ವಿರೋಧ ಸೂಚಿಸಿದ್ದಾರೆ ಎಂದು ಸ್ಥಳೀಯ ಟಿವಿ ವಾಹಿನಿಗಳು ವರದಿ ಮಾಡಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ಫ್ರಾನ್ಸ್ ಪ್ರಧಾನಿ ಎಲಿಜಬೆತ್ ಬೋರ್ನ್ `ಹೆಚ್ಚಿನ ಜನತೆ ಪಿಂಚಣಿಗೆ ಅರ್ಹರಾಗಲು ಮತ್ತೆರಡು ವರ್ಷ ಕೆಲಸ ಮಾಡಲು ವಿರೋಧಿಸುತ್ತಿರುವುದನ್ನು ಗಮನಿಸಿದ್ದೇನೆ. ಆದರೆ ವ್ಯವಸ್ಥೆಯ ಕಾರ್ಯಸಾಧ್ಯತೆಯನ್ನು ಖಚಿತಪಡಿಸಿಕೊಳ್ಳಲು ಇದು ಅಗತ್ಯವಾಗಿದೆ' ಎಂದಿದ್ದಾರೆ.

ಸಂಸತ್ತಿನಲ್ಲಿ ಪಿಂಚಣಿ ಪರಿಷ್ಕರಣೆ ಮಸೂದೆಗೆ ಅನುಮೋದನೆ ಪಡೆಯುವಷ್ಟು ಬಹುಮತವನ್ನು ಇಮ್ಯಾನುವೆಲ್ ಮಾಕ್ರನ್ ಪಕ್ಷ ಹೊಂದಿಲ್ಲ. ಆದರೆ ಅವರಿಗೆ ಕನ್ಸರ್ವೇಟಿವ್ ಪಕ್ಷದ ಕೆಲ ಸಂಸದರ ಬೆಂಬಲವಿದೆ. ಮಾರ್ಚ್ ಅಂತ್ಯದೊಳಗೆ ಸಂಸತ್ತಿನ ಮೂಲಕ ಅನುಮೋದನೆ ಪಡೆಯಲು ಸಾಧ್ಯವಾಗದಿದ್ದರೆ, ವಿಶೇಷ ಸಾಂವಿಧಾನಿಕ ಅಧಿಕಾರ ಬಳಸಿ ಮಸೂದೆಗೆ ಅನುಮೋದನೆ ಗಳಿಸುವ ಅವಕಾಶವಿದೆ. 

share
Next Story
X