Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಕ್ರಮ ವಲಸಿಗರಿಗೆ ಬ್ರಿಟನ್ ಪ್ರಧಾನಿ...

ಅಕ್ರಮ ವಲಸಿಗರಿಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಗಂಭೀರ ಎಚ್ಚರಿಕೆ

8 March 2023 9:21 PM IST
share
ಅಕ್ರಮ ವಲಸಿಗರಿಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಗಂಭೀರ ಎಚ್ಚರಿಕೆ

ಹೊಸದಿಲ್ಲಿ,ಮಾ.8: ಅಕ್ರಮ ವಲಸಿಗರು ಬ್ರಿಟನ್ ಪ್ರವೇಶಿಸುವುದನ್ನು ತಡೆಯಲು ಬುಧವಾರ ವಿವಾದಾತ್ಮಕ ನೂತನ ಯೋಜನೆಯೊಂದನ್ನು ಪ್ರಕಟಿಸಿರುವ ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರು,ಅಕ್ರಮವಾಗಿ ಬ್ರಿಟನ್ ಪ್ರವೇಶಿಸುವವರಿಗೆ ರಾಜಕೀಯ ಆಶ್ರಯ ಕೋರಲು ಅವಕಾಶ ನೀಡುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

‘ನೀವಿಲ್ಲಿಗೆ ಅಕ್ರಮವಾಗಿ ಬಂದರೆ ನೀವು ರಾಜಕೀಯ ಆಶ್ರಯವನ್ನು ಕೋರುವಂತಿಲ್ಲ. ನಮ್ಮ ಆಧುನಿಕ ಗುಲಾಮಗಿರಿ ರಕ್ಷಣೆಗಳ ಪ್ರಯೋಜನವನ್ನು ಪಡೆದುಕೊಳ್ಳಲು ನಿಮಗೆ ಸಾಧ್ಯವಾಗುವುದಿಲ್ಲ. ನೀವು ನಕಲಿ ಮಾನವ ಹಕ್ಕುಗಳನ್ನು ಪ್ರತಿಪಾದಿಸಲು ಸಾಧ್ಯವಿಲ್ಲ ಮತ್ತು ನೀವು ಇಲ್ಲಿ ಉಳಿದುಕೊಳ್ಳುವುದೂ ಸಾಧ್ಯವಿಲ್ಲ ’ ಎಂದು ಸುನಕ್ ಟ್ವೀಟಿಸಿದ್ದಾರೆ.

‘ಇಲ್ಲಿಗೆ ಅಕ್ರಮವಾಗಿ ಬರುವವರನ್ನು ನಾವು ಬಂಧಿಸುತ್ತೇವೆ ಮತ್ತು ಕೆಲವೇ ವಾರಗಳಲ್ಲಿ ಅವರನ್ನು ಹೊರಕ್ಕೆ ಹಾಕುತ್ತೇವೆ. ನಿಮ್ಮ ಸ್ವಂತ ದೇಶ ನಿಮ್ಮ ಪಾಲಿಗೆ ಸುರಕ್ಷಿತವಾಗಿದ್ದರೆ ಅಲ್ಲಿಗೆ ಅಥವಾ ರುವಾಂಡಾದಂತಹ ಸುರಕ್ಷಿತ ಮೂರನೇ ದೇಶಕ್ಕೆ ನಿಮ್ಮನ್ನು ರವಾನಿಸುತ್ತೇವೆ. ಒಮ್ಮೆ ನಿಮ್ಮನ್ನು ಇಲ್ಲಿಂದ ಹೊರಹಾಕಿದ ಬಳಿಕ ಅಮೆರಿಕಾ ಮತ್ತು ಆಸ್ಟ್ರೇಲಿಯಾಗಳಲ್ಲಿ ಮಾಡುವಂತೆ ನೀವು ಈ ದೇಶವನ್ನು ಎಂದಿಗೂ ಮರುಪ್ರವೇಶಿಸದಂತೆ ನಿಷೇಧಿಸಲಾಗುವುದು ’ಎಂದೂ ಸುನಕ್ ಹೇಳಿದ್ದಾರೆ.

ಇದಕ್ಕಾಗಿ ಕರಡು ‘ಅಕ್ರಮ ವಲಸೆ ಮಸೂದೆ ’ಯನ್ನು ರೂಪಿಸಲಾಗಿದ್ದು,ಇದರಡಿ ಸಣ್ಣ ಬೋಟ್ಗಳಲ್ಲಿ ಇಂಗ್ಲಿಷ್ ಕಾಲುವೆಯನ್ನು ದಾಟುವ ಅಕ್ರಮ ವಲಸಿಗರನ್ನು ನಿರ್ಬಂಧಿಸಲಾಗುವುದು.

ಕರಡು ಕಾನೂನಿನ ಅಡಿ ಒಳಾಡಳಿತ ಸಚಿವೆ ಸುಯೆಲ್ಲಾ ಬ್ರೇವರ್ಮನ್ ಅವರಿಗೆ ಹೊಸ ಕಾನೂನು ಜವಾಬ್ದಾರಿಯನ್ನು ನೀಡಲಾಗುವುದು. ಇಂಗ್ಲಿಷ್ ಕಾಲುವೆಯಂತಹ ಮಾರ್ಗಗಳ ಮೂಲಕ ಪ್ರವೇಶಿಸುವ ಎಲ್ಲ ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ,ಬ್ರಿಟನ್ನಲ್ಲಿಯ ಮತ್ತು ಐರೋಪ್ಯ ಮಾನವ ಹಕ್ಕುಗಳ ಕಾನೂನಿನಡಿ ವಿವಿಧ ಹಕ್ಕುಗಳ ಲಾಭವನ್ನು ಪಡೆಯುವದರಿಂದ ಅವರನ್ನು ನಿರ್ಬಂಧಿಸುವ ಕೆಲಸವನ್ನು ಸುಯೆಲ್ಲಾ ಮಾಡಲಿದ್ದಾರೆ.

ಪ್ರಸ್ತುತ ಸನ್ನಿವೇಶದಲ್ಲಿ ಇದು ನೈತಿಕವೂ ಅಲ್ಲ,ಸುಸ್ಥಿರವೂ ಅಲ್ಲ. ಇದು ಮುಂದುವರಿಯಲು ಸಾಧ್ಯವಿಲ್ಲ ಎಂದು ಸುನಕ್ ಹೇಳಿದ್ದಾರೆ.

‘ನಮ್ಮ ನೆರವಿನ ತುಂಬ ಅಗತ್ಯವಿರುವವರಿಗೆ ಇದು ವಿನಾಶಕಾರಿ ಅನ್ಯಾಯ,ಏಕೆಂದರೆ ನಮ್ಮ ರಾಜಕೀಯ ವ್ಯವಸ್ಥೆಯು ಇಂಗ್ಲಿಷ್ ಕಾಲುವೆಯನ್ನು ದಾಟಿ ಅಕ್ರಮವಾಗಿ ಪ್ರವೇಶಿಸುವವರಿಂದ ತುಂಬಿರುವುದರಿಂದ ಅದನ್ನು ಪಡೆಯಲು ಅವರಿಗೆ ಸಾಧ್ಯವಾಗುವುದಿಲ್ಲ’ ಎಂದೂ ಸುನಕ್ ಹೇಳಿದ್ದಾರೆ.

ಕಳೆದ ವರ್ಷ ಸಣ್ಣ ಬೋಟ್ಗಳ ಮೂಲಕ 45,000ಕ್ಕೂ ಅಧಿಕ ವಲಸಿಗರು ಆಗ್ನೇಯ ಇಂಗ್ಲಂಡ್ನ ಕರಾವಳಿಗಳನ್ನು ತಲುಪಿದ್ದಾರೆ. 2018ರಿಂದ ಈ ಕಳ್ಳಮಾರ್ಗ ಹೆಚ್ಚು ಜನಪ್ರಿಯವಾಗುತ್ತಿದ್ದು, ಅಕ್ರಮ ವಲಸಿಗರ ಸಂಖ್ಯೆಯಲ್ಲಿ ವಾರ್ಷಿಕ ಶೇ.60ರಷ್ಟು ಏರಿಕೆಯಾಗಿದೆ.

ನೂತನ ಕಾನೂನನ್ನು ಟೀಕಿಸಿರುವ ಮಾನವ ಹಕ್ಕು ಗುಂಪುಗಳು ಮತ್ತು ವಿರೋಧ ಪಕ್ಷಗಳು,ಯೋಜನೆಯು ನಿಷ್ಪರಿಣಾಮಕಾರಿಯಾಗಲಿದೆ ಮತ್ತು ಅನ್ಯಾಯವಾಗಿ ಅಸಹಾಯಕ ನಿರಾಶ್ರಿತರನ್ನು ಹರಕೆಯ ಕುರಿಗಳನ್ನಾಗಿಸುತ್ತದೆ ಎಂದು ಹೇಳಿದ್ದಾರೆ.

ರಾಜಕೀಯ ಆಶ್ರಯ ಕೋರಿದ್ದ ಕೆಲವರಿಗೆ ರುವಾಂಡಾದಲ್ಲಿ ನೆಲೆಗೊಳಿಸಲು ಕಾರ್ಯಕ್ರಮವನ್ನು ಕಳೆದ ವರ್ಷ ಜಾರಿಗೊಳಿಸುವ ಮೂಲಕ ವಲಸಿಗರ ಗಡಿಪಾರು ಕ್ರಮವನ್ನು ಅನುಷ್ಠಾನಿಸಲು ಬ್ರಿಟನ್ ಈಗಾಗಲೇ ಪ್ರಯತ್ನಿಸಿತ್ತು. ಆದರೆ ಕಳೆದ ವರ್ಷದ ಜೂನ್ನಲ್ಲಿ ಐರೋಪ್ಯ ಮಾನವ ಹಕ್ಕುಗಳ ನ್ಯಾಯಾಲಯದ ತಡೆಯಾಜ್ಞೆಯಿಂದಾಗಿ ಯೋಜನೆಯು ನನೆಗುದಿಗೆ ಬಿದ್ದ ಬಳಿಕ ಬ್ರಿಟನ್ನಿಂದ ರುವಾಂಡಾಕ್ಕೆ ಯಾವುದೇ ವಿಮಾನ ಹಾರಾಟ ನಡೆಸಿಲ್ಲ.

share
Next Story
X