Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲಂಕೇಶರ ಕತೆಗಳು ಸಮಾಜದಲ್ಲಿನ...

ಲಂಕೇಶರ ಕತೆಗಳು ಸಮಾಜದಲ್ಲಿನ ಅಸಮಾನತೆಯನ್ನು ಹೇಳುತ್ತವೆ: ರಾಜೇಂದ್ರ ಚೆನ್ನಿ

8 March 2023 9:30 PM IST
share
ಲಂಕೇಶರ ಕತೆಗಳು ಸಮಾಜದಲ್ಲಿನ ಅಸಮಾನತೆಯನ್ನು ಹೇಳುತ್ತವೆ: ರಾಜೇಂದ್ರ ಚೆನ್ನಿ

ಬೆಂಗಳೂರು, ಮಾ.8: ಲಂಕೇಶರ ಕತೆಗಳು ಸಮಾಜದಲ್ಲಿನ ಅಸಮಾನತೆಯನ್ನು ತೋರುತ್ತದೆ. ಲಂಕೇಶರನ್ನು ಕನ್ನಡ ಕಂಡಂತಹ ಒಬ್ಬ ಗ್ರೀನ್ ಫಿನಾಮಿನನ್ ಎನ್ನಬಹುದು. ಅವರ ಕತೆಗಳ ಓದಿನ ಮೂಲಕ ಸಮಾಜದಲ್ಲಿ ನಾವು ಎಂತಹ ಮನುಷ್ಯನನ್ನು ಸೃಷ್ಟಿಸಬೇಕೆಂಬುದನ್ನು ತಿಳಿಯಬೇಕು ಎಂದು ವಿಮರ್ಶಕ ರಾಜೇಂದ್ರ ಚೆನ್ನಿ ಅಭಿಪ್ರಾಯಪಟ್ಟರು.

ಬುಧವಾರ ನಗರದ ಚಾಮರಾಜಪೇಟೆಯಲ್ಲಿರುವ ಕಸಾಪದಲ್ಲಿ ನಡೆದ ಪಿ.ಲಂಕೇಶ್ ಸಮಗ್ರ ಕತೆಗಳು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲಂಕೇಶರ ಕತೆಗಳಲ್ಲಿ ಕೌರ್ಯ, ಹಿಂಸೆ ಅನ್ನುವುದು ಕೇವಲ ಮನುಷ್ಯ ಸ್ವಭಾವವಾಗಿ ಕಾಣುವುದಿಲ್ಲ. ಅಲ್ಲಿನ ಕೌರ್ಯದ ಸಾಧ್ಯತೆಗಳಿಗೆ ಅವಕಾಶ ಸಿಗುತ್ತಿರುವುದು ಸಮಾಜದಲ್ಲಿನ ಅಸಮಾನತೆ, ಗಂಡಾಳ್ವಿಕೆ ಹಾಗೂ  ಅಧಿಕಾರಶಾಹಿ ನಡವಳಿಕೆಗಳಿಂದ ಎಂದರು.

ಸಾಮಾಜಿಕ ಹೋರಾಟಗಾರ್ತಿ ಹಾಗೂ ಲೇಖಕಿ ಬಾನು ಮುಷ್ತಾಕ್ ಮಾತನಾಡಿ, ಲಂಕೇಶರು ಬದುಕಿದ್ದಂತಹ ಸಂದರ್ಭದಲ್ಲಿ ಅವರ ಕೃತಿಗಳ ವಿಮರ್ಶೆ ಆಗಿದ್ದಿದ್ದರೆ ಬಹುಶಃ ಅವರು ನಕ್ಕು ಖುದ್ದಾಗಿ ಎಲ್ಲವನ್ನೂ ಲೇವಡಿ ಮಾಡಿಬಿಡುತ್ತಿದ್ದರು ಎಂದ ಅವರು, ಲಂಕೇಶರು ಮತ್ತು ನನ್ನ ಒಡನಾಟ ಚರ್ಚೆ, ತಕರಾರು, ವಿಮರ್ಶೆಗಳಿಂದ ಕೂಡಿದ ಅವಿನಾಭಾವ ಸಂಬಂಧವಾಗಿತ್ತು ಎಂದರು.

ನನ್ನ ಬದುಕಿನಲ್ಲಿ ನಡೆದ ಕೆಲವು ಘಟನೆಗಳಿಂದ ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಾಗ ಲಂಕೇಶ್ ಪತ್ರಿಕೆಯನ್ನು ಓದಲು ತೊಡಗಿದೆ. ಪತ್ರಿಕೆ ಬದುಕಿನಲ್ಲಿ ಹೆಚ್ಚು ಪರಿಣಾಮ ಬೀರಿತ್ತು. ನಾನು ಸಹ ಪತ್ರಿಕೆಗೆ ಲೇಖನಗಳನ್ನು ಬರೆಯಲು ಪ್ರಾರಂಭಿಸಿದೆ. ನನ್ನ ಬಹುತೇಕ ಲೇಖನಗಳು ಸಮಾಜದಲ್ಲಿ ವಿವಾದವನ್ನು ಸೃಷ್ಟಿಸಿದ್ದವು. ಇದರಿಂದ ಕೊಲೆ ಬೆದೆರಿಕೆಯೂ ಬಂದಿತ್ತು. ಆದರೆ ಲಂಕೇಶರು ನನಗೆ ಧೈರ್ಯ ಮತ್ತು ಶಕ್ತಿಯಾಗಿ ನಿಂತು ಬರವಣಿಗೆಗೆ ಮುಕ್ತ ಆಹ್ವಾನ ನೀಡಿದ್ದರು ಎಂದು ನೆನಪುಗಳನ್ನು ಮೆಲುಕು ಹಾಕಿದರು.

ಲೇಖಕಿ ಎಂ.ಎಸ್.ಆಶಾದೇವಿ ಮಾತನಾಡಿ, ನಮಗೆ ನವ್ಯ ಕಾಲಘಟ್ಟದಲ್ಲಿ ಅತ್ಯಂತ ಹೆಚ್ಚಿನ ಮಹಿಳಾ ಪರವಾದ ನಿಲುವು, ಅದಮ್ಯ ಸ್ತ್ರೀವಾದಿಯಾಗಿ ಲಂಕೇಶರು ಕಾಣಿಸಿಕೊಳ್ಳುತ್ತಾರೆ. ಅವರು ನವ್ಯಯುಗದ ಪ್ರಭಾವಿ ಸಾಹಿತಿಯಾಗಿಯೂ ಮೇರುಸ್ಥಾನದಲ್ಲಿ ನಿಲ್ಲುತ್ತಾರೆ. ಅವರ ಕೃತಿಗಳಲ್ಲಿ ಸ್ತ್ರೀ ದ್ವನಿ ಮಾರ್ಧನಿಸುತ್ತದೆ ಎಂದರು. ಕಾರ್ಯಕ್ರಮದಲ್ಲಿ ಲಂಕೇಶರ ಪತ್ನಿ ಇಂದಿರಾ ಲಂಕೇಶ್, ನಿರ್ದೇಶಕಿ ಕವಿತಾ ಲಂಕೇಶ್ ಸೇರಿದಂತೆ ಹಲವರು ಇದ್ದರು.

share
Next Story
X