Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾಬಾಬುಡಾನ್‌ಗಿರಿ: ಮುಸ್ಲಿಮ್ ಸಂಘಟನೆಗಳ...

ಬಾಬಾಬುಡಾನ್‌ಗಿರಿ: ಮುಸ್ಲಿಮ್ ಸಂಘಟನೆಗಳ ವಿರೋಧದ ನಡುವೆ ವ್ಯವಸ್ಥಾಪನಾ ಸಮಿತಿ ನೇತೃತ್ವದಲ್ಲಿ ನಡೆದ ಉರೂಸ್

9 March 2023 11:35 AM IST
share
ಬಾಬಾಬುಡಾನ್‌ಗಿರಿ: ಮುಸ್ಲಿಮ್ ಸಂಘಟನೆಗಳ ವಿರೋಧದ ನಡುವೆ ವ್ಯವಸ್ಥಾಪನಾ ಸಮಿತಿ ನೇತೃತ್ವದಲ್ಲಿ ನಡೆದ ಉರೂಸ್

ಚಿಕ್ಕಮಗಳೂರು,ಮಾ.8: ಗುರು ಇನಾಂ ದತ್ತಾತ್ರೇಯ ಬಾಬಾಬುಡಾನ್‌ಗಿರಿ ದರ್ಗಾದ ಆವರಣದಲ್ಲಿ ಗುರುವಾರ ವ್ಯವಸ್ಥಾಪನಾ ಸಮಿತಿ ನೇತೃತ್ವದಲ್ಲಿ ಸಂದಲ್ ಉರೂಸ್‌ ನಡೆದಿದ್ದು, ಸಮಿತಿ ನೇತೃತ್ವದಲ್ಲಿ ಉರೂಸ್ ಆಚರಣೆ ವಿರೋಧಿಸಿ ಜಿಲ್ಲಾ ಹಝರತ್ ದಾದಾ ಹಯಾತ್ ಮೀರ್ ಖಲಂದರ್‌ ಕಮಿಟಿ ಹಾಗೂ ಮುಸ್ಲಿಮ್ ಸಮುದಾಯದ ಮುಖಂಡರು ದರ್ಗಾದ ಆವರಣದಲ್ಲಿ ಧರಣಿ ನಡೆಸಿದರು.

ಗುರು ಇನಾಂ ದತ್ತಾತ್ರೇಯ ಬಾಬಾಬುಡಾನ್ ಗಿರಿ ದರ್ಗಾದ ಆವರಣದಲ್ಲಿ ಪ್ರತೀ ವರ್ಷ ಸಂದಲ್ ಉರೂಸ್ ಆಚರಣಾ ಸಮಿತಿಯು ಶಾಖಾದ್ರಿ ಹಾಗೂ ಸಜ್ಜಾದ್ ಎ ನಿಶಾನ್ ಅವರ ನೇತೃತ್ವದಲ್ಲಿ ಮೂರು ದಿನಗಳ ಕಾಲ ಉರೂಸ್ ಆಚರಣೆ ಮಾಡುತ್ತಿದ್ದು, ಈ ಬಾರಿ ರಾಜ್ಯ ಸರಕಾರ ವ್ಯವಸ್ಥಾಪನಾ ಸಮಿತಿ ನೇತೃತ್ವದಲ್ಲಿ ಉರೂಸ್ ಆಚರಣೆಗೆ ಅವಕಾಶ ಕಲ್ಪಿಸಿದೆ. ಆದರೆ, ವ್ಯವಸ್ಥಾಪನಾ ಸಮಿತಿ ಸದಸ್ಯರ ನೇಮಕಾತಿಯೇ ಕಾನೂನು ಬಾಹಿರವಾಗಿದೆ ಎಂದು ಆರೋಪಿಸಿ ಮುಸ್ಲಿಮ್ ಮುಖಂಡರು ಹಾಗೂ ಕೆಲ ಸಂಘಟನೆಗಳು ವ್ಯವಸ್ಥಾಪನಾ ಸಮಿತಿ ರದ್ದತಿ ಕೋರಿ ನ್ಯಾಯಾಲಯದಲ್ಲಿ ಕಾನೂನೂ ಹೋರಾಟ ಮುಂದುವರಿಸಿದ್ದವು.

ಈ ಮಧ್ಯೆ ಉರೂಸ್ ಆಚರಣೆ ಸಂಬಂಧ ಜಿಲ್ಲಾಧಿಕಾರಿ ಕರೆದಿದ್ದ ಉರೂಸ್ ಆಚರಣೆ ಸಮಿತಿ ಸದಸ್ಯರು ಗೈರಾಗಿದ್ದು, ವ್ಯವಸ್ಥಾಪನಾ ಸಮಿತಿ ನೇತೃತ್ವದಲ್ಲಿ ಉರೂಸ್ ಆಚರಣೆಗೆ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ವ್ಯವಸ್ಥಾಪನಾ ಸಮಿತಿ ನೇತೃತ್ವದಲ್ಲಿ ನಡೆಯುವ ಉರೂಸ್ ಕಾರ್ಯಕ್ರಮದಲ್ಲಿ ಭಾಗವವಹಿಸುವುದಿಲ್ಲ ಎಂದು ಹೇಳಿಕೆಯನ್ನೂ ನೀಡಿದ್ದರು. 

ಗುರುವಾರ ಗುರು ಇನಾಂ ದತ್ತಾತ್ರೇಯ ಬಾಬಾಬುಡಾನ್‌ ಗಿರಿ ದರ್ಗಾದ ಆವರಣದಲ್ಲಿ ವ್ಯವಸ್ಥಾ ಪನಾ ಸಮಿತಿ ನೇತೃತ್ವದಲ್ಲೇ ಉರೂಸ್‌ ನಡೆದಿದ್ದು, ಈ ಉರೂಸ್ ಕಾರ್ಯಕ್ರಮದಲ್ಲಿ ಉರೂಸ್ ಆಚರಣೆ ಸಮಿತಿ ಭಾಗವಹಿಸಲಿಲ್ಲ, ಉರೂಸ್ ಅಂಗವಾಗಿ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ಮುಸ್ಲಿಮ್ ಭಕ್ತರು ವ್ಯವಸ್ಥಾಪನಾ ಸಮಿತಿಯ ಉರೂಸ್ ಬಹಿಷ್ಕರಿಸಿ ಹಿಂದಿರುಗುತ್ತಿದ್ದರು. 

ವ್ಯವಸ್ಥಾಪನಾ ಸಮಿತಿಯ 8 ಸದಸ್ಯರ ಪೈಕಿ ಓರ್ವ ಮುಸ್ಲಿಮ್ ವ್ಯಕ್ತಿ ಇದ್ದು, ಈ ವ್ಯಕ್ತಿ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವವರೇ ಆಗಿದ್ದಾರೆ. ಸಮಿತಿಯಲ್ಲಿ ಎರಡೂ ಧರ್ಮದವರಿಗೆ ಸಮಾನ ಪ್ರಾತಿನಿಧ್ಯ ನೀಡದಿರುವುದರಿಂದ ಸಮಿತಿ ಸದಸ್ಯರು ದರ್ಗಾದಲ್ಲಿನ ಪೂಜೆ ಹಾಗೂ ಧಾರ್ಮಿಕ ಆಚರಣೆಗಳ ವಿಚಾರದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಮುಖಂಡರು ಆರೋಪಿಸಿದರು. 

ವ್ಯವಸ್ಥಾಪನಾ ಸಮಿತಿ ನೇತೃತ್ವದಲ್ಲಿ ಉರೂಸ್ ಆಚರಣೆಯನ್ನು ಒಪ್ಪಲು ಸಾಧ್ಯವೇ ಇಲ್ಲ. ವ್ಯವಸ್ಥಾಪನಾ ಸಮಿತಿಯನ್ನು ಕಾನೂನು ಬಾಹಿರವಾಗಿ ರಚಿಸಿದ್ದು, ಅದನ್ನು ಕೂಡಲೇ ರದ್ದು ಪಡಿಸಬೇಕು. ಈ ಸಮಿತಿ ಹಿಂದಿನ ಉರೂಸ್ ಆಚರಣೆಯನ್ನು ವಿಧಿ ವಿಧಾನ ಗಳನ್ನು ಪಾಲಿಸಿಲ್ಲ. ಗೋರಿಗಳಿಗೆ ಹಸಿರು ಬಟ್ಟೆ ಹಾಕುತ್ತಿಲ್ಲ. ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡುತ್ತಿಲ್ಲ. ಸಮಿತಿ ಸದಸ್ಯರು ಉರೂಸ್‌ಅನ್ನು ಕಾನೂನು ಬಾಹಿರವಾಗಿ ಉರೂಸ್ ಆಚರಣೆ ಮಾಡುತ್ತಿದ್ದಾರೆ. ಗೋರಿಗಳಿಗೆ ಸಂದಲ್ ಹಾಕಲು ಅವಕಾಶ ನೀಡುತ್ತಿಲ್ಲ. 1975ರಲ್ಲಿ ಯಥಾಸ್ಥಿತಿ ಆದೇಶವನ್ನು ಪಾಲಿಸುತ್ತಿಲ್ಲ. ಕೆಲ ಕೋಮುವಾದಿಗಳು ಬಾಬಾಬುಡಾನ್‌ಗಿರಿ ವಿವಾದ ಮುಂದಿಟ್ಟುಕೊಂಡು ಹಿಂದೂ-ಮುಸ್ಲಿಮರ ನಡುವಿನ ಸೌಹಾರ್ದ ವಾತಾವರಣವನ್ನು ಹಾಳು ಮಾಡುತ್ತಿದ್ದಾರೆ. ಮುಸ್ಲಿಮ್ ಭಕ್ತರಿಗೆ ಆಹಾರ ತಯಾರಿಸಿಕೊಳ್ಳಲು ಬಿಡುತ್ತಿಲ್ಲ. ಸರಕಾರ, ಜಿಲ್ಲಾಡಳಿತ, ವ್ಯವಸ್ಥಾಪನಾ ಸಮಿತಿಯ ಕಾನೂನು ಬಾಹಿರ ಉರೂಸ್ ಆಚರಣೆ ಧಿಕ್ಕರಿಸಿ ಪ್ರತಿಭಟನೆ ನಡೆಸಿದ್ದೇವೆ. ಗುರುವಾರ ಶಾಖಾದ್ರಿ ನೇತೃತ್ವದಲ್ಲಿ ಪ್ರತ್ಯೇಕವಾಗಿ ಉರೂಸ್ ಮಾಡಲಿದ್ದು, ಇದಕ್ಕೆ ಜಿಲ್ಲಾಡಳಿತ ಸಹಕಾರ ನೀಡಬೇಕು.

- ಜಂಶೀದ್

share
Next Story
X