ಮೇ ಮೊದಲ ವಾರದಲ್ಲಿಯೇ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ: ಸಚಿವ ಬಿ.ಸಿ.ನಾಗೇಶ್

ತುಮಕೂರು: ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಇಂದಿನಿಂದ(ಮಾ.9) ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಸಚಿವರು ತಿಪಟೂರಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.
''ಕೊರೋ ನ ಬಂದಾಗಿನಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟ ಕುಸಿದಿರುವ ಕಾರಣ ಈ ಬಾರಿಯ ಪರಿಕ್ಷೆ ಸಹ ವಿದ್ಯಾರ್ಥಿಗಳಿಗೆ ಸರಳವಾಗಿ ಇರುತ್ತದೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಲ್ಟಿಪಲ್ ಚಾಯ್ಸ್ ಮಾದರಿಯಲ್ಲಿ ಪರೀಕ್ಷೆಯನ್ನು ನೀಡಲಾಗಿದೆ ಹಾಗಾಗಿ ವಿದ್ಯಾರ್ಥಿಗಳು ನಿರ್ಭೀತಿಯಿಂದ ಪರೀಕ್ಷೆ ಎದುರಿಸಬೇಕು'' ಎಂದರು.
''ಪರೀಕ್ಷಾ ಕೇಂದ್ರಗಳಲ್ಲಿ ಯಾವೆಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಅಂತಹ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಗೂ ಕೊಠಡಿಗೆ ಸಂಬಂಧಿಸಿದಂತೆ ಅವಶ್ಯಕತೆ ಇರುವಷ್ಟು ಪ್ರಶ್ನೆ ಪತ್ರಿಕೆಗಳನ್ನು ಮಾತ್ರ ರವಾನಿಸಗಲಿದ್ದು ಅದರಂತೆ ಪರೀಕ್ಷೆ ಕಟ್ಟು ನಿಟ್ಟಿನ ಕ್ರಮದೊಂದಿಗೆ ನಡೆಯುತ್ತಿದೆ '' ಎಂದರು.
''ರಾಜ್ಯದ 1,109 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಸುಮಾರು 7 ಲಕ್ಷ ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿ ಸ್ನೇಹಿಯಾಗಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ ಎಲ್ಲ ರೀತಿಯ ಸಿದ್ಧತೆಗಳನ್ನು ತೆಗೆದುಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ. ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಪರೀಕ್ಷೆ ನಡೆಸಲಾಗುವುದು'' ಎಂದು ಹೇಳಿದರು.







