Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶನಿವಾರ ಈಡಿ ಮುಂದೆ ವಿಚಾರಣೆಗೆ ಹಾಜರು:...

ಶನಿವಾರ ಈಡಿ ಮುಂದೆ ವಿಚಾರಣೆಗೆ ಹಾಜರು: ತೆಲಂಗಾಣ ಮುಖ್ಯಮಂತ್ರಿ ಪುತ್ರಿ ಕವಿತಾ

9 March 2023 7:39 PM IST
share
ಶನಿವಾರ ಈಡಿ ಮುಂದೆ ವಿಚಾರಣೆಗೆ ಹಾಜರು: ತೆಲಂಗಾಣ ಮುಖ್ಯಮಂತ್ರಿ ಪುತ್ರಿ ಕವಿತಾ

ಹೈದರಾಬಾದ್, ಮಾ. 9: ದಿಲ್ಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿ ಅನುಷ್ಠಾನ ನಿರ್ದೇಶನಾಲಯದ ವಿಚಾರಣೆಯನ್ನು ಎದುರಿಸಲು ಶನಿವಾರ ಹಾಜರಾಗುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್‌ರ ಮಗಳು ಕೆ. ಕವಿತಾ ಬುಧವಾರ ತಿಳಿಸಿದ್ದಾರೆ.

ದಿಲ್ಲಿಯಲ್ಲಿ ಅನುಷ್ಠಾನ ನಿರ್ದೇಶನಾಲಯದ ಮುಂದೆ ಗುರುವಾರ ಹಾಜರಾಗುವಂತೆ ಭಾರತ ರಾಷ್ಟ್ರ ಸಮಿತಿಯ ಶಾಸಕಿಯೂ ಆಗಿರುವ ಕವಿತಾರಿಗೆ ಸೂಚಿಸಲಾಗಿತ್ತು.

ದಿಲ್ಲಿ ಸರಕಾರದ ಮದ್ಯ ನೀತಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ, ಹೈದರಾಬಾದ್‌ನ ಉದ್ಯಮಿ ಅರುಣ್ ರಾಮಚಂದ್ರ ಪಿಳ್ಳೆಯನ್ನು ಬಂಧಿಸಿದ ಒಂದು ದಿನದ ಬಳಿಕ ಅನುಷ್ಠಾನ ನಿರ್ದೇಶನಾಲಯವು ಕವಿತಾಗೆ ಈ ಸೂಚನೆ ನೀಡಿದೆ. ಕಂಪೆನಿಯೊಂದರಲ್ಲಿ ಪಾಲುದಾರರಾಗಿರುವ ಪಿಳ್ಳೆ, ವಾಸ್ತವವಾಗಿ ಕಂಪೆನಿಯಲ್ಲಿ ‘ಬೇನಾಮಿ’ಯಾಗಿ ಕವಿತಾರನ್ನು ಪ್ರತಿನಿಧಿಸುತ್ತಿದ್ದಾರೆ ಎಂದು ಈಡಿ ಹೇಳಿಕೊಂಡಿದೆ.

ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಬೇಕೆಂದು ಆಗ್ರಹಿಸಿ ದಿಲ್ಲಿಯಲ್ಲಿ ಶುಕ್ರವಾರ ನಡೆಯಲಿರುವ ಧರಣಿಯಲ್ಲಿ ನಾನು ಭಾಗವಹಿಸಬೇಕಾಗಿದೆ ಎಂದು ಕವಿತಾ ಹೇಳಿದ್ದಾರೆ.

ಅನುಷ್ಠಾನ ನಿರ್ದೇಶನಾಲಯದ ಸಮನ್ಸ್‌ಗಳು ಕೇಂದ್ರ ಸರಕಾರದ ‘‘ಬೆದರಿಕೆ ತಂತ್ರಗಳು’’ ಎಂಬುದಾಗಿ ಅವರು ಬಂಧಿಸಿದ್ದಾರೆ. ಆದರೆ, ನಾನು ಕೇಂದ್ರದ ತನಿಖಾ ಸಂಸ್ಥೆಯೊಂದಿಗೆ ಸಂಪೂರ್ಣವಾಗಿ ಸಹಕರಿಸುವುದಾಗಿ ಹೇಳಿದ್ದಾರೆ.

ಈಡಿ ಸಮನ್ಸ್‌ಗಳಲ್ಲ, ಮೋದಿ ಸಮನ್ಸ್‌ಗಳು: ಕೆಟಿಆರ್

ಬಿಆರ್‌ಎಸ್ ಶಾಸಕಿ ಕೆ. ಕವಿತಾರಿಗೆ ನೀಡಿರುವುದು ಈಡಿ ಸಮನ್ಸ್‌ಗಳಲ್ಲ, ಅವುಗಳು ಮೋದಿ ಸಮನ್ಸ್‌ಗಳು ಎಂದು ಅವರ ಸಹೋದರ ಹಾಗೂ ತೆಲಂಗಾಣ ಸರಕಾರದ ಸಚಿವ ಕೆ.ಟಿ. ರಾಮರಾವ್ ಗುರುವಾರ ಹೇಳಿದ್ದಾರೆ.

ದಿಲ್ಲಿ ಅಬಕಾರಿ ನೀತಿಗೆ ಸಂಬಂಧಿಸಿದ ಪ್ರಕರಣದಲ್ಲಿ ವಿಚಾರಣೆ ಎದುರಿಸಲು ಹಾಜರಾಗುವಂತೆ ಅನುಷ್ಠಾನ ನಿರ್ದೇಶನಾಲಯ ಕವಿತಾರಿಗೆ ಸಮನ್ಸ್ ನೀಡಿದ ಒಂದು ದಿನದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘‘ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್‌ರ ನಾಯಕತ್ವದಲ್ಲಿ ಭಾರತ್ ರಾಷ್ಟ್ರ ಸಮಿತಿಯ ಬೆಳವಣಿಗೆಯನ್ನು ಗಮನಿಸಿ ನಮ್ಮ ವಿಧಾನ ಪರಿಷತ್ ಸದಸ್ಯೆ ಕವಿತಾರಿಗೆ ಇಡಿ ಸಮನ್ಸ್ ನೀಡಲಾಗಿದೆ. ವಾಸ್ತವವಾಗಿ ಇವುಗಳು ಮೋದಿ ಸಮನ್ಸ್‌ಗಳು. ಇವುಗಳು ಅಗ್ಗದ ಚುನಾವಣಾ ತಂತ್ರಗಳು’’ ಎಂದು ಅವರು ಹೇಳಿದರು.

ಸಿಬಿಯ, ಈಡಿ ಮತ್ತು ಆದಾಯ ತೆರಿಗೆ ಸಂಸ್ಥೆಗಳು ಕೇಂದ್ರ ಸರಕಾರದ ಕೈಯಲ್ಲಿರುವ ‘‘ಗೊಂಬೆಗಳು’’ ಎಂದು ಅವರು ಬಣ್ಣಿಸಿದರು.

ಅದಾನಿ ಗುಂಪಿನ ಬಗ್ಗೆ ಅಮೆರಿಕದ ಹಿಂಡನ್‌ಬರ್ಗ್ ರಿಸರ್ಚ್ ಮಾಡಿರುವ ಆರೋಪಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯ ವೌನವನ್ನು ಅವರು ಪ್ರಶ್ನಿಸಿದರು. ‘‘‘ಚಾಯ್ ಪೇ ಚರ್ಚಾ’ ಮತ್ತು ‘ಪರೀಕ್ಷಾ ಪೇ ಚರ್ಚಾ’ ಮುಂತಾದ ಕಾರ್ಯಕ್ರಮಗಳಿಗೆ ಮಾತ್ರ ಪ್ರಧಾನಿಗೆ ಸಮಯವಿದೆ. ಅವರು ನಿಜವಾಗಿ ಯಾವತ್ತಾದರೂ ಚಹಾ ಮಾರಿದ್ದಾರೆಯೇ ಅಥವಾ ಪರೀಕ್ಷೆ ಬರೆದಿದ್ದಾರೆಯೇ ಎನ್ನುವುದು ಯಾರಿಗೂ ಗೊತ್ತಿಲ್ಲ’’ ಎಂದು ಕೆಟಿಆರ್ ಹೇಳಿದರು.

share
Next Story
X