Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ: ಅರಣ್ಯ ಇಲಾಖೆ ಇರಿಸಿದ್ದ...

ಕುಂದಾಪುರ: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ

10 March 2023 5:36 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕುಂದಾಪುರ: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ

ಕುಂದಾಪುರ,ಮಾ.10: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಗ್ರಾಮಪಂಚಾಯತ್ ವ್ಯಾಪ್ತಿಯ ಮಾಲಾಡಿ ಎಂಬಲ್ಲಿನ ಶ್ರೀ ನಂದಿಕೇಶ್ವರ ದೇವಸ್ಥಾನ ಹಾಗೂ ಅಂಗನವಾಡಿ, ಶಾಲೆ ಪಕ್ಕದ ತೋಪಿನಲ್ಲಿ‌ ಅರಣ್ಯ ಇಲಾಖೆಯಿಟ್ಟ ಬೋನಿನಲ್ಲಿ ಗಂಡು ಚಿರತೆ ಶುಕ್ರವಾರ ಬೆಳಿಗ್ಗೆ ಸೆರೆಯಾಗಿದ್ದು ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ. ಕಳೆದ 4 ವರ್ಷದಲ್ಲಿ ಈ ತೋಪಿನಲ್ಲಿಟ್ಟ ಬೋನಿಗೆ ಬಿದ್ದ 7 ನೇ ಚಿರತೆ ಇದಾಗಿದೆ.

ತೆಕ್ಕಟ್ಟೆ ಸಮೀಪದ ಮಾಲಾಡಿಯ ತೋಪಿನಿಂದ ಮುಂದೆ ಸಾಗಿದಾಗ ಸಿಗುವ ತೆಕ್ಕಟ್ಟೆ ಗ್ರಾ.ಪಂ ಅಧ್ಯಕ್ಷೆ ಮಮತಾ ದೇವಾಡಿಗರ ಪತಿ ಸುರೇಶ್ ದೇವಾಡಿಗರ ನಿವಾಸದ ಬಳಿ ಚಿರತೆ ಪ್ರತ್ಯಕ್ಷವಾಗುತ್ತಿದ್ದು ಸಮೀಪದ ಶಾಲೆಗೆ ಬರುವ ವಿದ್ಯಾರ್ಥಿಗಳು ಕೂಡ ಚಿರತೆ ಕಾಟದಿಂದ ಭಯಭೀತರಾಗಿದ್ದರು. ನಿರಂತರ ಈ ಭಾಗದಲ್ಲಿ ಚಿರತೆ ಕಾಟವಿದ್ದರಿಂದ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು ಅರಣ್ಯ ಇಲಾಖೆ ಬೋನ್ ಇಟ್ಟು ಚಿರತೆ ಹಿಡಿಯುವ ಕಾರ್ಯಾಚರಣೆ ನಡೆಸಲು ಮುಂದಾಗಿತ್ತು. ಒಂದೂವರೆ ತಿಂಗಳ ಹಿಂದೆ ಬೋನು ಇಡಲಾಗಿದ್ದು, ಅಂದಾಜು 4-5 ವರ್ಷ ಪ್ರಾಯದ ಗಂಡು ಚಿರತೆ ಸೆರೆಯಾಗಿದೆ.

4-5 ವರ್ಷದ ಅಂತರದಲ್ಲಿ 7 ಚಿರತೆ ಸೆರೆ: ಮಾಲಾಡಿ ತೋಪಿನಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಚಿರತೆಯು ನಾಯಿ, ಜಾನುವಾರು ಸೇರಿದಂತೆ ಸಾಕುಪ್ರಾಣಿಗಳನ್ನು ಹೊತ್ತೊಯ್ದಿದೆ. ಅಲ್ಲದೆ ಹಾಡುಹಗಲೇ ಕಾಣಿಸಿಕೊಂಡು ಜನರಲ್ಲಿ ಭೀತಿ ಸೃಷ್ಟಿಸಿದೆ. ಈ ತೋಟದಲ್ಲಿ ಮೊದಲಿಗೆ 2018 ಆಗಸ್ಟ್ ತಿಂಗಳಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿತ್ತು. ಬಳಿಕ 2019 ಅ.6, ಡಿ.12, 2019, ಡಿ.24 ,2019 ರಲ್ಲಿ ಹಾಗೂ 2022 ರ ಎಪ್ರಿಲ್ ತಿಂಗಳಿನಲ್ಲಿ, 2022 ಅ.2 ರಂದು ಹಾಗೂ 2023 ಮಾ.10ರಂದು ಚಿರತೆ ಬೋನಿಗೆ ಬಿದ್ದಿದೆ.

ಆರ್.ಎಫ್.ಒ ಸ್ಪಂದನೆ: ನಿರಂತರವಾಗಿ ಚಿರತೆ ಉಪಟಳವಿರುವ ಮಾಲಾಡಿ ತೋಟದ ಬಳಿಯೇ ಸರಕಾರಿ ಶಾಲೆ, ಅಂಗನವಾಡಿ, ದೇವಸ್ಥಾನ ಹಾಗೂ ವಸತಿ ಪ್ರದೇಶವಿದ್ದು 50ಕ್ಕೂ ಅಧಿಕ ಮನೆಗಳಿದೆ. ಕಳೆದೆರಡು ದಿನದ ಹಿಂದೆಯೂ ಸತೀಶ್ ದೇವಾಡಿಗ ಅವರ ಮನೆಯಂಗಳಕ್ಕೆ ಚಿರತೆ ಬಂದಿತ್ತು. ಈ ಬಗ್ಗೆ ಆತಂಕವನ್ನು ವಲಯ ಅರಣ್ಯಾಧಿಕಾರಿಗಳ ಬಳಿ ತಿಳಿಸಿದ್ದು ರಾತ್ರಿಯೇ ಅರಣ್ಯಾಧಿಕಾರಿಗಳು,  ಸಿಬ್ಬಂದಿಗಳನ್ನು ಕಳಿಸಿ ಸ್ಥಳೀಯರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದರು. ಶುಕ್ರವಾರ ಬೆಳಿಗ್ಗೆ ಚಿರತೆ ಬೋನಿಗೆ ಬಿದ್ದಿದ್ದು ಸ್ಥಳೀಯರು ಮಾಹಿತಿ ನೀಡುತ್ತಲೇ ಮುಂಜಾನೆ ಸೈಕ್ಲಿಂಗ್ ತೆರಳಿದ್ದ ಆರ್.ಎಫ್.ಒ ಕಿರಣ್ ಬಾಬು ಸೈಕಲ್ ನಲ್ಲೆ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಚಿರತೆ ರವಾನಿಸುವಲ್ಲಿ ಕಾರ್ಯಪ್ರವೃತ್ತರಾದರು.

ಕುಂದಾಪುರ ವಲಯ ಅರಣ್ಯಾಧಿಕಾರಿ ಕಿರಣ್ ಬಾಬು, ಉಪವಲಯ ಅರಣ್ಯಾಧಿಕಾರಿ ಉದಯ್, ಸ್ಥಳೀಯ ಪ್ರಮುಖರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಸುರೇಶ್ ದೇವಾಡಿಗ, ಸತೀಶ್ ದೇವಾಡಿಗ, ತೆಕ್ಕಟ್ಟೆ ಗ್ರಾ.ಪಂ ಅಧ್ಯಕ್ಷೆ ಮಮತಾ ದೇವಾಡಿಗ, ಲಕ್ಷ್ಮಣ್ ಪೂಜಾರಿ, ಶರತ್ ಮೊದಲಾದವರು ಭೇಟಿ ನೀಡಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X