Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದಾನಿ ಗ್ರೂಪ್ ನ ಮೂರು ಕಂಪನಿ...

ಅದಾನಿ ಗ್ರೂಪ್ ನ ಮೂರು ಕಂಪನಿ ಶೇರುಗಳನ್ನು ಅಲ್ಪಾವಧಿ ನಿಗಾದಡಿ ಇರಿಸಿದ ಎನ್ಎಸ್ಇ

10 March 2023 4:45 PM IST
share
ಅದಾನಿ ಗ್ರೂಪ್ ನ ಮೂರು ಕಂಪನಿ ಶೇರುಗಳನ್ನು ಅಲ್ಪಾವಧಿ ನಿಗಾದಡಿ ಇರಿಸಿದ ಎನ್ಎಸ್ಇ

ಹೊಸದಿಲ್ಲಿ: ರಾಷ್ಟ್ರೀಯ ಶೇರು ವಿನಿಮಯ ಕೇಂದ್ರ (ಎನ್ಎಸ್ಇ)ವು ಅದಾನಿ ಎಂಟರ್ಪ್ರೈಸಸ್, ಅದಾನಿ ಪವರ್ ಮತ್ತು ಅದಾನಿ ವಿಲ್ಮರ್ ಕಂಪನಿಗಳ ಶೇರುಗಳನ್ನು ಗುರುವಾರದಿಂದ ಅಲ್ಪಾವಧಿ ಹೆಚ್ಚುವರಿ ಕಣ್ಗಾವಲು ವ್ಯವಸ್ಥೆ (ಎಎಸ್ಎಂ)ಯಡಿ ಇರಿಸಿದೆ.

ಒಂದು ತಿಂಗಳ ಕಾಲ ಎಎಸ್ಎಂ ಅಡಿ ಪರಿಶೀಲನೆಗೆ ಒಳಪಟ್ಟಿದ್ದ ಅದಾನಿ ಎಂಟರ್ಪ್ರೈಸಸ್ ನ ಶೇರುಗಳನ್ನು ಬುಧವಾರವಷ್ಟೇ ಹೊರತರಲಾಗಿತ್ತು.
ಅದಾನಿ ಗ್ರೀನ್ ಎನರ್ಜಿ ಮತ್ತು ಎನ್ಡಿಟಿವಿ ಶೇರುಗಳನ್ನು ದೀರ್ಘಾವಧಿ ಎಎಸ್ಎಂ ಅಡಿ ಮೊದಲ ಹಂತದಿಂದ ಎರಡನೇ ಹಂತಕ್ಕೆ ವರ್ಗಾಯಿಸಲಾಗಿದ್ದು, ಇದು ಸಹ ಗುರುವಾರದಿಂದಲೇ ಜಾರಿಗೊಂಡಿದೆ.

ಶೇರುಗಳ ಬೆಲೆಗಳಲ್ಲಿ ಅಧಿಕ ಏರಿಳಿತಗಳ ಸಂದರ್ಭಗಳಲ್ಲಿ ಶೇರು ವಿನಿಮಯ ಕೇಂದ್ರಗಳು ಹೂಡಿಕೆದಾರರನ್ನು ಊಹಾತ್ಮಕ ವಹಿವಾಟುಗಳಿಂದ ರಕ್ಷಿಸಲು ಅಂತಹ ಶೇರುಗಳ ಮೇಲೆ ಅಲ್ಪಾವಧಿ ಅಥವಾ ದೀರ್ಘಾವಧಿ ಹೆಚ್ಚುವರಿ ಕಣ್ಗಾವಲು ಇರಿಸುತ್ತವೆ.

ಇತ್ತೀಚಿನ ವಹಿವಾಟುಗಳಲ್ಲಿ ಅದಾನಿ ಗ್ರೂಪ್ ಕಂಪನಿಗಳ ಶೇರುಗಳ ಬೆಲೆಗಳಲ್ಲಿ ತೀವ್ರ ಏರಿಕೆಯಾದ ಹಿನ್ನೆಲೆಯಲ್ಲಿ ಅವುಗಳನ್ನು ಮರಳಿ ಎಎಸ್ಎಂ ಅಡಿ ಇರಿಸಲಾಗಿದೆ.
ಸರಣಿ ಧನಾತ್ಮಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹಿಂದಿನ ಐದು ವಹಿವಾಟು ದಿನಗಳಲ್ಲಿ ಏರುತ್ತಲೇ ಬಂದಿದ್ದ ಅದಾನಿ ಗ್ರೂಪ್ನ ಐದು ಕಂಪನಿಗಳ ಶೇರುಗಳು ಗುರುವಾರ ಅಪ್ಪರ್ ಸರ್ಕ್ಯೂಟ್ ನಲ್ಲಿ ಲಾಕ್ ಆಗಿದ್ದರೆ, ಇತರ ಶೇರುಗಳು ನಷ್ಟ ಅನುಭವಿಸಿದ್ದವು. ಗುರುವಾರ 10 ಅದಾನಿ ಗ್ರೂಪ್ ಶೇರುಗಳ ಸಂಯೋಜಿತ ಮಾರುಕಟ್ಟೆ ಮೌಲ್ಯ ಒಂಭತ್ತು ಲ.ಕೋ.ರೂ.ಗಳಾಗಿದ್ದವು.

ಕಳೆದ ವಾರ ಜಿಕ್ಯೂಜಿ ಪಾರ್ಟನರ್ಸ್ ನಾಲ್ಕು ಅದಾನಿ ಗ್ರೂಪ್ ಕಂಪನಿಗಳ ಶೇರುಗಳಲ್ಲಿ ಹೂಡಿಕೆ ಮಾಡಿದ ಬಳಿಕ 7,374 ಕೋ.ರೂ.ಗಳ ಶೇರು ಬೆಂಬಲಿತ ಪ್ರವರ್ತಕರ ಸಾಲಗಳನ್ನು ಅವಧಿಗೆ ಮುನ್ನವೇ ಮರುಪಾವತಿಸಿರುವುದಾಗಿ ಗ್ರೂಪ್ ಮಂಗಳವಾರ ಪ್ರಕಟಿಸಿತ್ತು. 500 ಮಿ.ಡಾ.ಗಳ ಬ್ರಿಡ್ಜ್ ಲೋನ್ ಅನ್ನೂ ಮರುಪಾವತಿಸಿರುವುದಾಗಿ ಅದು ಬುಧವಾರ ಪ್ರಕಟಿಸಿತ್ತು.

ಸಾಲ ಮರುಪಾವತಿಯ ಹಿನ್ನೆಲೆಯಲ್ಲಿ ಹೂಡಿಕೆದಾರರಲ್ಲಿ ಹೊಸ ಭರವಸೆ ಮೂಡಿದ್ದು ಶೇರುಗಳ ಬೆಲೆಗಳಲ್ಲಿ ಏರಿಕೆಗೆ ಕಾರಣವಾಗಿತ್ತು.

ಶುಕ್ರವಾರದ ವಹಿವಾಟಿನಲ್ಲಿ ಮಧ್ಯಾಹ್ನದ ವೇಳೆಗೆ ಅದಾನಿ ಗ್ರೀನ್,ಅದಾನಿ ಟ್ರಾನ್ಸ್ಮಿಷನ್,ಅದಾನಿ ಟೋಟಲ್ ಗ್ಯಾಸ್ನ ಶೇರುಗಳು ಅಪ್ಪರ್ ಸರ್ಕ್ಯೂಟ್ನಲ್ಲಿ ಮತ್ತು NDTV ಶೇರುಗಳು ಲೋವರ್ ಸರ್ಕ್ಯೂಟ್ನಲ್ಲಿ ಲಾಕ್ ಆಗಿದ್ದವು. ಅದಾನಿ ಪವರ್ ಹೊರತು ಪಡಿಸಿ ಇತರ ಗ್ರೂಪ್ ಕಂಪನಿಗಳ ಶೇರುಗಳ ನಷ್ಟದಲ್ಲಿದ್ದವು.

share
Next Story
X