Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಗಂಡಾಳ್ವಿಕೆಯ ಮತ್ತೊಂದು ಸಾಕ್ಷಿ

ಗಂಡಾಳ್ವಿಕೆಯ ಮತ್ತೊಂದು ಸಾಕ್ಷಿ

ನಾ. ದಿವಾಕರನಾ. ದಿವಾಕರ11 March 2023 10:02 AM IST
share
ಗಂಡಾಳ್ವಿಕೆಯ ಮತ್ತೊಂದು ಸಾಕ್ಷಿ

ಹಣೆಯಲ್ಲಿ ಕುಂಕುಮ ಇಲ್ಲ ಎಂದಕೂಡಲೇ ಗಂಡ ಬದುಕಿದ್ದಾನೆಯೇ ಎಂಬ ಪ್ರಶ್ನೆ ಮೂಡುವುದೇ ಪ್ರಾಚೀನ ಮನಸ್ಥಿತಿ ಅಲ್ಲವೇ? ಹಣೆ ಆಕೆಯದು, ಬದುಕು ಆಕೆಯದು. ತನ್ನ ಜೀವನೋಪಾಯದ ಹಾದಿಯಲ್ಲಿ ಆಕೆ ಸುರಿಸಿರಬಹುದಾದ ಬೆವರು ಹಣೆಯ ಕುಂಕುಮವನ್ನಷ್ಟೇ ಅಲ್ಲ ಆಕೆಯ ಜೀವನದ ಅಮೂಲ್ಯ ಕ್ಷಣಗಳನ್ನೂ ಅಳಿಸಿಹಾಕಿರಬಹುದಲ್ಲವೇ? ಇದು ಸಂಸದರ ಗಮನಕ್ಕೆ ಬರಬೇಕಿತ್ತಲ್ಲವೇ?

ಪಿತೃ ಪ್ರಧಾನತೆ ಮತ್ತು ಅತಿರೇಕದ ಮತಾಂಧತೆ ಒಟ್ಟಾದರೆ ಏನಾಗಬಹುದು ಎನ್ನುವುದಕ್ಕೆ ಕೋಲಾರದ ಸಂಸದ  ಮುನಿಸ್ವಾಮಿ ಸ್ಪಷ್ಟ ನಿದರ್ಶನ ಒದಗಿಸಿದ್ದಾರೆ. ಹೆಣ್ಣು ಮಕ್ಕಳು ಯಾವ ಉಡುಪು ಧರಿಸಬೇಕು, ಯಾವ್ಯಾವ ಸ್ಥಾವರಗಳಿಗೆ ಪ್ರವೇಶಿಸಬೇಕು, ಯಾವ ದೈಹಿಕ/ಜೈವಿಕ ಸ್ಥಿತಿಯಲ್ಲಿ ಪ್ರವೇಶಿಸಬೇಕು ಎಂದೆಲ್ಲಾ ಆಜ್ಞಾಪಿಸುತ್ತಿದ್ದ ಗಂಡು ಸಮಾಜ ಈಗ ಆಕೆಯ ಹಣೆಯ ಮೇಲಿನ ಬಿಂದಿ, ಚುಕ್ಕೆ, ಬೊಟ್ಟು, ತಿಲಕಗಳನ್ನೂ ನಿರ್ದೇಶಿಸಲು ಮುಂದಾಗಿದೆಯೇ? ಈ ಮಾತುಗಳು ಮಾನ್ಯ ಸಂಸದರ ಬಾಯಿಂದಲೇ ಹೊರಟಿದ್ದರೂ,  ಇದರ ಹಿಂದಿನ ಮನಸ್ಥಿತಿಗೆ ಶತಮಾನಗಳ ಪರಂಪರೆ ಇದೆ. ಒಂದು ಪುರುಷಾಧಿಪತ್ಯದ ನೆಲೆಯೂ ಇದೆ. 21ನೇ ಶತಮಾನದಲ್ಲೂ ಜೀವಂತವಾಗಿರುವ ಪಿತೃಪ್ರಧಾನತೆ ಮತ್ತು ಇದರಿಂದಲೇ ಪೋಷಿಸಲ್ಪಡುವ ಗಂಡಾಳ್ವಿಕೆಯ ಅಹಮಿಕೆಗೆ, ಸಂಪ್ರದಾಯ ಮತ್ತು ಪರಂಪರೆಗಳನ್ನು ಪೋಣಿಸಿದಾಗ ಇಂತಹ ವಿಕೃತ ಕಲ್ಪನೆಗಳು ಗರಿಗೆದರುತ್ತವೆ.

ಹೆಣ್ಣು ತನ್ನಿಚ್ಛೆಯಂತೆ ಬದುಕುವ ಹಕ್ಕನ್ನು ಈ ದೇಶದ ಸಂವಿಧಾನ ನೀಡಿದೆ. ತಾನು ಅನುಸರಿಸಲಿಚ್ಛಿಸುವ ಮತ-ಧರ್ಮವನ್ನು ಆಯ್ಕೆ ಮಾಡಿಕೊಳ್ಳುವಷ್ಟೇ, ಹೆಣ್ಣಿಗೆ ಆಯಾ ಧರ್ಮದ ಆಚರಣೆಗಳನ್ನು ಅನುಕರಿಸುವ/ ಧಿಕ್ಕರಿಸುವ ಹಕ್ಕೂ ಇರುತ್ತದೆ. ಸಂವಿಧಾನವನ್ನು ಪ್ರತಿನಿಧಿಸುವ ಮಾನ್ಯ ಸಂಸದರಿಗೆ ಕಾಣಬೇಕಾಗಿದ್ದುದು ಆಕೆಯ ಜೀವನೋಪಾಯದ ಹಾದಿಯಲ್ಲಿ ಎದುರಾಗಬಹುದಾದ ಸವಾಲುಗಳು, ಸಂಕಷ್ಟಗಳೇ ಹೊರತು ಆಕೆಯ ಬರಿದಾದ ಹಣೆ ಅಲ್ಲ.  ಹಣೆಯಲ್ಲಿ ಕುಂಕುಮ ಇಲ್ಲ ಎಂದಕೂಡಲೇ ಗಂಡ ಬದುಕಿದ್ದಾನೆಯೇ ಎಂಬ ಪ್ರಶ್ನೆ ಮೂಡುವುದೇ ಪ್ರಾಚೀನ ಮನಸ್ಥಿತಿ ಅಲ್ಲವೇ? ಹಣೆ ಆಕೆಯದು, ಬದುಕು ಆಕೆಯದು. ತನ್ನ ಜೀವನೋಪಾಯದ ಹಾದಿಯಲ್ಲಿ ಆಕೆ ಸುರಿಸಿರಬಹುದಾದ ಬೆವರು ಹಣೆಯ ಕುಂಕುಮವನ್ನಷ್ಟೇ ಅಲ್ಲ ಆಕೆಯ ಜೀವನದ ಅಮೂಲ್ಯ ಕ್ಷಣಗಳನ್ನೂ ಅಳಿಸಿಹಾಕಿರಬಹುದಲ್ಲವೇ? ಇದು ಸಂಸದರ ಗಮನಕ್ಕೆ ಬರಬೇಕಿತ್ತಲ್ಲವೇ? ತನ್ನ ಹಣೆ ಹೇಗಿರಬೇಕು ಎಂದು ನಿರ್ಧರಿಸುವ ಹಕ್ಕು ಆಕೆಗಿದೆ. ಆಳುವ ವರ್ಗದ ಪ್ರತಿನಿಧಿಯಾಗಿ ಆಕೆಯಂತಹ ಕೋಟ್ಯಂತರ ಅಸಹಾಯಕ ಮಹಿಳೆಯರ ಹಣೆಬರಹ ತಿದ್ದುವ/ಉಜ್ವಲಗೊಳಿಸುವ ಜವಾಬ್ದಾರಿ ಸಂಸದರ ಮೇಲಿರುತ್ತದೆ ಅಲ್ಲವೇ ?

ವ್ಯಕ್ತಿಗತ ಧಾರ್ಮಿಕ ಆಚರಣೆಗಳು ಮತ್ತು ಈ ಆಚರಣೆಗಳನ್ನು ಸಾಂಕೇತಿಕವಾಗಿ ಪ್ರತಿನಿಧಿಸುವ ಧಾರಣಾ ಚಿಹ್ನೆಗಳು ಹೆಣ್ಣು ಕುಲವನ್ನು ನಿರ್ಬಂಧಿಸುವ ಪ್ರಬಲ ಅಸ್ತ್ರಗಳಾಗಿಯೇ ಇತಿಹಾಸದುದ್ದಕ್ಕೂ ನಡೆದುಬಂದಿವೆ. ಗಂಡು ಸಮಾಜಕ್ಕೆ ಇರುವ ವಿನಾಯಿತಿ/ರಿಯಾಯಿತಿಗಳನ್ನು ಹೆಣ್ಣು ಕುಲಕ್ಕೆ ನೀಡುವಲ್ಲಿ ಪಿತೃಪ್ರಧಾನ ಮೌಲ್ಯಗಳು ಅಡ್ಡಿಯಾಗುತ್ತವೆ. ಪುರುಷಪ್ರಧಾನ ಸಮಾಜದ ಆಡಳಿತ ವ್ಯವಸ್ಥೆಯಲ್ಲಿ ಈ ನಿರ್ಬಂಧಕಗಳ ಮುಖಾಂತರವೇ ಹೆಣ್ಣಿನ ಮೇಲೆ ನಿಯಂತ್ರಣ ಸಾಧಿಸಲಾಗುತ್ತದೆ. ಅಂತರ್‌ರಾಷ್ಟ್ರೀಯ ಮಹಿಳಾ ದಿನದಂದೇ ಇಂತಹ ವಿಕೃತ ಪರಂಪರೆ ಮತ್ತು ಮನಸ್ಥಿತಿ ಪ್ರಕಟವಾಗಿರುವುದು ವಿಡಂಬನೆಯಷ್ಟೇ ಅಲ್ಲ ಕಾಲದ ದುರಂತವೂ ಹೌದು.

ಸನ್ಮಾನ್ಯ ಸಂಸದರು ಈ ದುರಂತವನ್ನು ಪ್ರತಿನಿಧಿಸಿದ್ದಾರೆ. ಜನಪ್ರತಿನಿಧಿಗಳಲ್ಲಿ ಸಾಂವಿಧಾನಿಕ ಮೌಲ್ಯಗಳು ಕುಸಿಯುತ್ತಿರುವಂತೆಯೇ ನೈತಿಕ ಮೌಲ್ಯಗಳೂ ಶಿಥಿಲವಾಗುತ್ತಿರುವುದರ ಸಂಕೇತವಾಗಿ ಈ ಪ್ರಸಂಗವನ್ನು ನೋಡಬೇಕಿದೆ. ಸಂಸದರ ಮಾತುಗಳು ಖಂಡನಾರ್ಹ ಆದರೆ ಈ ಹೇಳಿಕೆಯನ್ನು ಖಂಡಿಸಲೂ ಹಿಂಜರಿಯುವ ರಾಜಕೀಯ ನಾಯಕತ್ವದ ಬಗ್ಗೆ ಏನು ಹೇಳುವುದು? ಗಂಡಾಳ್ವಿಕೆಯ ಮನಸ್ಥಿತಿ ಕಲೆ-ಸಾಹಿತ್ಯ-ರಂಗಭೂಮಿಯನ್ನೂ ಆವರಿಸುತ್ತಿರುವ ಈ ಹೊತ್ತಿನಲ್ಲಿ ಈ ಪ್ರಕರಣ, ಸೂಕ್ಷ್ಮ ಸಂವೇದನೆಯ ಮನಸ್ಸುಗಳನ್ನು ಬಡಿದೆಬ್ಬಿಸಬೇಕಲ್ಲವೇ? ಇಲ್ಲಿರುವುದು ರಾಜಕೀಯ ಅಥವಾ ತತ್ವ ಸಿದ್ಧಾಂತ ಅಲ್ಲ, ನಾವು ಪ್ರಶ್ನಿಸಬೇಕಿರುವುದು ಹೆಣ್ತನವನ್ನು ಗೌರವಿಸದ ಗಂಡಾಳ್ವಿಕೆಯ ದರ್ಪ/ಅಹಮಿಕೆಗಳನ್ನು.

share
ನಾ. ದಿವಾಕರ
ನಾ. ದಿವಾಕರ
Next Story
X