Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀವು ಜೈಲಿಗೆ ಹಾಕಬಹುದು, ಆದರೆ ನನ್ನ...

ನೀವು ಜೈಲಿಗೆ ಹಾಕಬಹುದು, ಆದರೆ ನನ್ನ ಚೈತನ್ಯ ಉಡುಗಿಸಲಾರಿರಿ: ಜೈಲಿನಿಂದ ಮನೀಶ್ ಸಿಸೋಡಿಯ ಟ್ವೀಟ್

11 March 2023 7:42 PM IST
share
ನೀವು ಜೈಲಿಗೆ ಹಾಕಬಹುದು, ಆದರೆ ನನ್ನ ಚೈತನ್ಯ ಉಡುಗಿಸಲಾರಿರಿ: ಜೈಲಿನಿಂದ ಮನೀಶ್ ಸಿಸೋಡಿಯ ಟ್ವೀಟ್

ಹೊಸದಿಲ್ಲಿ, ಮಾ. 11: ನನ್ನನ್ನು ಜೈಲಿನಲ್ಲಿಟ್ಟು ತನಿಖಾ ಸಂಸ್ಥೆಯು ನನ್ನ ಚೈತನ್ಯವನ್ನು ಉಡುಗಿಸಲು ಸಾಧ್ಯವಿಲ್ಲ ಎಂದು ಆಮ್ ಆದ್ಮಿ ಪಕ್ಷ (ಆಪ್)ದ ನಾಯಕ ಮನೀಶ್ ಸಿಸೋಡಿಯ ಶನಿವಾರ ಟ್ವೀಟ್ ಮಾಡಿದ್ದಾರೆ.

ದಿಲ್ಲಿ ಸರಕಾರದ ಮದ್ಯ ನೀತಿಯಲ್ಲಿ ನಡೆದಿದೆಯೆನ್ನಲಾದ ಹಗರಣಕ್ಕೆ ಸಂಬಂಧಿಸಿ ಅವರನ್ನು ಸಿಬಿಐ ಕಳೆದ ತಿಂಗಳು ಬಂಧಿಸಿತ್ತು. ಸಿಬಿಐ ಕಸ್ಟಡಿ ಮುಗಿದ ಬಳಿಕ ಅವರು ಈಗ ಅವರು ಅನುಷ್ಠಾನ ನಿರ್ದೇಶನಾಲಯದ (ಇಡಿ) ಕಸ್ಟಡಿಯಲ್ಲಿದ್ದಾರೆ.

‘‘ಸರ್, ನನ್ನನ್ನು ಜೈಲಿನಲ್ಲಿ ಹಾಕುವ ಮೂಲಕ ನೀವು ನನಗೆ ಕಷ್ಟ ಕೊಡಬಹುದು. ಆದರೆ, ನೀವು ನನ್ನ ಚೈತನ್ಯವನ್ನು ಉಡುಗಿಸಲು ಸಾಧ್ಯವಿಲ್ಲ. ಬ್ರಿಟಿಶರು ಕೂಡ ಸ್ವಾತಂತ್ರ ಹೋರಾಟಗಾರರಿಗೆ ಕಷ್ಟ ಕೊಟ್ಟಿದ್ದರು, ಆದರೆ ಅವರ ಚೈತನ್ಯ ಉಡುಗಿರಲಿಲ್ಲ’’ ಎಂಬುದಾಗಿ ಸಿಸೋಡಿಯ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ದಿಲ್ಲಿ ಮದ್ಯ ನೀತಿ ಪ್ರಕರಣದಲ್ಲಿ ನ್ಯಾಯಾಲಯವೊಂದು ಅವರನ್ನು ಏಳು ದಿನಗಳ ಅನುಷ್ಠಾನ ನಿರ್ದೇಶನಾಲಯದ ಕಸ್ಟಡಿಗೆ ನೀಡಿದ ಒಂದು ದಿನದ ಬಳಿಕ ಅವರು ಈ ಟ್ವೀಟ್ ಮಾಡಿದ್ದಾರೆ.

ಅನುಷ್ಠಾನ ನಿರ್ದೇಶನಾಲಯವು ಆಪ್ ನಾಯಕನನ್ನು ತಿಹಾರ್ ಜೈಲಿನಲ್ಲಿ ಎರಡು ದಿನಗಳ ಕಾಲ ಪ್ರಶ್ನಿಸಿದ ಬಳಿಕ ಗುರುವಾರ ಅವರನ್ನು ಬಂಧಿಸಿತ್ತು. ಅದಕ್ಕೂ ಮೊದಲು, ಅಂದರೆ ಫೆಬ್ರವರಿ 26ರಂದು ಸಿಬಿಐಯು ಇದೇ ಪ್ರಕರಣದಲ್ಲಿ ಅವರನ್ನು ಬಂಧಿಸಿತ್ತು.

ಶುಕ್ರವಾರ ಸಿಸೋಡಿಯರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, ಅವರ ವಕೀಲರು, ಅನುಷ್ಠಾನ ನಿರ್ದೇಶನಾಲಯದ ನಡೆಯನ್ನು ಟೀಕಿಸಿದರು.

ಕಾನೂನಿನ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದೆ ಜನರನ್ನು ಬಂಧಿಸುವುದನ್ನು ಅನುಷ್ಠಾನ ನಿರ್ದೇಶನಾಲಯವು ತನ್ನ ಹಕ್ಕು ಎಂಬುದಾಗಿ ಭಾವಿಸಿದೆ ಎಂದು ಅವರು ವಾದಿಸಿದರು. ‘‘ಜನರನ್ನು ಬಂಧಿಸುವುದು ಈಗ ತನಿಖಾ ಸಂಸ್ಥೆಗಳಿಗೆ ಫ್ಯಾಶನ್ ಆಗಿದೆ. ಇಂಥ ಪ್ರವೃತ್ತಿಯ ವಿರುದ್ಧ ನ್ಯಾಯಾಲಯಗಳು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು’’ ಎಂದು ಸಿಸೋಡಿಯರ ವಕೀಲ ದಯನ್ ಕೃಷ್ಣ ವಿಶೇಷ ನ್ಯಾಯಾಲಯದ ಮುಂದೆ ವಾದಿಸಿದರು.

ಪಕ್ಷಕ್ಕೆ ಕೆಟ್ಟ ಹೆಸರು ತರುವುದೇ ಸರಕಾರದ ಉದ್ದೇಶ: ಆಪ್

ಮನೀಶ್ ಸಿಸೋಡಿಯರ ಇಡಿ ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಆಪ್, ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಏಕೈಕ ಉದ್ದೇಶ ಪಕ್ಷಕ್ಕೆ ಕೆಟ್ಟ ಹೆಸರು ತರುವುದಾಗಿದೆ ಎಂದು ಆರೋಪಿಸಿದೆ. ‘‘ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದ್ದ ಪ್ರತಿಪಕ್ಷ ನಾಯಕರನ್ನು ಬಿಜೆಪಿ ತನ್ನ ಪಕ್ಷಕ್ಕೆ ಸೇರ್ಪಡೆಗೊಳಿಸಿದೆ. ಅವರ ಪೈಕಿ ಹಿಮಂತ ಬಿಸ್ವ ಶರ್ಮ, ಸುವೇಂದು ಅಧಿಕಾರಿ, ಮುಕುಲ್ ರಾಯ್, ನಾರಾಯಣ ರಾಣೆ, ಬಿ.ಎಸ್. ಯಡಿಯೂರಪ್ಪ ಮತ್ತು ಶಿವರಾಜ್ ಚೌಹಾಣ್ ಮುಂತಾದವರಿಗೆ ಅಧಿಕಾರವನ್ನೂ ನೀಡಿದೆ’’ ಎಂದು ಆಪ್ ಸಂಸದ ಸಂಜಯ್ ಸಿಂಗ್ ಹೇಳಿದರು.

share
Next Story
X