Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಿಶೋರಿಲಾಲ್ ಮೀನಾ ಬಂಧನಕ್ಕೆ ಖಂಡನೆ:...

ಕಿಶೋರಿಲಾಲ್ ಮೀನಾ ಬಂಧನಕ್ಕೆ ಖಂಡನೆ: ಜೈಪುರದಲ್ಲಿ ಹಿಂಸೆಗೆ ತಿರುಗಿದ ಬಿಜೆಪಿ ಪ್ರತಿಭಟನೆ

11 March 2023 7:49 PM IST
share
ಕಿಶೋರಿಲಾಲ್ ಮೀನಾ ಬಂಧನಕ್ಕೆ ಖಂಡನೆ: ಜೈಪುರದಲ್ಲಿ ಹಿಂಸೆಗೆ ತಿರುಗಿದ ಬಿಜೆಪಿ ಪ್ರತಿಭಟನೆ

ಜೈಪುರ,ಮಾ.11: ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪುಲ್ವಾಮಾದ ಹುತಾತ್ಮ ಯೋಧರ ಪತ್ನಿಯರು ನಡೆಸುತ್ತಿದ್ದ ಧರಣಿಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ನಾಯಕ ಕಿಶೋರಿಲಾಲ್ ಮೀನಾ ಅವರ ಬಂಧನವನ್ನು ಪ್ರತಿಭಟಿಸಿ ಪಕ್ಷದ ಕಾರ್ಯಕರ್ತರು ಶನಿವಾರ ಜೈಪುರದಲ್ಲಿ ಪ್ರತಿಭಟನೆ ನಡೆಸಿದರು.

ಬಿಜೆಪಿ ಕಾರ್ಯಕರ್ತರು ಇಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನಿವಾಸದತ್ತ ಜಾಥಾ ನಡೆಸಿದಾಗ ಪ್ರತಿಭಟನೆಯು ಹಿಂಸಾತ್ಮಕ ರೂಪವನ್ನು ಪಡೆದುಕೊಂಡಿತು. ಉದ್ರಿಕ್ತ ಪ್ರತಿಭಟನಕಾರರು ಕಲ್ಲೂತೂರಾಟ ನಡೆಸಿದರು ಹಾಗೂ ತಡೆಬೇಲಿಗಳನ್ನು ಕೆಡವಿಹಾಕಿದರು.ಅವರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದರು.

ತಮ್ಮ ಕುಟುಂಬದ ಸದಸ್ಯರಿಗೆ ಉದ್ಯೋಗ ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಯೋಧರ ವಿಧವಾ ಪತ್ನಿಯರು, ಕಳೆದ ಎರಡುವಾರಗಳಿಂದ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವ ಜೈಪುರ ನಿವಾಸದ ಹೊರಗೆ ಧರಣಿ ನಡೆಸುತ್ತಿದ್ದರು. ಶುಕ್ರವಾರ ಅವರನ್ನು ಪೊಲೀಸರು ಸ್ಥಳದಿಂದ ತೆರವುಗೊಳಿಸಿದ್ದರು ಹಾಗೂ ಅವರೆಲ್ಲರನ್ನೂ ಅವರ ನಿವಾಸಗಳ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿದ್ದರು.

ಅಶೋಕ್ ಗೆಹ್ಲೋಟ್ ಅವರು ಶನಿವಾರ ಈ ಹಿಂದೆ ಸೇನಾ ಕಾರ್ಯಾಚರಣೆಗಳಲ್ಲಿ ಹುತಾತ್ಮರಾದ ಯೋಧರ ವಿಧವಾ ಪತ್ನಿಯರನ್ನು ಭೇಟಿಯಾದರು. ಸರಕಾರವು ಹುತಾತ್ಮ ಯೋಧರ ಮಕ್ಕಳಿಗಷ್ಟೇ ಉದ್ಯೋಗವನ್ನು ನೀಡಬೇಕೆಂದು ಈ ಸಂದರ್ಭದಲ್ಲಿ ತಿಳಿಸಿದರು. ಆದರೆ ಫುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ವಿಧವಾ ಪತ್ನಿಯರು ಗೆಹ್ಲೋಟ್ ಅವರನ್ನು ಭೇಟಿಯಾಗಲಿಲ್ಲ.

ಈ ಪೊಲೀಸ್ ಕಾರ್ಯಾಚರಣೆಯು ಹುತಾತ್ಮ ಯೋಧರ ವಿಧವಾ ಪತ್ನಿಯರಿಗೆ ಮಾಡಿದ ಅವಮಾನವೆಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಈ ಮಧ್ಯೆ ಟೊಂಕ್ ನಗರಕ್ಕೆ ಭೇಟಿ ನೀಡಿರುವ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಹೇಳಿಕೆಯೊಂದನ್ನು ನೀಡಿ, ಹುತಾತ್ಮ ಯೋಧರ ವಿಧವಾ ಪತ್ನಿಯರ ವಿಷಯವನ್ನು ಸಂವೇದನೆಯೊಂದಿಗೆ ಆಲಿಸಲಾಗುವುದೆಂದು ತಿಳಿಸಿದರು.

‘‘ ರಸ್ತೆಗಳು, ಮನೆಗಳ ನಿರ್ಮಾಣ ಹಾಗೂ ಪ್ರತಿಮೆಗಳ ಸ್ಥಾಪನೆಯಂತಹ ವಿಧವಾ ಮಹಿಳೆಯರ ಬೇಡಿಕೆಗಳನ್ನು ನಾವು ಈಡೇರಿಸಬಹುದೆಂದು ನಾನು ಈಗಲೂ ನಂಬಿದ್ದೇನೆ. ಹುತಾತ್ಮ ಯೋಧರ ವಿಧವಾ ಪತ್ನಿಯರ ಬೇಡಿಕೆಗಳನ್ನು ಆಲಿಸಲು ನಾವು ಸಿದ್ಧರಿಲ್ಲವೆಂಬ ಸಂದೇಶವು ಹೊರಗೆ ಹೋಗಕೂಡದು. ಅವರು ಮಂಡಿಸಿದ ವಿಷಯಗಳನ್ನು ನಾವು ಒಪ್ಪಲಿ ಅಥವಾ ಇಲ್ಲದೆ ಇರಲಿ, ಅಹಮಿಕೆಯನ್ನು ಬದಿಗಿಟ್ಟು ಅವರ ಬೇಡಿಕೆಗಳಿಗೆ ಕಿವಿಗೊಡಬೇಕಾಗಿದೆ’’ ಎಂದು ಹೇಳಿದ್ದಾರೆ.

share
Next Story
X