ಉಡುಪಿ: ಕಾಂಗ್ರೆಸ್ ಬ್ಯಾನರ್ ಹರಿದ ಕಿಡಿಗೇಡಿಗಳು; ಕೃತ್ಯ ಸಿಸಿಟಿವಿಯಲ್ಲಿ ಸೆರೆ
ಉಡುಪಿ: ಕಾಂಗ್ರೆಸ್ ವತಿಯಿಂದ 80 ಬಡಗುಬೆಟ್ಟು ಗ್ರಾಮದ ರಾಜೀವನಗರದಲ್ಲಿ ಅಳವಡಿಸಿರುವ ʼಕಾಪುವಿಗಾಗಿ ಕಾಂಗ್ರೆಸ್ʼ ಕಾರ್ಯಕ್ರಮದ ಬ್ಯಾನರ್ನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ನಡೆದಿದೆ.
ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳಾದ ಗೃಹ ಲಕ್ಷ್ಮೀ, ಅನ್ನ ಭಾಗ್ಯ, ಉಚಿತ ವಿದ್ಯುತ್ ಯೋಜನೆಯ ಜೊತೆಗೆ ಕಾಪುವಿಗಾಗಿ ಕಾಂಗ್ರೆಸ್ ಎಂಬ ಕಾರ್ಯಕ್ರಮದ ಬ್ಯಾನರ್ನ್ನು ರಾಜೀವನಗರದ ಬಸ್ ನಿಲ್ದಾಣ ಬಳಿ ಅಳವಡಿಸಲಾಗಿತ್ತು. ಈ ಬ್ಯಾನರ್ ಅನ್ನು ದುಷ್ಕರ್ಮಿಗಳು ಹರಿದು ಹಾಕಿದ್ದಾರೆ.
ಕಿಡಿಗೇಡಿಗಳು ಬ್ಯಾನರ್ ಹರಿಯುವ ದೃಶ್ಯ ಅಂಗಡಿಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ ಅಸ್ಪಷ್ಟವಾಗಿರುವುದರಿಂದ ಕಿಡಿಗೇಡಿಗಳ ಗುರುತು ಪತ್ತೆಯಾಗಿಲ್ಲ. ಈ ಘಟನೆಯ ಬಗ್ಗೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Next Story