Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವಸಂಸ್ಥೆಯ ಅಜೆಂಡಾದಲ್ಲಿ ಕಾಶ್ಮೀರ...

ವಿಶ್ವಸಂಸ್ಥೆಯ ಅಜೆಂಡಾದಲ್ಲಿ ಕಾಶ್ಮೀರ ವಿಷಯ ಸೇರ್ಪಡೆ ಸುಲಭವಲ್ಲ: ಭುಟ್ಟೊ

11 March 2023 9:36 PM IST
share
ವಿಶ್ವಸಂಸ್ಥೆಯ ಅಜೆಂಡಾದಲ್ಲಿ ಕಾಶ್ಮೀರ ವಿಷಯ ಸೇರ್ಪಡೆ ಸುಲಭವಲ್ಲ: ಭುಟ್ಟೊ

ವಿಶ್ವಸಂಸ್ಥೆ, ಮಾ.11: ವಿಶ್ವಸಂಸ್ಥೆಯಲ್ಲಿ ಚರ್ಚೆಗೆ ಎತ್ತಿಕೊಳ್ಳುವ ಪ್ರಮುಖ ಅಜೆಂಡಾಗಳ ಪಟ್ಟಿಯಲ್ಲಿ ಕಾಶ್ಮೀರದ ವಿಷಯವನ್ನು ಸೇರ್ಪಡೆಗೊಳಿಸುವುದು ಅತ್ಯಂತ ಕಷ್ಟದ ಕಾರ್ಯವಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಝರ್ದಾರಿ ಒಪ್ಪಿಕೊಂಡಿದ್ದಾರೆ.

ವಿಶ್ವಸಂಸ್ಥೆಯಲ್ಲಿ `ಮಹಿಳಾ ಸ್ಥಿತಿಗತಿಯ' ಕುರಿತ  ಅಧಿವೇಶನದ ನೇಪಥ್ಯದಲ್ಲಿ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು `ವಿಶ್ವಸಂಸ್ಥೆಯಲ್ಲಿ ಕಾಶ್ಮೀರದ ಕುರಿತು ಪಾಕಿಸ್ತಾನದ ಪ್ರಸ್ತಾವನೆ ಅಥವಾ ಕಾರ್ಯಸೂಚಿಗೆ ಸದಸ್ಯ ದೇಶಗಳಿಂದ ಯಾವುದೇ ಬೆಂಬಲ ಪಡೆಯಲು ತಮ್ಮ ದೇಶ ವಿಫಲವಾಗಿದೆ' ಎಂದರು. ಈ ಸಂದರ್ಭ ಭಾರತದ ಬಗ್ಗೆ ಪರೋಕ್ಷವಾಗಿ ಉಲ್ಲೇಖಿಸುವಾಗ ಮೊದಲು `ನಮ್ಮ ಮಿತ್ರದೇಶ' ಎಂದರು, ಬಳಿಕ ಸಾವರಿಸಿಕೊಂಡು `ನಮ್ಮ ನೆರೆದೇಶ' ಎಂಬ ಪದ ಬಳಸಿದರು.

ಫೆಲೆಸ್ತೀನ್ ಬಿಕ್ಕಟ್ಟು ಮತ್ತು ಕಾಶ್ಮೀರದ ವಿಷಯದಲ್ಲಿ ಸಮಾನತೆ ಇದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಭುಟ್ಟೊ ` ನಿಮ್ಮ ಹೋಲಿಕೆಯು ತುಂಬಾ ಸಮರ್ಥನೀಯವಾಗಿದೆ ಎಂದು ಭಾವಿಸುತ್ತೇನೆ. ಕಾಶ್ಮೀರದ ಜನರ ದುರವಸ್ಥೆ ಮತ್ತು ಫೆಲೆಸ್ತೀನೀಯರ ದುಸ್ಥಿತಿಯ  ನಡುವೆ ಅನೇಕ ಸಾಮ್ಯತೆಯಿದೆ. ಎರಡೂ ವಿಷಯಗಳನ್ನು  ವಿಶ್ವಸಂಸ್ಥೆ ಗಮನಿಸದೆ ಉಳಿದಿದೆ ಎಂದು ಹೇಳುವುದು ನ್ಯಾಯೋಚಿತವಾಗಿದೆ. 

ಫೆಲೆಸ್ತೀನ್ ಬಿಕ್ಕಟ್ಟಿನ ಕುರಿತು ಮಾತ್ರವಲ್ಲ, ಕಾಶ್ಮೀರದ ವಿಷಯದ ಬಗ್ಗೆಯೂ ವಿಶ್ವಸಂಸ್ಥೆ ಹೆಚ್ಚಿನ ಗಮನ ನೀಡಬೇಕಾಗಿ ನಾವು ಬಯಸುತ್ತೇವೆ' ಎಂದರು. ಜತೆಗೆ, ಒಂದು ವೇಳೆ ವಿಶ್ವಸಂಸ್ಥೆಯ ವೇದಿಕೆಯಲ್ಲಿ ಚರ್ಚೆಗೆ ಬಂದರೂ, ನಮ್ಮ ಮಿತ್ರದೇಶ.. ನಮ್ಮ.. ನೆರೆದೇಶವು ಇದನ್ನು ಬಲವಾಗಿ ಆಕ್ಷೇಪಿಸುತ್ತದೆ. ಅವರ ಅಬ್ಬರದ ಆಕ್ಷೇಪದಿಂದ ವಾಸ್ತವಾಂಶ ಮರೆಗೆ ಸರಿಯುತ್ತದೆ. ಇದು ಅಂತರಾಷ್ಟ್ರೀಯ ಸಮುದಾಯಕ್ಕೆ ಸಂಬಂಧಿಸಿದ ವಿವಾದಿತ ವಿಷಯವಲ್ಲ ಎಂದು ಹೇಳಲು ಪ್ರಯತ್ನಿಸುತ್ತಾರೆ.   ನೆರೆರಾಷ್ಟ್ರದ ಒತ್ತಡ ತಂತ್ರದಿಂದಾಗಿ ವಿಶ್ವಸಂಸ್ಥೆಯ ಅಜೆಂಡಾದಲ್ಲಿ ಕಾಶ್ಮೀರದ ವಿಷಯವನ್ನು ಸೇರಿಸಲು ನಮಗೆ ಕಷ್ಟವಾಗುತ್ತಿದೆ ಎಂದು ಭುಟ್ಟೋ ಹೇಳಿದ್ದಾರೆ.

ಸತ್ಯವನ್ನು ಅರ್ಥಮಾಡಿಸಲು ನಾವು ಇದುವರೆಗೆ ವಿಫಲವಾಗಿದ್ದರೂ ನಮ್ಮ ಪ್ರಯತ್ನವನ್ನು ಮುಂದುವರಿಸಲಿದ್ದೇವೆ. ವಿಶ್ವಸಂಸ್ಥೆ ಭದ್ರತಾ ಮಂಡಳಿ ಅಥವಾ ಇತರ ವೇದಿಕೆಗಳಲ್ಲಿ ಈ ಕುರಿತು ಗಮನ ಸೆಳೆಯುವ ಪ್ರಯತ್ನ ಮುಂದುವರಿಯಲಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವರು ಹೇಳಿದ್ದಾರೆ.  

share
Next Story
X